ಸ್ಮೃತಿ ಇರಾನಿ ಮತ್ತು ರಾಹುಲ್ ಗಾಂಧಿ 
ದೇಶ

ಜೀವನದಲ್ಲಿ ಸೋಲು-ಗೆಲುವು ಸಹಜ; ಸ್ಮೃತಿ ಇರಾನಿ ಅಪಹಾಸ್ಯ ಬೇಡ: ಬೆಂಬಲಿಗರಿಗೆ ರಾಹುಲ್ ಕಿವಿಮಾತು

ನಾವು ಮತ್ತೊಬ್ಬರನ್ನು ಅವಮಾನಿಸುವುದೆಂದರೆ ಅದು ದೌರ್ಬಲ್ಯದ ಸಂಕೇತವಾಗುತ್ತದೆಯೇ ಹೊರತು ನಮ್ಮ ಶಕ್ತಿಯಲ್ಲ ಎಂದು ರಾಹುಲ್ ಹೇಳಿದ್ದಾರೆ.

ನವದೆಹಲಿ: ಲೋಕಸಭೆ ಚುನಾವಣೆಯಲ್ಲಿ ಉತ್ತರ ಪ್ರದೇಶದ ಅಮೇಠಿಯಿಂದ ಸ್ಪರ್ಧಿಸಿ ಸೋಲು ಕಂಡಿರುವ ಬಿಜೆಪಿ ನಾಯಕಿ ಸ್ಮೃತಿ ಇರಾನಿ ಅವರ ವಿರುದ್ಧ ಅವಹೇಳನಕಾರಿ ಭಾಷೆ ಮತ್ತು ಹೇಳಿಕೆಗಳನ್ನು ನೀಡದಂತೆ ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಕಾರ್ಯಕರ್ತರಿಗೆ ಕಿವಿಮಾತು ಹೇಳಿದ್ದಾರೆ.

ಈ ಕುರಿತು ‘ಎಕ್ಸ್‌’ನಲ್ಲಿ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು ‘ಜೀವನದಲ್ಲಿ ಸೋಲು–ಗೆಲುವು ಸಾಮಾನ್ಯ. ಆದೇ ರೀತಿ ಸ್ಮೃತಿ ಇರಾನಿ ಅಥವಾ ಇತರ ಯಾವುದೇ ನಾಯಕರ ಬಗ್ಗೆ ಅವಹೇಳನಕಾರಿ ಪದಗಳನ್ನು ಬಳಸಬಾರದು. ಅಸಹ್ಯವಾಗಿ ವರ್ತಿಸುವುದನ್ನು ನಿಲ್ಲಿಸುವಂತೆ ನಾನು ಎಲ್ಲರಲ್ಲೂ ಮನವಿ ಮಾಡುತ್ತೇನೆ. ನಾವು ಮತ್ತೊಬ್ಬರನ್ನು ಅವಮಾನಿಸುವುದೆಂದರೆ ಅದು ದೌರ್ಬಲ್ಯದ ಸಂಕೇತವಾಗುತ್ತದೆಯೇ ಹೊರತು ನಮ್ಮ ಶಕ್ತಿಯಲ್ಲ ಎಂದು ಬರೆದುಕೊಂಡಿದ್ದಾರೆ.

‌2024ರ ಲೋಕಸಭಾ ಚುನಾವಣೆಯಲ್ಲಿ ದೇಶಾದ್ಯಂತ ಒಟ್ಟು 797 ಮಹಿಳಾ ಅಭ್ಯರ್ಥಿಗಳು ಕಣಕ್ಕಿಳಿದಿದ್ದರು. ಅವರ ಪೈಕಿ ಹಲವರು ಖ್ಯಾತನಾಮರ ವಿರುದ್ಧ ಗೆಲುವು ಸಾಧಿಸುವ ಮೂಲಕ ಗಮನ ಸೆಳೆದಿದ್ದಾರೆ. ಮತ್ತೆ ಕೆಲವರು ಅಚ್ಚರಿ ಎಂಬಂತೆ ಸೋಲು ಕಂಡಿದ್ದಾರೆ. ಆ ಪೈಕಿ ಉತ್ತರ ಪ್ರದೇಶದ ಅಮೇಥಿಯಿಂದ ಬಿಜೆಪಿ ನಾಯಕಿ ಸ್ಮೃತಿ ಇರಾನಿ ಸ್ಪರ್ಧಿಸಿ ಸೋತಿದ್ದರು. ಇತ್ತೀಚೆಗೆ ನಡೆದ ಲೋಕಸಭೆ ಚುನಾವಣೆಯಲ್ಲಿ ಪರಾಭವಗೊಂಡ ಕೇಂದ್ರದ ಮಾಜಿ ಸಚಿವೆ ಸ್ಮೃತಿ ಇರಾನಿ ಅವರು ದೆಹಲಿಯ ಲುಟಿಯನ್ಸ್‌ನ 28 ತುಘಲಕ್ ಕ್ರೆಸೆಂಟ್‌ನಲ್ಲಿರುವ ತಮ್ಮ ಅಧಿಕೃತ ಬಂಗಲೆಯನ್ನು ಖಾಲಿ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

'ಒಬ್ಬ ಅಲ್ಲ.. ಭಾರತದ ಮೇಲೆ ದಾಳಿಗೆ ಸಾವಿರಾರು ಆತ್ಮಹತ್ಯಾ ಬಾಂಬರ್‌ಗಳು ಸಿದ್ಧ': ಪಾಕ್ ಮೂಲದ ಉಗ್ರ Masood Azhar ಆಡಿಯೋ ವೈರಲ್!

1st ODI: ನ್ಯೂಜಿಲೆಂಡ್ ವಿರುದ್ಧ ಭರ್ಜರಿ ಬ್ಯಾಟಿಂಗ್, ಸಚಿನ್ ತೆಂಡೂಲ್ಕರ್, ಸಂಗಕ್ಕಾರ ದಾಖಲೆ ಮುರಿದ Virat Kohli

SCROLL FOR NEXT