ಕಂಗನಾ ರಣಾವತ್ 
ದೇಶ

ನನ್ನ ಭೇಟಿಗೆ ಬರುವವರು ಆಧಾರ್ ಕಾರ್ಡ್ ತರುವುದು ಕಡ್ಡಾಯ: ಸಂಸದೆ ಕಂಗನಾ ರಣಾವತ್‌ ಹೇಳಿಕೆಗೆ ಆಕ್ರೋಶ

ಬಾಲಿವುಟ್ ನಟಿ, ಬಿಜೆಪಿ ಸಂಸದೆ ಕಂಗನಾ ರಣಾವತ್ ಅವರು, ‘ತಾವು ಪ್ರತಿನಿಧಿಸುವ ಹಿಮಾಚಲ ಪ್ರದೇಶದ ಮಂಡಿ ಲೋಕಸಭಾ ಕ್ಷೇತ್ರದ ಜನರು ತಮ್ಮನ್ನು ಭೇಟಿ ಮಾಡಲು ಬಯಸಿದರೆ, ತಮ್ಮ ಆಧಾರ್ ಕಾರ್ಡ್‌ಗಳನ್ನು ತರಬೇಕು’ ಎಂದು ಹೇಳಿದ್ದಾರೆ.

ನವದೆಹಲಿ: ಬಾಲಿವುಟ್ ನಟಿ, ಬಿಜೆಪಿ ಸಂಸದೆ ಕಂಗನಾ ರಣಾವತ್ ಅವರು, ‘ತಾವು ಪ್ರತಿನಿಧಿಸುವ ಹಿಮಾಚಲ ಪ್ರದೇಶದ ಮಂಡಿ ಲೋಕಸಭಾ ಕ್ಷೇತ್ರದ ಜನರು ತಮ್ಮನ್ನು ಭೇಟಿ ಮಾಡಲು ಬಯಸಿದರೆ, ತಮ್ಮ ಆಧಾರ್ ಕಾರ್ಡ್‌ಗಳನ್ನು ತರಬೇಕು’ ಎಂದು ಹೇಳಿದ್ದಾರೆ. ಅವರ ಈ ಹೇಳಿಕೆ ವ್ಯಾಪಕ ಟೀಕೆಗೆ ಗುರಿಯಾಗಿದೆ. ಕಂಗನಾ ಮತ್ತು ಬಿಜೆಪಿಯನ್ನು ಕಾಂಗ್ರೆಸ್‌ ತರಾಟೆಗೆ ತೆಗೆದುಕೊಂಡಿದೆ.

ದೊಡ್ಡ ಸಂಖ್ಯೆಯ ಪ್ರವಾಸಿಗಳು ಮತ್ತು ಹೊರಗಿನವರು ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಈ ನಿಯಮವನ್ನು ಜಾರಿಗೊಳಿಸುತ್ತಿರುವುದಾಗಿ ಸ್ಪಷ್ಟಪಡಿಸಿದ್ದಾರೆ. ಮಂಡಿಯಲ್ಲಿ ಇರುವಾಗಲೆಲ್ಲ ನಿಯೋಜಿತ ಸಂವಾದ ಕೇಂದ್ರಗಳಲ್ಲಿ ಸಂದರ್ಶಕರನ್ನು ಭೇಟಿ ಮಾಡಲು ಲಭ್ಯವಿರುವುದಾಗಿ ಅವರು ವಿವರಿಸಿದ್ದಾರೆ.

