ತಂಜಾವೂರಿನ ಜಿಲ್ಲಾಧಿಕಾರಿ ಕಚೇರಿ ಬಳಿ ರೈತರ ಪ್ರತಿಭಟನೆ 
ದೇಶ

ಕಾವೇರಿ ನೀರು ಬಿಡುಗಡೆಗೆ ನಕಾರ: ಕರ್ನಾಟಕ ಸರ್ಕಾರದ ವಿರುದ್ಧ ತಮಿಳುನಾಡು ರೈತರ ಪ್ರತಿಭಟನೆ!

ತಂಜಾವೂರಿನ ಜಿಲ್ಲಾಧಿಕಾರಿ ಕಟ್ಟಡದ ಪ್ರವೇಶ ದ್ವಾರದಲ್ಲಿ ರಾಷ್ಟ್ರೀಯ ದಕ್ಷಿಣ ಭಾರತದ ನದಿ ಜೋಡಣೆ ರೈತ ಸಂಘದ ಸದಸ್ಯರು ಕೈಯಲ್ಲಿ ಖಾಲಿ ಮಣ್ಣಿನ ಮಡಿಕೆಗಳೊಂದಿಗೆ ಧರಣಿ ನಡೆಸಿದರು.

ತಂಜಾವೂರು: ಜುಲೈ ಅಂತ್ಯದವರೆಗೆ ತಮಿಳುನಾಡಿಗೆ ಪ್ರತಿದಿನ 1 ಟಿಎಂಸಿ ಕಾವೇರಿ ನದಿ ನೀರು ಬಿಡುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಆದೇಶ ಪಾಲನೆಗೆ ಕರ್ನಾಟಕ ಸರ್ಕಾರ ನಿರಾಕರಿಸಿರುವುದರಿಂದ ತಮಿಳುನಾಡಿನ ಕಾವೇರಿ ಅಚ್ಚುಕಟ್ಟು ಪ್ರದೇಶದಲ್ಲಿ ಶನಿವಾರ ಪ್ರತಿಭಟನೆ ನಡೆಸಲಾಯಿತು.

ತಂಜಾವೂರಿನ ಜಿಲ್ಲಾಧಿಕಾರಿ ಕಟ್ಟಡದ ಪ್ರವೇಶ ದ್ವಾರದಲ್ಲಿ ರಾಷ್ಟ್ರೀಯ ದಕ್ಷಿಣ ಭಾರತದ ನದಿ ಜೋಡಣೆ ರೈತ ಸಂಘದ ಸದಸ್ಯರು ಕೈಯಲ್ಲಿ ಖಾಲಿ ಮಣ್ಣಿನ ಮಡಿಕೆಗಳೊಂದಿಗೆ ಧರಣಿ ನಡೆಸಿದರು. ನೀರು ಹಂಚಿಕೆಯಲ್ಲಿ ಸುಪ್ರೀಂಕೋರ್ಟ್ ಮತ್ತು CWRC ಆದೇಶದ ಬಗ್ಗೆ ಕರ್ನಾಟಕದ ಧೋರಣೆಯನ್ನು ಪ್ರತಿಭಟನಾಕಾರರು ಖಂಡಿಸಿದರು. ಸಿಡಬ್ಲ್ಯುಆರ್‌ಸಿ ಆದೇಶದಂತೆ ಕೂಡಲೇ ನೀರು ಬಿಡಬೇಕು, ಸುಪ್ರೀಂ ಕೋರ್ಟ್ ನಿಗದಿಪಡಿಸಿದ ಮಾಸಿಕ ವೇಳಾಪಟ್ಟಿಯಂತೆ ತಮಿಳುನಾಡಿಗೆ ನೀರು ಬಿಡಬೇಕು ಎಂದು ಅವರು ಒತ್ತಾಯಿಸಿದರು.

ತಮಿಳುನಾಡಿಗೆ ನೀರು ಬಿಡದ ಕಾರಣ ರೈತರು ಅನುಭವಿಸುತ್ತಿರುವ ನಷ್ಟಕ್ಕೆ ಕರ್ನಾಟಕ ಸರ್ಕಾರ ಪರಿಹಾರ ನೀಡಬೇಕು, ಕರ್ನಾಟಕ ಸರ್ಕಾರದ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸುವಂತೆ ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್‌ಗೆ ಮನವಿ ಮಾಡಿದರು. ಪ್ರತಿಭಟನಾ ನಿರತ ರೈತರೊಂದಿಗೆ ಜಿಲ್ಲಾಧಿಕಾರಿ ಮಾತುಕತೆ ನಡೆಸಿದ ಬಳಿಕ ಎರಡೂವರೆ ಗಂಟೆಗಳ ಧರಣಿ ಸತ್ಯಾಗ್ರಹವನ್ನು ಅಂತ್ಯಗೊಳಿಸಲಾಯಿತುಯ

ಈ ಮಧ್ಯೆ ತಮಿಳುನಾಡು ರೈತ ಸಂಘದ ಸದಸ್ಯರು ತಂಜಾವೂರಿನ ಇರ್ವಿನ್ ಸೇತುವೆ ಬಳಿ ಕರ್ನಾಟಕ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರು. CWRC ಆದೇಶ ಪಾಲನೆ ನಿರಾಕರಿಸಿದ ಕರ್ನಾಟಕ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

ಜಾರ್ಖಂಡ್‌ ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ ಹೋರಾಗಾರ್ತಿಗೆ 38 ಮಂದಿ ಲೈಂಗಿಕ ಕಿರುಕುಳ: ಎಫ್‌ಐಆರ್‌ ದಾಖಲು, ‘JMM ಗೂಂಡಾಗಳ’ ಕೃತ್ಯ ಎಂದ ಬಿಜೆಪಿ

SIR ವಿರುದ್ಧ 'ಚುನಾವಣಾ ಆಯೋಗ ಚಲೋ' ಘೋಷಿಸಿದ ಪ್ರಕಾಶ್ ರಾಜ್; ಆಯುಕ್ತರ ರಾಜೀನಾಮೆಗೆ ಆಗ್ರಹ

ನಾಳೆ ಜಗತ್ತಿನಾದ್ಯಂತ ಯಶ್ ನಟನೆಯ 'Toxic' ಚಿತ್ರ ಬಿಡುಗಡೆ; ಇಂದು ದಿಢೀರ್ ಕೋರ್ಟ್ ಮೆಟ್ಟಿಲೇರಿದ ನಿರ್ಮಾಪಕ!