ಜಮ್ಮು-ಕಾಶ್ಮೀರ (ಸಂಗ್ರಹ ಚಿತ್ರ) online desk
ದೇಶ

ಜಮ್ಮು-ಕಾಶ್ಮೀರ ಚುನಾವಣೆಗೂ ಮುನ್ನ ಲೆಫ್ಟಿನೆಂಟ್ ಗವರ್ನರ್ ಗೆ ಹೆಚ್ಚಿನ ಅಧಿಕಾರ ನೀಡಿದ ಕೇಂದ್ರ!

ತಿದ್ದುಪಡಿ ಕಾನೂನಿನ ಪ್ರಕಾರ ಜಮ್ಮು-ಕಾಶ್ಮೀರದ ಸಿಎಂ ತಮ್ಮ ಪ್ಯೂನ್ ನ್ನು ನೇಮಿಸಲು ಸಹ LG ಯ ಅನುಮೋದನೆಗಾಗಿ ಬೇಡಿಕೊಳ್ಳಬೇಕಾಗುತ್ತದೆ ಎಂದು ಜಮ್ಮು-ಕಾಶ್ಮೀರದ ಮಾಜಿ ಸಿಎಂ ಓಮರ್ ಅಬ್ದುಲ್ಲಾ ಲೆಫ್ಟಿನೆಂಟ್ ಗವರ್ನರ್ ಗೆ ಹೆಚ್ಚಿನ ಅಧಿಕಾರ ನೀಡಿರುವುದನ್ನು ಟೀಕಿಸಿದ್ದಾರೆ.

ಶ್ರೀನಗರ: ಮಹತ್ವದ ಬೆಳವಣಿಗೆಯೊಂದರಲ್ಲಿ ಕೇಂದ್ರ ಗೃಹ ಸಚಿವಾಲಯ ಜಮ್ಮು-ಕಾಶ್ಮೀರ ಪುನರ್ವಿಂಗಡಣೆ ಕಾಯ್ದೆ, 2019 ಕ್ಕೆ ತಿದ್ದುಪಡಿ ತಂದಿದ್ದು ಲೆಫ್ಟಿನೆಂಟ್ ಗವರ್ನರ್ ಗೆ ಹೆಚ್ಚಿನ ಅಧಿಕಾರ ನೀಡಿದೆ.

ಈ ತಿದ್ದುಪಡಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಸಹಿ ಹಾಕಿದ್ದು ಅಧಿಸೂಚನೆ ಪ್ರಕಟವಾಗಿದೆ. ತಿದ್ದುಪಡಿಗಳು ಜುಲೈ 12 ರಂದು ಜಾರಿಗೆ ಬಂದಿದ್ದು ಜಮ್ಮು ಮತ್ತು ಕಾಶ್ಮೀರದಲ್ಲಿ ವಿಧಾನಸಭಾ ಚುನಾವಣೆಯ ನಿರೀಕ್ಷೆಯಲ್ಲಿನ ಕ್ರಮ ಇದಾಗಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

ಹೊಸ ತಿದ್ದುಪಡಿ ಕಾನೂನಿನ ಪ್ರಕಾರ 'ಪೊಲೀಸ್', 'ಸಾರ್ವಜನಿಕ ಆದೇಶ', 'ಅಖಿಲ ಭಾರತ ಸೇವೆ' ಮತ್ತು 'ಭ್ರಷ್ಟಾಚಾರ ನಿಗ್ರಹ ದಳ'ಕ್ಕೆ ಸಂಬಂಧಿಸಿದ ಯಾವುದೇ ಪ್ರಸ್ತಾವನೆಗಳನ್ನು ಲೆಫ್ಟಿನೆಂಟ್ ಗವರ್ನರ್ ವಿವೇಚನಾ ಅಧಿಕಾರ ಹೊಂದಿರುವ ಹಣಕಾಸು ಇಲಾಖೆಯ ಅನುಮೋದನೆ ಪಡೆಯುವುದಕ್ಕೂ ಮೊದಲು, ಅಂತಿಮ ಅನುಮೋದನೆ ಅಥವಾ ನಿರಾಕರಣೆಗೆ ಮುಖ್ಯ ಕಾರ್ಯದರ್ಶಿಗಳ ಮೂಲಕ ಲೆಫ್ಟಿನೆಂಟ್ ಗವರ್ನರ್ ಗೆ ಸಲ್ಲಿಸಬೇಕಿದೆ.

