ಸಾಂದರ್ಭಿಕ ಚಿತ್ರ  
ದೇಶ

ಜುಲೈ 23ಕ್ಕೆ ಕೇಂದ್ರ ಬಜೆಟ್ ಮಂಡನೆ: ನಿರುದ್ಯೋಗ, ಹಣದುಬ್ಬರ, ತೆರಿಗೆ ಸುಧಾರಣೆಗೆ ಮೋದಿ 3.0 ಸರ್ಕಾರ ಆದ್ಯತೆ?

ಈ ಬಾರಿಯ ಕೇಂದ್ರ ಬಜೆಟ್‌ನಲ್ಲಿ ಆರೋಗ್ಯ, ಶಿಕ್ಷಣ ಮತ್ತು ಗ್ರಾಮೀಣಾಭಿವೃದ್ಧಿಯನ್ನು ಒಳಗೊಂಡ ಸಾಮಾಜಿಕ ವಲಯದ ಯೋಜನೆಗಳಿಗೆ ಹೆಚ್ಚಿನ ಹಣ ವಿನಿಯೋಗವಾಗುವ ನಿರೀಕ್ಷೆ ಇದೆ.

ನವದೆಹಲಿ: ಕೇಂದ್ರ ಸರ್ಕಾರವು ಜುಲೈ 23 ರಂದು ಸಂಸತ್ತಿನಲ್ಲಿ 2024-25 ರ ಬಜೆಟ್ ನ್ನು ಮಂಡಿಸಲಿದೆ. ಈ ಬಾರಿಯ ಬಜೆಟ್ ಮಂಡನೆಯಲ್ಲಿ ಕಳೆದ ಲೋಕಸಭೆ ಚುನಾವಣೆಯಲ್ಲಿ ಜನರ ತೀರ್ಪನ್ನು ಗಮನಿಸಿ ಅದಕ್ಕೆ ವಿಶೇಷ ಒತ್ತು ಕೊಡುವ ಸಾಧ್ಯತೆಯಿದೆ.

ಮೋದಿ 3.0 ಎನ್ ಡಿಎ ಸರ್ಕಾರ ಅಧಿಕಾರಕ್ಕೆ ಬಂದರೂ ಸಹ ಚುನಾವಣೆಯಲ್ಲಿ ದೇಶದ ಜನರು ನಿರುದ್ಯೋಗ, ಹೆಚ್ಚಿದ ಹಣದುಬ್ಬರ ಮತ್ತು ಪ್ರತಿಕೂಲವಾದ ತೆರಿಗೆ ನೀತಿಗಳಂತಹ ಸಮಸ್ಯೆಗಳ ಬಗ್ಗೆ ಹೆಚ್ಚು ಗಮನ ಹರಿಸಿದ್ದಾರೆ. ಈ ಆರ್ಥಿಕ ಸಮಸ್ಯೆಗಳು ಜನರನ್ನು ನೋಯಿಸುತ್ತಿವೆ, ಅವುಗಳನ್ನು ಬಗೆಹರಿಸಲು ಬಜೆಟ್ ಸೂಕ್ತ ವೇದಿಕೆಯಾಗಿದೆ.

2024-25ರ ಪೂರ್ಣ ಬಜೆಟ್‌ ನಲ್ಲಿ ಆದಾಯ ತೆರಿಗೆ ಸ್ಲ್ಯಾಬ್‌ಗಳಿಗೆ ಬದಲಾವಣೆಗಳಿಗೆ ಸರ್ಕಾರ ಆದ್ಯತೆ ನೀಡಿದರೆ, ವೇತನ ಪಡೆಯುವ ನಾಗರಿಕರಿಗೆ ಸಹಾಯವಾಗುತ್ತದೆ. ಹಲವು ಸರಕುಗಳು ಮತ್ತು ಸೇವೆಗಳು ಸಮಾಜದ ಬೆಳೆಯುತ್ತಿರುವ ವಿಭಾಗಕ್ಕೆ ಕೈಗೆಟುಕುವಂತಿಲ್ಲ. ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ)ಯಲ್ಲಿ ಹೆಚ್ಚಿನ ದರ ತರ್ಕಬದ್ಧಗೊಳಿಸುವುದು ಜಿಎಸ್‌ಟಿ ಕೌನ್ಸಿಲ್ ಮೂಲಕ ನಿರ್ಣಯವಾಗುತ್ತದೆ. ಸರ್ಕಾರವು ಈ ಬಗ್ಗೆ ಬಜೆಟ್‌ನಲ್ಲಿ ಹೇಳಿಕೆಯನ್ನು ನೀಡಬಹುದು.

ಸರ್ಕಾರವು ಶಿಕ್ಷಣ ಮತ್ತು ಆರೋಗ್ಯ ರಕ್ಷಣೆಯಲ್ಲಿ ತನ್ನ ಪಾತ್ರವನ್ನು ಸೀಮಿತಗೊಳಿಸಿದೆ, ತೃತೀಯ ಆರೋಗ್ಯ ಮತ್ತು ಉನ್ನತ ಶಿಕ್ಷಣವನ್ನು ಜನಸಾಮಾನ್ಯರಿಗೆ ತಲುಪದಂತೆ ಮಾಡಿದೆ. ಗುಣಮಟ್ಟದ ಆರೋಗ್ಯ ಮತ್ತು ಶಿಕ್ಷಣ ಸಂಸ್ಥೆಗಳನ್ನು ನಿರ್ಮಿಸಲು ಸರ್ಕಾರ ನೋಡಿದರೆ, ಆರ್ಥಿಕತೆಯ ಹಲವಾರು ವಲಯಗಳಿಗೆ ಸಹಾಯ ಮಾಡುತ್ತದೆ.

ಈ ಬಾರಿಯ ಕೇಂದ್ರ ಬಜೆಟ್‌ನಲ್ಲಿ ಆರೋಗ್ಯ, ಶಿಕ್ಷಣ ಮತ್ತು ಗ್ರಾಮೀಣಾಭಿವೃದ್ಧಿಯನ್ನು ಒಳಗೊಂಡ ಸಾಮಾಜಿಕ ವಲಯದ ಯೋಜನೆಗಳಿಗೆ ಹೆಚ್ಚಿನ ಹಣ ವಿನಿಯೋಗವಾಗುವ ನಿರೀಕ್ಷೆ ಇದೆ. ಗ್ರಾಮೀಣ ಭಾಗಕ್ಕೆ ಆದ್ಯತೆ ಮತ್ತು ಸಮಾಜದ ದುರ್ಬಲ ವರ್ಗಗಳನ್ನು ಸಬಲಗೊಳಿಸುವುದರ ಕಡೆಗೆ ಬಜೆಟ್‌ನಲ್ಲಿ ಹೆಚ್ಚು ಗಮನ ನೀಡಲಾಗುತ್ತದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

SCROLL FOR NEXT