ಅಣ್ಣಾ ಕ್ಯಾಂಟೀನ್ 
ದೇಶ

ವಿಜಯವಾಡ: ಶೀಘ್ರದಲ್ಲೇ ಅಣ್ಣಾ ಕ್ಯಾಂಟೀನ್‌ ಪುನರಾರಂಭ- ಸಿಎಂ ಚಂದ್ರಬಾಬು ನಾಯ್ಡು

ಧರ್ಮದ ಸಂರಕ್ಷಣೆಯಲ್ಲಿ ನಂಬಿಕೆ ಮೂಡಿಸುವಲ್ಲಿ ದತ್ತಿ ಸಂಸ್ಥೆಗಳ ಮಹತ್ವವನ್ನು ಒತ್ತಿ ಹೇಳಿದ ಮುಖ್ಯಮಂತ್ರಿ, ಈ ಜಗತ್ತನ್ನು ಮುನ್ನಡೆಸುವುದು ನಂಬಿಕೆ ಮಾತ್ರ. ನಾವು ಸಂಪೂರ್ಣವಾಗಿ ಅರ್ಥಮಾಡಿಕೊಳ್ಳದ ಏಕೈಕ ಶಕ್ತಿ ದೇವರು" ಎಂದು ಅವರು ಹೇಳಿದರು.

ವಿಜಯವಾಡ: ರಾಜ್ಯದಲ್ಲಿ ‘ಅಣ್ಣಾ ಕ್ಯಾಂಟೀನ್‌’ಗಳನ್ನು ಶೀಘ್ರದಲ್ಲೇ ಪುನರಾರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಘೋಷಿಸಿದ್ದಾರೆ.

ಈ ಹಿಂದೆ ತಾನು ಮುಖ್ಯಮಂತ್ರಿಯಾಗಿದ್ದಾಗ 203 ಅಣ್ಣಾ ಕ್ಯಾಂಟೀನ್‌ಗಳನ್ನು ಸರ್ಕಾರ ನಡೆಸುತಿತ್ತು. ಅವುಗಳಿಗೆ ಅಕ್ಷಯಪಾತ್ರದಿಂದ ಉತ್ತಮ ಗುಣಮಟ್ಟದ ಆಹಾರ ಒದಗಿಸಲಾಗುತಿತ್ತು. ಆದರೆ ಕಳೆದ ಜಗನ್ ಸರ್ಕಾರ ಈ ಕ್ಯಾಂಟೀನ್ ಗಳನ್ನು ಮುಚ್ಚಿತ್ತು ಎಂದು ಅವರು ತಿಳಿಸಿದರು.

ವಿಜಯವಾಡ-ಗುಂಟೂರು ಹೆದ್ದಾರಿಯ ತಾಡೇಪಲ್ಲಿ ಸಮೀಪದ ಕೊಳನುಕೊಂಡದ ಹರೇಕೃಷ್ಣ ಗೋಕುಲ ಕ್ಷೇತ್ರದ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಶನಿವಾರ ನಡೆದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಮುಖ್ಯಮಂತ್ರಿ, ರಾಜ್ಯವನ್ನು ಬಡತನ ರಹಿತ ರಾಜ್ಯವನ್ನಾಗಿ ಅಭಿವೃದ್ಧಿಪಡಿಸುವುದು ತಮ್ಮ ಮಹತ್ವಾಕಾಂಕ್ಷೆಯಾಗಿದೆ ಎಂದು ಹೇಳಿದರು.

ಧರ್ಮದ ಸಂರಕ್ಷಣೆಯಲ್ಲಿ ನಂಬಿಕೆ ಮೂಡಿಸುವಲ್ಲಿ ದತ್ತಿ ಸಂಸ್ಥೆಗಳ ಮಹತ್ವವನ್ನು ಒತ್ತಿ ಹೇಳಿದ ಮುಖ್ಯಮಂತ್ರಿ, ಈ ಜಗತ್ತನ್ನು ಮುನ್ನಡೆಸುವುದು ನಂಬಿಕೆ ಮಾತ್ರ. ನಾವು ಸಂಪೂರ್ಣವಾಗಿ ಅರ್ಥಮಾಡಿಕೊಳ್ಳದ ಏಕೈಕ ಶಕ್ತಿ ದೇವರು" ಎಂದು ಅವರು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

SCROLL FOR NEXT