ಹಿಮಾಚಲ ಪ್ರದೇಶದ ದೊಡ್ಡ ಸಂಖ್ಯೆಯ ಪ್ರವಾಸಿಗಳನ್ನು ಆಕರ್ಷಿಸುತ್ತಿದೆ. ಆದ್ದರಿಂದ ಮಂಡಿ ಪ್ರದೇಶದ ಒಂದು ಆಧಾರ್ ಕಾರ್ಡ್ ತರುವುದು ಅಗತ್ಯ. ಕ್ಷೇತ್ರದಲ್ಲಿ ನಿಮ್ಮ ಕೆಲಸದ ಸಂಬಂಧದ ವಿವರವನ್ನು ಒಂದು ಪತ್ರದಲ್ಲಿ ಲಿಖಿತವಾಗಿ ನೀಡಬೇಕು. ಆದ್ದರಿಂದ ಯಾವುದೇ ಅನಾನುಕೂಲವಾಗದಂತೆ ಎಚ್ಚರ ವಹಿಸಬೇಕು ಎಂದು ತಿಳಿಸಿದರು. ಜುಲೈ 11ರಂದು ನಡೆದ ಸಾರ್ವಜನಿಕ ಸಂವಾದದಲ್ಲಿ, ಸ್ಥಳೀಯ ಪಂಚಾಯ್ತಿ ಹಾಗೂ ವಿಧಾನಸಭೆ ಮಟ್ಟದ ಸಮಸ್ಯೆಗಳಿಗಿಂತ ಹೆಚ್ಚಾಗಿ ರಾಷ್ಟ್ರಮಟ್ಟದ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಸಂಸದೆಯಾಗಿ ನನ್ನ ಪಾತ್ರವನ್ನು ನಿರ್ವಹಿಸುವುದು ನನ್ನ ಆದ್ಯತೆ" ಎಂದು ತಿಳಿಸಿದ್ದಾರೆ.

ಮಂಡಿ ಲೋಕಸಭಾ ಕ್ಷೇತ್ರದಲ್ಲಿ ಕಂಗನಾ ರಣಾವತ್ ವಿರುದ್ಧ ಸ್ಪರ್ಧಿಸಿ, ಸೋತಿದ್ದ ಕಾಂಗ್ರೆಸ್ ನಾಯಕ, ಹಿಮಾಚಲದ ಹಾಲಿ ಲೋಕೋಪಯೋಗಿ ಸಚಿವ ವಿಕ್ರಮಾದಿತ್ಯ ಸಿಂಗ್ ಅವರು, ಕಂಗನಾ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ‘ಕ್ಷೇತ್ರದ ಜನರು ಅವರನ್ನು ಭೇಟಿ ಮಾಡಲು ಬಯಸಿದರೆ, ಆಧಾರ್ ಕಾರ್ಡ್ ತರುವ ಅಗತ್ಯವಿಲ್ಲ’ ಎಂದು ಹೇಳಿದ್ದಾರೆ.

ನಾವು ಜನಪ್ರತಿನಿಧಿಗಳು. ಹಾಗಾಗಿ ರಾಜ್ಯದ ಪ್ರತಿಯೊಂದು ವರ್ಗದ ಜನರನ್ನು ಭೇಟಿ ಮಾಡುವುದು ನಮ್ಮ ಜವಾಬ್ದಾರಿಯಾಗಿದೆ. ಅದು ಸಣ್ಣ ಕೆಲಸವಾಗಲಿ, ದೊಡ್ಡ ಕೆಲಸವಾಗಲಿ, ನೀತಿ ವಿಷಯವಾಗಲಿ ಅಥವಾ ವೈಯಕ್ತಿಕ ಕೆಲಸವಾಗಲಿ – ಭೇಟಿಗೆ ಯಾವುದೇ ಗುರುತಿನ ಚೀಟಿಯ ಅಗತ್ಯವಿಲ್ಲ. ಒಬ್ಬ ವ್ಯಕ್ತಿ ಸಾರ್ವಜನಿಕ ಪ್ರತಿನಿಧಿಯ ಬಳಿಗೆ ಬರುತ್ತಿದ್ದಾರೆ ಎಂದರೆ, ಅವರು ಯಾವುದೋ ಕೆಲಸಕ್ಕಾಗಿ ಬರುತ್ತಿದ್ದಾರೆ ಎಂದೇ ಅರ್ಥ. ಭೇಟಿಗೆ ಬರುವವರು ಪತ್ರ ಬರೆದುಕೊಂಡು ಬರಬೇಕೆಂದು ಕೇಳುವುದು ಸರಿಯಲ್ಲ” ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT