ಮಹಾಯುತಿ ನಾಯಕರ ಗೆಲುವಿನ ಸಂಭ್ರಮ 
ದೇಶ

ಮಹಾರಾಷ್ಟ್ರ ಎಂಎಲ್‌ಸಿ ಚುನಾವಣೆ: 7 ಕಾಂಗ್ರೆಸ್ ಶಾಸಕರಿಂದ ಅಡ್ಡ ಮತದಾನ

37 ಶಾಸಕರನ್ನು ಹೊಂದಿರುವ ಕಾಂಗ್ರೆಸ್ ತನ್ನ ಅಭ್ಯರ್ಥಿ ಪ್ರದೀನ ಸತವ್‌ಗೆ 30 ಪ್ರಥಮ ಪ್ರಾಶಸ್ತ್ಯದ ಮತಗಳನ್ನು ನಿಗದಿಪಡಿಸಿತ್ತು ಮತ್ತು ಉಳಿದ ಏಳು ಮತಗಳು ಮಿತ್ರ ಪಕ್ಷ ಶಿವಸೇನೆ-ಯುಬಿಟಿಯ ಅಭ್ಯರ್ಥಿ ಮಿಲಿಂದ್ ನಾರ್ವೇಕರ್‌ಗೆ ಹೋಗಬೇಕಾಗಿತ್ತು.

ಮುಂಬೈ: ಮಹಾರಾಷ್ಟ್ರ ವಿಧಾನ ಪರಿಷತ್ತಿನ 11 ಸ್ಥಾನಗಳಿಗೆ ಶುಕ್ರವಾರ ನಡೆದ ಚುನಾವಣೆಯಲ್ಲಿ ಕನಿಷ್ಠ ಏಳು ಕಾಂಗ್ರೆಸ್ ಶಾಸಕರು ಪಕ್ಷದ ನಿರ್ದೇಶನವನ್ನು ಧಿಕ್ಕರಿಸಿ ಅಡ್ಡ ಮತದಾನ ಮಾಡಿದ್ದಾರೆ.

37 ಶಾಸಕರನ್ನು ಹೊಂದಿರುವ ಕಾಂಗ್ರೆಸ್ ತನ್ನ ಅಭ್ಯರ್ಥಿ ಪ್ರದೀನ ಸತವ್‌ಗೆ 30 ಪ್ರಥಮ ಪ್ರಾಶಸ್ತ್ಯದ ಮತಗಳನ್ನು ನಿಗದಿಪಡಿಸಿತ್ತು ಮತ್ತು ಉಳಿದ ಏಳು ಮತಗಳು ಮಿತ್ರ ಪಕ್ಷ ಶಿವಸೇನೆ-ಯುಬಿಟಿಯ ಅಭ್ಯರ್ಥಿ ಮಿಲಿಂದ್ ನಾರ್ವೇಕರ್‌ಗೆ ಹೋಗಬೇಕಾಗಿತ್ತು ಎಂದು ಪಕ್ಷದ ಮೂಲಗಳು ತಿಳಿಸಿವೆ.

ಆದರೆ ಸತವ್ 25 ಮತ್ತು ನಾರ್ವೇಕರ್ 22 ಮೊದಲ ಪ್ರಾಶಸ್ತ್ಯದ ಮತಗಳನ್ನು ಪಡೆದಿದ್ದು, ಕನಿಷ್ಠ ಏಳು ಕಾಂಗ್ರೆಸ್ ಶಾಸಕರು ಅಡ್ಡ ಮತದಾನ ಮಾಡಿದ್ದಾರೆ.

ಬಿಜೆಪಿ, ಶಿವಸೇನೆ ಮತ್ತು ಎನ್‌ಸಿಪಿಯ ಆಡಳಿತಾರೂಢ ಮಹಾಯುತಿ ಮೈತ್ರಿಕೂಟವು ಸ್ಪರ್ಧಿಸಿದ ಎಲ್ಲಾ ಒಂಬತ್ತು ಸ್ಥಾನಗಳನ್ನು ಗೆದ್ದರೆ, ಕಾಂಗ್ರೆಸ್ ಒಂದು ಸ್ಥಾನದಲ್ಲಿ ಗೆಲುವು ಸಾಧಿಸಿದೆ. ಶರದ್ ಪವಾರ್ ನೇತೃತ್ವದ ಎನ್‌ಸಿಪಿ-ಎಸ್‌ಪಿ ಬೆಂಬಲಿತ ರೈತ ಮತ್ತು ಕಾರ್ಮಿಕರ ಪಕ್ಷದ ಜಯಂತ್ ಪಾಟೀಲ್ ಸಹ ಸೋಲು ಅನುಭವಿಸಿದ್ದಾರೆ.

ಬಿಜೆಪಿ ಐದು ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದರೆ, ಅದರ ಮಹಾಯುತಿ ಮಿತ್ರಪಕ್ಷಗಳಾದ ಶಿವಸೇನಾ ಮತ್ತು ಎನ್‌ಸಿಪಿ ತಲಾ ಇಬ್ಬರು ಅಭ್ಯರ್ಥಿಗಳನ್ನು ನಾಮನಿರ್ದೇಶನಗೊಳಿಸಿದ್ದವು. ಮತ್ತೊಂದೆಡೆ, ಕಾಂಗ್ರೆಸ್ ಮತ್ತು ಶಿವಸೇನಾ(ಯುಬಿಟಿ) ತಲಾ ಒಬ್ಬ ಅಭ್ಯರ್ಥಿಯನ್ನು ಕಣಕ್ಕಿಳಿಸಿತು. ಅವರ ಎಂವಿಎ ಪಾಲುದಾರ ಎನ್‌ಸಿಪಿ (ಎಸ್‌ಪಿ), ರೈತ ಮತ್ತು ಕಾರ್ಮಿಕರ ಪಕ್ಷ (ಪಿಡಬ್ಲ್ಯೂಪಿ) ನಾಮನಿರ್ದೇಶಿತರನ್ನು ಬೆಂಬಲಿಸಿದೆ. ಆದರೆ, ಪಿಡಬ್ಲ್ಯುಪಿ ಅಭ್ಯರ್ಥಿ ಜಯಂತ್ ಪಾಟೀಲ್ ಅವರು ವಿಧಾನ ಪರಿಷತ್ ಚುನಾವಣೆಯಲ್ಲಿ ಪರಾಭವಗೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

ಬಾಂಬೆ ಮಾದರಿಯಲ್ಲಿ ಕೊಳಗೇರಿ ಪುನಶ್ಚೇತನಕ್ಕೆ ಸಮಿತಿ ರಚನೆ: GBA ವ್ಯಾಪ್ತಿಗೆ ಆನೇಕಲ್ ಸೇರಿಸುವುದು ಕಷ್ಟ; ಡಿಕೆ ಶಿವಕುಮಾರ್

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

SCROLL FOR NEXT