ಸ್ಮೃತಿ ಇರಾನಿ 
ದೇಶ

ನವದೆಹಲಿ: ಅಧಿಕೃತ ಸರ್ಕಾರಿ ಬಂಗಲೆ ತೆರವು ಮಾಡಿದ ಸ್ಮೃತಿ ಇರಾನಿ!

ಅಮೇಥಿ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ನಾಯಕ ಕಿಶೋರಿ ಲಾಲ್ ಶರ್ಮಾ ಎದುರು ಸುಮಾರು 1.5 ಲಕ್ಷ ಮತಗಳ ಅಂತರದಿಂದ ಸ್ಮೃತಿ ಇರಾನಿ ಸೋತಿದ್ದರು.

ನವದೆಹಲಿ: ಇತ್ತೀಚೆಗೆ ನಡೆದ ಲೋಕಸಭೆ ಚುನಾವಣೆಯಲ್ಲಿ ಪರಾಭವಗೊಂಡ ಕೇಂದ್ರದ ಮಾಜಿ ಸಚಿವೆ ಸ್ಮೃತಿ ಇರಾನಿ ಅವರು ದೆಹಲಿಯ ಲುಟಿಯನ್ಸ್‌ನ 28 ತುಘಲಕ್ ಕ್ರೆಸೆಂಟ್‌ನಲ್ಲಿರುವ ತಮ್ಮ ಅಧಿಕೃತ ಬಂಗಲೆಯನ್ನು ಖಾಲಿ ಮಾಡಿದ್ದಾರೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.

ಅಮೇಥಿ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ನಾಯಕ ಕಿಶೋರಿ ಲಾಲ್ ಶರ್ಮಾ ಅವರ ಎದುರು ಸುಮಾರು 1.5 ಲಕ್ಷ ಮತಗಳ ಅಂತರದಿಂದ ಸೋತಿದ್ದ ಸ್ಮೃತಿ ಇರಾನಿ, ಈ ವಾರದ ಆರಂಭದಲ್ಲಿ ತಮ್ಮ ಸರ್ಕಾರಿ ಬಂಗಲೆಯನ್ನು ತೆರವುಗೊಳಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

2019ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಅಮೇಥಿಯಿಂದ ಸೋಲಿಸಿದ ನಂತರ ಬಿಜೆಪಿಯಲ್ಲಿ ಪ್ರಬಲ ನಾಯಕಿಯಾಗಿ ಸ್ಮೃತಿ ಇರಾನಿ ಗುರುತಿಸಿಕೊಂಡಿದ್ದರು. ಹೊಸ ಸರ್ಕಾರ ಅಸ್ತಿತ್ವಕ್ಕೆ ಬಂದ ತಿಂಗಳೊಳಗೆ ಅವರಿಗೆ ನೀಡಲಾದ ಸರ್ಕಾರದ ಅಧಿಕೃತ ಬಂಗಲೆಯನ್ನು ತೆರವು ಮಾಡಬೇಕಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT