ಪೂಜಾ ಖೇಡ್ಕರ್  
ದೇಶ

ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್ ಕುಟುಂಬಕ್ಕೆ ಮತ್ತಷ್ಟು ಸಂಕಷ್ಟ; ತಾಯಿಗೆ ನೋಟಿಸ್ ಜಾರಿ

ಐಎಎಸ್ ಪ್ರೊಬೇಷನರ್ ಅಧಿಕಾರಿಯ ತಾಯಿ ಮನೋರಮಾ ಮತ್ತು ತಂದೆ ದಿಲೀಪ್ ಖೇಡ್ಕರ್ ಹಾಗೂ ಇತರ ಐವರ ವಿರುದ್ಧವೂ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.

ಪುಣೆ: ಮಹಾರಾಷ್ಟ್ರದ ವಿವಾದಿತ ಪ್ರೊಬೇಷನರಿ ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್ ಅವರ ತಾಯಿ ಮನೋರಮಾ ಖೇಡ್ಕರ್ ಅವರಿಗೆ ಪುಣೆ ಮಹಾನಗರ ಪಾಲಿಕೆ ಶನಿವಾರ ನೋಟಿಸ್ ಜಾರಿ ಮಾಡಿದ್ದು, ಏಳು ದಿನಗಳಲ್ಲಿ ತಮ್ಮ ಬಂಗಲೆಯ ಗೋಡೆಯ ಪಕ್ಕದಲ್ಲಿರುವ "ಅನಧಿಕೃತ ಕಟ್ಟಡಗಳನ್ನು" ತೆರವುಗೊಳಿಸುವಂತೆ ಸೂಚಿಸಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಭೂ ವಿವಾದಕ್ಕೆ ಸಂಬಂಧಿಸಿದಂತೆ ಮನೋರಮಾ ಅವರು ಕೆಲವು ವ್ಯಕ್ತಿಗಳಿಗೆ ಬಂದೂಕಿನಿಂದ ಬೆದರಿಕೆ ಹಾಕುತ್ತಿರುವ ವಿಡಿಯೋ ವೈರಲ್ ಆದ ಬೆನ್ನಲ್ಲೇ ಐಎಎಸ್ ಪ್ರೊಬೇಷನರ್ ಅಧಿಕಾರಿಯ ತಾಯಿ ಮನೋರಮಾ ಮತ್ತು ತಂದೆ ದಿಲೀಪ್ ಖೇಡ್ಕರ್ ಹಾಗೂ ಇತರ ಐವರ ವಿರುದ್ಧವೂ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.

ಇಂದು ಸಂಜೆ, ಪುಣೆ ಮುನ್ಸಿಪಲ್ ಕಾರ್ಪೊರೇಷನ್ ಅಧಿಕಾರಿಗಳು ನಗರದ ಬ್ಯಾನರ್ ರಸ್ತೆಯಲ್ಲಿರುವ 'ಓಂ ದೀಪ್' ಬಂಗಲೆಯಲ್ಲಿ ಮನೋರಮಾ ಖೇಡ್ಕರ್ ಅವರಿಗೆ ನೋಟಿಸ್ ನೀಡಲು ಪ್ರಯತ್ನಿಸಿದರು. ಆದರೆ ಮನೆಯಲ್ಲಿ ಯಾರೂ ಇಲ್ಲದ ಕಾರಣ ಅಧಿಕಾರಿಗಳು ಬಂಗಲೆಯ ಮುಖ್ಯ ಬಾಗಿಲಿಗೆ ನೋಟಿಸ್ ಅಂಟಿಸಿದ್ದಾರೆ.

"ನಿಮ್ಮ ಬಂಗಲೆಯ ಹೊರಗೆ ಅನಧಿಕೃತವಾಗಿ ನಿರ್ಮಿಸಿರುವ ಕಟ್ಟಡದಿಂದ ಜನರಿಗೆ ಅಡಚಣೆ ಉಂಟುಮಾಡುವ ಬಗ್ಗೆ ನಮಗೆ ದೂರು ಬಂದಿದೆ. ಮುಂದಿನ ಏಳು ದಿನಗಳಲ್ಲಿ ಬಂಗಲೆಯ ಗೋಡೆಯ ಪಕ್ಕದಲ್ಲಿರುವ ಅನಧಿಕೃತ ಕಟ್ಟಡಗಳನ್ನು ದಯವಿಟ್ಟು ತೆರವುಗೊಳಿಸಿ" ಎಂದು ನೋಟಿಸ್‌ನಲ್ಲಿ ತಿಳಿಸಲಾಗಿದೆ.

34 ವರ್ಷದ ಪ್ರೊಬೇಷನರಿ ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್ ಅವರು ತಮ್ಮ ಖಾಸಗಿ ಆಡಿ ಕಾರಿಗೆ ಸೈರನ್ ಹಾಗೂ ಸರ್ಕಾರಿ ಫಲಕ ಅಳವಡಿಸಿರುವುದಕ್ಕೆ ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಇದರ ಬೆನಲ್ಲೇ ಅವರನ್ನು ಅಧಿಕಾರ ದುರುಪಯೋಗದ ಆರೋಪದ ಮೇಲೆ ಪುಣೆಯಿಂದ ವಾಶಿಮ್‌ಗೆ ವರ್ಗಾವಣೆ ಮಾಡಲಾಗಿದೆ.

ಅಲ್ಲದೆ ಐಎಎಸ್ ಪರೀಕ್ಷೆಯಲ್ಲಿ ತೇರ್ಗಡೆಯಾಗಲು ಪೂಜಾ ಖೇಡ್ಕರ್ ಅವರು ನಕಲಿ ಅಂಗವೈಕಲ್ಯ ಮತ್ತು ಇತರೆ ಹಿಂದುಳಿದ ವರ್ಗದ(ಒಬಿಸಿ) ಪ್ರಮಾಣಪತ್ರಗಳನ್ನು ಸಲ್ಲಿಸಿದ್ದಾರೆ ಎಂಬ ಗಂಭೀರ ಆರೋಪ ಕೇಳಿ ಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಸೌರಭ್ ಭಾರದ್ವಾಜ್ ಮನೆ ಮೇಲೆ ಇಡಿ ದಾಳಿ; ಮೋದಿ ನಕಲಿ ಪದವಿ ಕುರಿತ ಗಮನ ಬೇರೆಡೆ ಸೆಳೆಯಲು ಯತ್ನ ಎಂದ AAP

SCROLL FOR NEXT