ಸತ್ಯೇಂದ್ರ ಜೈನ್ online desk
ದೇಶ

ಸತ್ಯೇಂದ್ರ ಜೈನ್ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ

ಅಕ್ರಮ ಹಣವರ್ಗಾವಣೆ ಆರೋಪದಲ್ಲಿ ಬಂಧನದಲ್ಲಿರುವ ಆಮ್ ಆದ್ಮಿ ಪಕ್ಷದ ನಾಯಕ ಸತ್ಯೇಂದ್ರ ಜೈನ್ ಮಧ್ಯಂತರ ಜಾಮೀನು ಅರ್ಜಿಯನ್ನು ದೆಹಲಿಯ ನ್ಯಾಯಾಲಯವೊಂದು ತಿರಸ್ಕರಿಸಿದೆ.

ನವದೆಹಲಿ: ಅಕ್ರಮ ಹಣವರ್ಗಾವಣೆ ಆರೋಪದಲ್ಲಿ ಬಂಧನದಲ್ಲಿರುವ ಆಮ್ ಆದ್ಮಿ ಪಕ್ಷದ ನಾಯಕ ಸತ್ಯೇಂದ್ರ ಜೈನ್ ಮಧ್ಯಂತರ ಜಾಮೀನು ಅರ್ಜಿಯನ್ನು ದೆಹಲಿಯ ನ್ಯಾಯಾಲಯವೊಂದು ತಿರಸ್ಕರಿಸಿದೆ.

ಗಾಯಗೊಂಡ ಪತ್ನಿ ಹಾಗೂ ಅನಾರೋಗ್ಯಕ್ಕೀಡಾಗಿರುವ ಮಗಳ ಕಾಳಜಿ ವಹಿಸುವುದಕ್ಕಾಗಿ ಸತ್ಯೇಂದ್ರ ಜೈನ್ 4 ವಾರಗಳ ಮಧ್ಯಂತರ ಜಾಮೀನು ಅರ್ಜಿ ಕೋರಿದ್ದರು.

ಜೈನ್ ಅರ್ಜಿಯ ಪ್ರಕಾರ, ಪ್ರಕರಣದ ಆರೋಪಿಯೂ ಆಗಿರುವ ಜೈನ್ ಪತ್ನಿ ಪೂನಮ್ ಜೈನ್, ಬಲಗಾಲಿನ ಮೂಳೆ ಮುರಿದಿದ್ದು, ನಿರಂತರವಾಗಿ ವೈಯಕ್ತಿಕವಾಗಿ ಸಹಾಯ ಮಾಡುವವರು ಅಗತ್ಯವಿದ್ದಾರೆ. ಮಗಳಿಗೂ ನಿರಂತರವಾಗಿ ಕಾಳಜಿ ವಹಿಸುವಷ್ಟು ಅನಾರೋಗ್ಯ ಉಂಟಾಗಿದೆ.

'ಅರ್ಜಿದಾರರ (ಜೈನ್) ಪತ್ನಿ ತನ್ನನ್ನು ನೋಡಿಕೊಳ್ಳುವ ಮತ್ತು ಇತರ ವ್ಯವಹಾರಗಳನ್ನು ನಿರ್ವಹಿಸುವುದರ ಹೊರತಾಗಿ, ತನ್ನ ಪ್ರಸ್ತುತ ಪರಿಸ್ಥಿತಿಯ ಕಾರಣದಿಂದಾಗಿ ತನ್ನ ಕಿರಿಯ ಮಗಳನ್ನು ನೋಡಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಮತ್ತೋರ್ವ ಮಗಳು ಮದುವೆಯಾಗಿ ತನ್ನ ಸಾಂಸಾರಿಕ ಮನೆಯಲ್ಲಿಯೇ ಇದ್ದು, 7 ತಿಂಗಳ ಮಗುವನ್ನು ನೋಡಿಕೊಳ್ಳಲು ಕುಟುಂಬದಲ್ಲಿ ಆಕೆಯ ಬೆಂಬಲಕ್ಕೆ ಬೇರೆ ಯಾರೂ ಇಲ್ಲ,' ಎಂದು ಅರ್ಜಿಯಲ್ಲಿ ತಿಳಿಸಲಾಗಿತ್ತು.

ಅರವಿಂದ್ ಕೇಜ್ರಿವಾಲ್ ಸರ್ಕಾರದ ಮಾಜಿ ಕ್ಯಾಬಿನೆಟ್ ಸಚಿವ ಜೈನ್ ಅವರನ್ನು ನಾಲ್ಕು ಕಂಪನಿಗಳ ಮೂಲಕ ಹಣ ವರ್ಗಾವಣೆ ಮಾಡಿದ ಆರೋಪದ ಮೇಲೆ ಮೇ 30, 2022 ರಂದು ಜಾರಿ ನಿರ್ದೇಶನಾಲಯ ಬಂಧಿಸಿತ್ತು,

ಭ್ರಷ್ಟಾಚಾರ ತಡೆ ಕಾಯ್ದೆಯಡಿ 2017ರಲ್ಲಿ ಜೈನ್ ವಿರುದ್ಧ ಸಿಬಿಐ ಎಫ್‌ಐಆರ್ ದಾಖಲಿಸಿದ ಆಧಾರದ ಮೇಲೆ ಜೈನ್ ಅವರನ್ನು ಬಂಧಿಸಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

SCROLL FOR NEXT