ಅಮರನಾಥ ಯಾತ್ರೆ ಭಕ್ತರು 
ದೇಶ

ಅಮರನಾಥ ಯಾತ್ರೆ: ಸುಮಾರು 2.66 ಲಕ್ಷ ಯಾತ್ರಾರ್ಥಿಗಳಿಂದ ಹಿಮಲಿಂಗ ದರ್ಶನ

ಈ ಗುಹೆಯು ಕಾಶ್ಮೀರ ಹಿಮಾಲಯದಲ್ಲಿ ಸಮುದ್ರ ಮಟ್ಟದಿಂದ 3,888 ಮೀಟರ್ ಎತ್ತರದಲ್ಲಿದೆ. ಯಾತ್ರಾರ್ಥಿಗಳು ಸಾಂಪ್ರದಾಯಿಕ ದಕ್ಷಿಣ ಕಾಶ್ಮೀರದ ಪಹಲ್ಗಾಮ್ ಅಥವಾ ಉತ್ತರ ಕಾಶ್ಮೀರದ ಬಲ್ಟಾಲ್ ಮಾರ್ಗದಿಂದ ಗುಹಾ ದೇವಾಲಯಕ್ಕೆ ಪ್ರಯಾಣಿಸುತ್ತಾರೆ.

ಜಮ್ಮು: ಕಳೆದ 13 ದಿನಗಳಲ್ಲಿ ಸುಮಾರು 2.66 ಲಕ್ಷಕ್ಕೂ ಹೆಚ್ಚು ಯಾತ್ರಾರ್ಥಿಗಳು ಅಮರನಾಥ ಯಾತ್ರೆ ನೆರವೇರಿಸಿದ್ದು, ಶುಕ್ರವಾರ 4,434 ಯಾತ್ರಾರ್ಥಿಗಳನ್ನೊಳಗೊಂಡ ತಂಡ ಕಾಶ್ಮೀರದಿಂದ ತೆರಳಿತು. ಈ ಬಾರಿ ಅಮರನಾಥ ಯಾತ್ರೆಗೆ ಆಗಮಿಸುವ ಯಾತ್ರಿಗಳ ಸಂಖ್ಯೆಯಲ್ಲಿ ಯಾವುದೇ ಇಳಿಮುಖವಾಗಿಲ್ಲ ಮತ್ತು ಯಾತ್ರಾರ್ಥಿಗಳ ಉತ್ಸಾಹ ಮುಂದುವರೆದಿದೆ ಎಂದು ಅಮರನಾಥ ದೇವಾಲಯ ಮಂಡಳಿ ಅಧಿಕಾರಿಗಳು ಹೇಳಿದ್ದಾರೆ.

ಜೂನ್ 29 ರಂದು ಯಾತ್ರೆ ಪ್ರಾರಂಭವಾದಾಗಿನಿಂದ, ಗುರುವಾರದವರೆಗೆ 2.66 ಲಕ್ಷಕ್ಕೂ ಹೆಚ್ಚು ಭಕ್ತರು ಪವಿತ್ರ ಗುಹೆಯೊಳಗೆ ‘ಹಿಮಲಿಂಗದ ದರ್ಶನ’ ಪಡೆದ್ದಾರೆ. ಗುಹೆ ದೇಗುಲವನ್ನು ತಲುಪಲು ದಕ್ಷಿಣ ಮತ್ತು ಉತ್ತರ ಬೇಸ್ ಕ್ಯಾಂಪ್ ನಿಂದ ಹೆಲಿಕಾಪ್ಟರ್ ಸೇವೆ ಬಳಸಿದ 10,000 ಕ್ಕೂ ಹೆಚ್ಚು ಯಾತ್ರಿಕರು ಇದರಲ್ಲಿ ಸೇರಿದ್ದಾರೆ.

ಈ ಗುಹೆಯು ಕಾಶ್ಮೀರ ಹಿಮಾಲಯದಲ್ಲಿ ಸಮುದ್ರ ಮಟ್ಟದಿಂದ 3,888 ಮೀಟರ್ ಎತ್ತರದಲ್ಲಿದೆ. ಯಾತ್ರಾರ್ಥಿಗಳು ಸಾಂಪ್ರದಾಯಿಕ ದಕ್ಷಿಣ ಕಾಶ್ಮೀರದ ಪಹಲ್ಗಾಮ್ ಅಥವಾ ಉತ್ತರ ಕಾಶ್ಮೀರದ ಬಲ್ಟಾಲ್ ಮಾರ್ಗದಿಂದ ಗುಹಾ ದೇವಾಲಯಕ್ಕೆ ಪ್ರಯಾಣಿಸುತ್ತಾರೆ. ಶುಕ್ರವಾರ, 4434 ಯಾತ್ರಿಗಳು ಕಾಶ್ಮೀರದಿಂದ ಜಮ್ಮುವಿನ ಭಗವತಿ ನಗರ ಯಾತ್ರಿ ನಿವಾಸದತ್ತ ಎರಡು ಬೆಂಗಾವಲು ಪಡೆಯಲ್ಲಿ ಹೊರಟರು.

64 ವಾಹನಗಳಲ್ಲಿ 1,721 ಯಾತ್ರಾರ್ಥಿಗಳನ್ನು ಹೊತ್ತ ಮೊದಲ ಬೆಂಗಾವಲು ಪಡೆ ಉತ್ತರ ಕಾಶ್ಮೀರ ಬಲ್ಟಾಲ್ ಬೇಸ್ ಕ್ಯಾಂಪ್‌ಗೆ ಮುಂಜಾನೆ 3 ಗಂಟೆಗೆ ಹೊರಟಿತು. 101 ವಾಹನಗಳಲ್ಲಿ 2,713 ಯಾತ್ರಿಕರನ್ನು ಹೊತ್ತ ಎರಡನೇ ಬೆಂಗಾವಲು ಪಡೆ ದಕ್ಷಿಣ ಕಾಶ್ಮೀರ ನುನ್ವಾನ್ (ಪಹಲ್ಗಾಮ್) ಬೇಸ್ ಕ್ಯಾಂಪ್‌ಗೆ 3.35 ಕ್ಕೆ ಹೊರಟಿತು. ಈ ವರ್ಷದ ಯಾತ್ರೆಯು 52 ದಿನಗಳ ನಂತರ ಆಗಸ್ಟ್ 29 ರಂದು ಶ್ರಾವಣ ಪೂರ್ಣಿಮಾ ಮತ್ತು ರಕ್ಷಾ ಬಂಧನ ಹಬ್ಬಗಳೊಂದಿಗೆ ಮುಕ್ತಾಯಗೊಳ್ಳಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