ಅದಾನಿ 
ದೇಶ

ಅದಾನಿಗೆ ಬಿಗ್ ರಿಲೀಫ್: ಮುಂದ್ರಾ ಭೂಮಿ ಸರ್ಕಾರಕ್ಕೆ ಹೋಗಬೇಕಾಗಿಲ್ಲ; ಗುಜರಾತ್ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ತಡೆ

ಅದಾನಿ ಸಂಸ್ಥೆಗೆ 231 ಎಕರೆ ಗೋಮಾಳ ಭೂಮಿ ಮಂಜೂರು ಮಾಡುವ ನಿರ್ಧಾರದ ವಿರುದ್ಧ ಕಚ್ ಜಿಲ್ಲೆಯ ನವಿನಾಲ್ ಗ್ರಾಮದ ನಿವಾಸಿಗಳು ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು (ಪಿಐಎಲ್) ಸಲ್ಲಿಸಿದ್ದರು.

ನವದೆಹಲಿ: ಮುಂದ್ರಾ ಬಂದರಿನ ಬಳಿ 2005 ರಲ್ಲಿ ಅದಾನಿ ಗ್ರೂಪ್ ಕಂಪನಿಗೆ ನೀಡಲಾದ ಸುಮಾರು 108 ಹೆಕ್ಟೇರ್ ಗೋಮಾಳ ಭೂಮಿಯನ್ನು ಹಿಂಪಡೆಯುವ ಪ್ರಕ್ರಿಯೆಯನ್ನು ಪುನರಾರಂಭಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸುವ ಗುಜರಾತ್ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ಬುಧವಾರ ತಡೆ ನೀಡಿದೆ.

ಅದಾನಿ ಬಂದರು ಮತ್ತು ವಿಶೇಷ ಆರ್ಥಿಕ ವಲಯ ಲಿಮಿಟೆಡ್ ಸಲ್ಲಿಸಿದ ಅರ್ಜಿಯನ್ನು ಪರಿಗಣಿಸಿದ ನ್ಯಾಯಮೂರ್ತಿಗಳಾದ ಬಿ ಆರ್ ಗವಾಯಿ ಮತ್ತು ಕೆ ವಿ ವಿಶ್ವನಾಥನ್ ಅವರಿದ್ದ ನ್ಯಾಯ ಪೀಠ, ನ್ಯಾಯದ ಹಿತಾಸಕ್ತಿಯಿಂದ ಹೈಕೋರ್ಟ್ ಆದೇಶವನ್ನು ತಡೆಯುವ ಅಗತ್ಯವಿದೆ ಎಂದು ಹೇಳಿತು.

2005 ರಲ್ಲಿ ಅದಾನಿ ಗ್ರೂಪ್ ಕಂಪನಿಗೆ ನೀಡಲಾದ ಸುಮಾರು 108 ಹೆಕ್ಟೇರ್ ಗೋಮಾಳ ಭೂಮಿಯನ್ನು ಹಿಂಪಡೆಯುವುದಾಗಿ ಜುಲೈ 5 ರಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ತಿಳಿಸಿತ್ತು. ಗುಜರಾತ್ ಕಂದಾಯ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯವರ ಅಫಿಡವಿಟ್ ಪರಿಗಣಿಸಿ ಕಾನೂನಿನ ಪ್ರಕಾರ, ಹಿಂದಕ್ಕೆ ಪಡೆಯುವ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಸಂಬಂಧಿಸಿದ ಪ್ರಾಧಿಕಾರ, ಅಧಿಕಾರಿಗಳು ನಮಗೆ ಅಗತ್ಯವಿದೆ ಎಂದು ಹೈಕೋರ್ಟ್ ಆದೇಶ ನೀಡಿ ಜುಲೈ 26 ಕ್ಕೆ ಪ್ರಕರಣವನ್ನು ಮುಂದೂಡಿತ್ತು.

ಅದಾನಿ ಸಂಸ್ಥೆಗೆ 231 ಎಕರೆ ಗೋಮಾಳ ಭೂಮಿ ಮಂಜೂರು ಮಾಡುವ ನಿರ್ಧಾರದ ವಿರುದ್ಧ ಕಚ್ ಜಿಲ್ಲೆಯ ನವಿನಾಲ್ ಗ್ರಾಮದ ನಿವಾಸಿಗಳು ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು (ಪಿಐಎಲ್) ಸಲ್ಲಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT