ಬಿಹಾರದಲ್ಲಿ ಸಿಡಿಲು 
ದೇಶ

Lightning strikes: ಬಿಹಾರದಲ್ಲಿ ಸಿಡಿಲಿಗೆ 21 ಮಂದಿ ಸಾವು

ಬಿಹಾರದ ಮಧುಬನಿಯಲ್ಲಿ ಗರಿಷ್ಠ ಆರು ಮಂದಿ ಸಾವನ್ನಪ್ಪಿದ್ದು, ಔರಂಗಾಬಾದ್‌ನಲ್ಲಿ ನಾಲ್ಕು, ರಾಜಧಾನಿ ಪಾಟ್ನಾದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಪಾಟ್ನಾ: ಬಿಹಾರದಲ್ಲಿ ಸಿಡಿಲಿಗೆ 21 ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಬಿಹಾರ ಮುಖ್ಯಮಂತ್ರಿ ಕಚೇರಿ ಶುಕ್ರವಾರ ನೀಡಿರುವ ಮಾಹಿತಿ ಅನ್ವಯ ಕಳೆದ 24 ಗಂಟೆಗಳಲ್ಲಿ ಬಿಹಾರದಾದ್ಯಂತ ಸಿಡಿಲು ಬಡಿತ-ಸಂಬಂಧಿತ ಘಟನೆಗಳಲ್ಲಿ ಒಟ್ಟು 21 ಜನರು ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ.

ಬಿಹಾರದ ಮಧುಬನಿಯಲ್ಲಿ ಗರಿಷ್ಠ ಆರು ಮಂದಿ ಸಾವನ್ನಪ್ಪಿದ್ದು, ಔರಂಗಾಬಾದ್‌ನಲ್ಲಿ ನಾಲ್ಕು, ರಾಜಧಾನಿ ಪಾಟ್ನಾದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಅಲ್ಲದೆ ರೋಹ್ತಾಸ್, ಭೋಜ್‌ಪುರ, ಕೈಮೂರ್, ಸರನ್, ಜೆಹಾನಾಬಾದ್, ಗೋಪಾಲ್‌ಗಂಜ್, ಸುಪೌಲ್, ಲಖಿಸಾರೈ ಮತ್ತು ಮಾಧೇಪುರ ಜಿಲ್ಲೆಗಳಲ್ಲಿ ತಲಾ ಒಬ್ಬರು ಸಿಡಿಲು ಬಡಿತಕ್ಕೆ ಒಳಗಾಗಿ ಸಾವನ್ನಪ್ಪಿದ್ದಾರೆ ಎಂದು ಸಿಎಂಒ ಹೇಳಿಕೆಯಲ್ಲಿ ತಿಳಿಸಿದೆ.

ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಮೃತರಿಗೆ ಸಂತಾಪ ಸೂಚಿಸಿದ್ದು, ಮೃತರ ಕುಟುಂಬಕ್ಕೆ ತಲಾ 4 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.

ಇದೇ ವೇಳೆ ಪ್ರತಿಕೂಲ ಹವಾಮಾನದ ಸಂದರ್ಭದಲ್ಲಿ ಎಲ್ಲಾ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವಂತೆ ಮುಖ್ಯಮಂತ್ರಿ ಕಚೇರಿ ಜನರಿಗೆ ಮನವಿ ಮಾಡಿದೆ.

ಅಲ್ಲದೆ ಅಗತ್ಯವಿಲ್ಲದಿದ್ದರೆ ಹೊರಗಡೆ ಹೋಗುವುದನ್ನು ತಪ್ಪಿಸಿ ಮತ್ತು ಕಾಲಕಾಲಕ್ಕೆ ವಿಪತ್ತು ನಿರ್ವಹಣಾ ಇಲಾಖೆ ನೀಡುವ ಸಲಹೆಗಳನ್ನು ಅನುಸರಿಸಿ ಎಂದು ಕರೆ ನೀಡಿದೆ.

ಕಳೆದ ಕೆಲವು ವಾರಗಳಿಂದ ಬಿಹಾರದಲ್ಲಿ ಮಳೆ ಮತ್ತು ಭಾರಿ ಗುಡುಗು ಸಹಿತ ಮಳೆಯಾಗುತ್ತಿದ್ದು, ಈ ತಿಂಗಳ ಆರಂಭದಿಂದ ಸುಮಾರು 70 ಜನರು ಸಿಡಿಲು-ಸಂಬಂಧಿತ ಘಟನೆಗಳಿಗೆ ಬಲಿಯಾಗಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯದಲ್ಲಿ ಮಳೆ ಅಭಾವ, ನಾಲ್ಕು ಕಂದಾಯ ವಿಭಾಗಗಳಲ್ಲಿ ಮೋಡ ಬಿತ್ತನೆ: 27 ಕೋಟಿ ರೂ. ವೆಚ್ಚ- ಜಲ ಸಂಪನ್ಮೂಲ ಸಚಿವ ಚಲುವರಾಯಸ್ವಾಮಿ!

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

ಭಾರತದಲ್ಲಿ ಫುಡ್‌ ಕಂಪನಿಗಳ ಲಾಬಿ: ಚಿಪ್ಸ್ ಮತ್ತು ಕೂಲ್ ಡ್ರಿಂಕ್ಸ್ ಮೇಲೆ ‘ರೆಡ್‌ ಅಲರ್ಟ್’ ಪ್ರಸ್ತಾವ ಕೈಬಿಟ್ಟ FSSAI, ಆಗಿದ್ದೇನು?

'ಬ್ರೋ, ನೀವು ಸುಮ್ಮನೆ ಸಮಯ ವ್ಯರ್ಥ ಮಾಡುತ್ತಿದ್ದೀರಿ': ಎರಡನೇ ಟೆಸ್ಟ್ ಪಂದ್ಯದಲ್ಲಿ ಶ್ರೀಲಂಕಾ ನಾಯಕನ ಕಾಲೆಳೆದ ಸರ್ಫರಾಜ್ ಖಾನ್!