ಪ್ರಮುಖ ನಿಯಮಗಳಲ್ಲಿ, ನಿಯಮ 42 ರ ನಂತರ, ನಿಯಮ 42A ನ್ನು ಸೂಚಿಸುವ ಮೂಲಕ ಸೇರಿಸಲಾಗಿದ್ದು, ಇದರ ಪ್ರಕಾರ ಕಾನೂನು, ನ್ಯಾಯ ಮತ್ತು ಸಂಸದೀಯ ವ್ಯವಹಾರಗಳ ಇಲಾಖೆಯು ನ್ಯಾಯಾಲಯದ ಕಲಾಪಗಳಲ್ಲಿ ಅಡ್ವೊಕೇಟ್-ಜನರಲ್‌ಗೆ ಸಹಾಯ ಮಾಡಲು ಅಡ್ವೊಕೇಟ್-ಜನರಲ್ ಮತ್ತು ಇತರ ಕಾನೂನು ಅಧಿಕಾರಿಗಳನ್ನು ನೇಮಿಸುವ ಪ್ರಸ್ತಾವನೆಯನ್ನು ಮುಖ್ಯ ಕಾರ್ಯದರ್ಶಿ ಮತ್ತು ಮುಖ್ಯಮಂತ್ರಿ ಮೂಲಕ ಲೆಫ್ಟಿನೆಂಟ್ ಗವರ್ನರ್ ಅನುಮೋದನೆಗಾಗಿ ಸಲ್ಲಿಸಬೇಕಿದೆ.

ಹೊಸದಾಗಿ ಸೇರಿಸಲಾದ ನಿಯಮ 42B ನಲ್ಲಿ, 'ಪ್ರಾಸಿಕ್ಯೂಷನ್ ಮಂಜೂರಾತಿಗೆ ಅನುಮತಿ ಅಥವಾ ನಿರಾಕರಣೆ ಅಥವಾ ಮೇಲ್ಮನವಿ ಸಲ್ಲಿಸುವ ಕುರಿತು ಯಾವುದೇ ಪ್ರಸ್ತಾವನೆಯನ್ನು ಕಾನೂನು, ನ್ಯಾಯ ಮತ್ತು ಸಂಸದೀಯ ವ್ಯವಹಾರಗಳ ಇಲಾಖೆಯು ಮುಖ್ಯ ಕಾರ್ಯದರ್ಶಿ ಮೂಲಕ ಲೆಫ್ಟಿನೆಂಟ್ ಗವರ್ನರ್ ಅವರ ಮುಂದೆ ಸಲ್ಲಿಸಬೇಕಾಗುತ್ತದೆ.

ಇದಷ್ಟೇ ಅಲ್ಲದೇ ಅಖಿಲ ಭಾರತ ಸೇವೆಗಳ ಅಧಿಕಾರಿಗಳ ಆಡಳಿತ ಕಾರ್ಯದರ್ಶಿಗಳು ಮತ್ತು ಕೇಡರ್ ಹುದ್ದೆಗಳ ಪೋಸ್ಟಿಂಗ್ ಮತ್ತು ವರ್ಗಾವಣೆಗೆ ಸಂಬಂಧಿಸಿದ ವಿಷಯಗಳಿಗೆ ಸಂಬಂಧಿಸಿದಂತೆ, ಪ್ರಸ್ತಾವನೆಯನ್ನು ಲೆಫ್ಟಿನೆಂಟ್ ಗವರ್ನರ್ ಅವರಿಗೆ ಆಡಳಿತ ಕಾರ್ಯದರ್ಶಿ, ಸಾಮಾನ್ಯ ಆಡಳಿತ ಇಲಾಖೆ ಮುಖ್ಯ ಕಾರ್ಯದರ್ಶಿ ಮೂಲಕ ಸಲ್ಲಿಸಬೇಕಿರವುದು ಹೊಸ ಕಾನೂನಿನಲ್ಲಿ ಕಡ್ಡಾಯವಾಗಿರಲಿದೆ.

ಲೆಫ್ಟಿನೆಂಟ್ ಗವರ್ನರ್ ಗೆ ಹೆಚ್ಚಿನ ಅಧಿಕಾರ ನೀಡಿರುವುದನ್ನು ಟೀಕಿಸಿರುವ ಜಮ್ಮು-ಕಾಶ್ಮೀರದ ಮಾಜಿ ಸಿಎಂ ಓಮರ್ ಅಬ್ದುಲ್ಲಾ, ಜಮ್ಮು-ಕಾಶ್ಮೀರದಲ್ಲಿ ಚುನಾವಣೆಗಳು ಹತ್ತಿರದಲ್ಲಿದೆ ಎಂಬುದಕ್ಕೆ ಮತ್ತೊಂದು ಸೂಚಕ ಇದಾಗಿದೆ. ಜಮ್ಮು-ಕಾಶ್ಮೀರದ ಜನರು ಶಕ್ತಿಹೀನ, ರಬ್ಬರ್ ಸ್ಟ್ಯಾಂಪ್ ಮುಖ್ಯಮಂತ್ರಿಗಿಂತ ಉತ್ತಮ ಸಿಎಂ ಪಡೆಯುವುದಕ್ಕೆ ಅರ್ಹರು. ಈಗಿನ ಕಾನೂನಿನ ಪ್ರಕಾರ ಜಮ್ಮು-ಕಾಶ್ಮೀರದ ಸಿಎಂ ತಮ್ಮ ಪ್ಯೂನ್ ನ್ನು ನೇಮಿಸಲು ಸಹ LG ಯ ಅನುಮೋದನೆಗಾಗಿ ಬೇಡಿಕೊಳ್ಳಬೇಕಾಗುತ್ತದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

SCROLL FOR NEXT