ತಂಜಾವೂರಿನ ಜಿಲ್ಲಾಧಿಕಾರಿ ಕಚೇರಿ ಬಳಿ ರೈತರ ಪ್ರತಿಭಟನೆ 
ದೇಶ

ಕಾವೇರಿ ನೀರು ಬಿಡುಗಡೆಗೆ ನಕಾರ: ಕರ್ನಾಟಕ ಸರ್ಕಾರದ ವಿರುದ್ಧ ತಮಿಳುನಾಡು ರೈತರ ಪ್ರತಿಭಟನೆ!

ತಂಜಾವೂರಿನ ಜಿಲ್ಲಾಧಿಕಾರಿ ಕಟ್ಟಡದ ಪ್ರವೇಶ ದ್ವಾರದಲ್ಲಿ ರಾಷ್ಟ್ರೀಯ ದಕ್ಷಿಣ ಭಾರತದ ನದಿ ಜೋಡಣೆ ರೈತ ಸಂಘದ ಸದಸ್ಯರು ಕೈಯಲ್ಲಿ ಖಾಲಿ ಮಣ್ಣಿನ ಮಡಿಕೆಗಳೊಂದಿಗೆ ಧರಣಿ ನಡೆಸಿದರು.

ತಂಜಾವೂರು: ಜುಲೈ ಅಂತ್ಯದವರೆಗೆ ತಮಿಳುನಾಡಿಗೆ ಪ್ರತಿದಿನ 1 ಟಿಎಂಸಿ ಕಾವೇರಿ ನದಿ ನೀರು ಬಿಡುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಆದೇಶ ಪಾಲನೆಗೆ ಕರ್ನಾಟಕ ಸರ್ಕಾರ ನಿರಾಕರಿಸಿರುವುದರಿಂದ ತಮಿಳುನಾಡಿನ ಕಾವೇರಿ ಅಚ್ಚುಕಟ್ಟು ಪ್ರದೇಶದಲ್ಲಿ ಶನಿವಾರ ಪ್ರತಿಭಟನೆ ನಡೆಸಲಾಯಿತು.

ತಂಜಾವೂರಿನ ಜಿಲ್ಲಾಧಿಕಾರಿ ಕಟ್ಟಡದ ಪ್ರವೇಶ ದ್ವಾರದಲ್ಲಿ ರಾಷ್ಟ್ರೀಯ ದಕ್ಷಿಣ ಭಾರತದ ನದಿ ಜೋಡಣೆ ರೈತ ಸಂಘದ ಸದಸ್ಯರು ಕೈಯಲ್ಲಿ ಖಾಲಿ ಮಣ್ಣಿನ ಮಡಿಕೆಗಳೊಂದಿಗೆ ಧರಣಿ ನಡೆಸಿದರು. ನೀರು ಹಂಚಿಕೆಯಲ್ಲಿ ಸುಪ್ರೀಂಕೋರ್ಟ್ ಮತ್ತು CWRC ಆದೇಶದ ಬಗ್ಗೆ ಕರ್ನಾಟಕದ ಧೋರಣೆಯನ್ನು ಪ್ರತಿಭಟನಾಕಾರರು ಖಂಡಿಸಿದರು. ಸಿಡಬ್ಲ್ಯುಆರ್‌ಸಿ ಆದೇಶದಂತೆ ಕೂಡಲೇ ನೀರು ಬಿಡಬೇಕು, ಸುಪ್ರೀಂ ಕೋರ್ಟ್ ನಿಗದಿಪಡಿಸಿದ ಮಾಸಿಕ ವೇಳಾಪಟ್ಟಿಯಂತೆ ತಮಿಳುನಾಡಿಗೆ ನೀರು ಬಿಡಬೇಕು ಎಂದು ಅವರು ಒತ್ತಾಯಿಸಿದರು.

ತಮಿಳುನಾಡಿಗೆ ನೀರು ಬಿಡದ ಕಾರಣ ರೈತರು ಅನುಭವಿಸುತ್ತಿರುವ ನಷ್ಟಕ್ಕೆ ಕರ್ನಾಟಕ ಸರ್ಕಾರ ಪರಿಹಾರ ನೀಡಬೇಕು, ಕರ್ನಾಟಕ ಸರ್ಕಾರದ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸುವಂತೆ ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್‌ಗೆ ಮನವಿ ಮಾಡಿದರು. ಪ್ರತಿಭಟನಾ ನಿರತ ರೈತರೊಂದಿಗೆ ಜಿಲ್ಲಾಧಿಕಾರಿ ಮಾತುಕತೆ ನಡೆಸಿದ ಬಳಿಕ ಎರಡೂವರೆ ಗಂಟೆಗಳ ಧರಣಿ ಸತ್ಯಾಗ್ರಹವನ್ನು ಅಂತ್ಯಗೊಳಿಸಲಾಯಿತುಯ

ಈ ಮಧ್ಯೆ ತಮಿಳುನಾಡು ರೈತ ಸಂಘದ ಸದಸ್ಯರು ತಂಜಾವೂರಿನ ಇರ್ವಿನ್ ಸೇತುವೆ ಬಳಿ ಕರ್ನಾಟಕ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರು. CWRC ಆದೇಶ ಪಾಲನೆ ನಿರಾಕರಿಸಿದ ಕರ್ನಾಟಕ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಭಾರತ–ನ್ಯೂಜಿಲ್ಯಾಂಡ್ ಸಂಬಂಧ ಕಾರ್ಯತಂತ್ರ ಪಾಲುದಾರಿಕೆಗೆ ಉನ್ನತಿ; 5 ವರ್ಷಗಳಲ್ಲಿ 35,000 ಕೋಟಿ ರೂ. ವ್ಯಾಪಾರದ ಗುರಿ

ಕದನ ವಿರಾಮ ಅಂತ್ಯ; ಹೊಸ ಮಾತುಕತೆಗೆ ಡೊನಾಲ್ಡ್ ಟ್ರಂಪ್ ಒಪ್ಪಿಗೆ – 'ಶರಣಾಗುವುದಿಲ್ಲ' ಎಂದ ಇರಾನ್

ಬೆಂಗಳೂರು: ತಾಯಿ, ಅಜ್ಜಿ, ಮಾವನನ್ನು ಕೊಂದು ಆರೋಪಿ ಆತ್ಮಹತ್ಯೆ!

ಪ್ರಿಯಾಂಕ್ ಖರ್ಗೆ RSS ಸಚಿವರು- ಪರಮೇಶ್ವರ್ 'ಗೊತ್ತಿಲ್ಲ' ಸಚಿವರು: ಶೋಭಾ ಕರಂದ್ಲಾಜೆ

ಪೋಕ್ಸೋ ಕೇಸ್​ ಆರೋಪಿಯ ಭೀಭತ್ಸ ಕೃತ್ಯ: ಜಾಮೀನಿನ ಮೇಲೆ ಬಿಡುಗಡೆಯಾದ ಕೂಡಲೇ ಸಂತ್ರಸ್ತೆ ಸೇರಿ 6 ಮಂದಿಯ ಭೀಕರ ಹತ್ಯೆ!