ಅಜಿತ್ ಪವಾರ್ 
ದೇಶ

ಬಾರಾಮತಿಯಿಂದ ವಿಧಾನಸಭಾ ಚುನಾವಣಾ ಪ್ರಚಾರಕ್ಕೆ ಅಜಿತ್ ಪವಾರ್ ಚಾಲನೆ

ಮಹಾಯುತಿ ಮೈತ್ರಿಕೂಟ ಸರ್ಕಾರ ಮಹಿಳೆಯರಿಗೆ ನೀಡಿರುವ ಆರ್ಥಿಕ ನೆರವು ಸೇರಿದಂತೆ ವಿವಿಧ ಕಲ್ಯಾಣ ಯೋಜನೆಗಳನ್ನು ಪ್ರಸ್ತಾಪಿಸಿ ಅಜಿತ್ ಪವಾರ್ ಅವರು ಮತಯಾಚಿಸಿದರು.

ಬಾರಾಮತಿ: ಎನ್‌ಸಿಪಿ ನಾಯಕ ಮತ್ತು ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರು ಭಾನುವಾರ ಶರದ್ ಪವಾರ್ ಅವರ ಭದ್ರಕೋಟೆಯಾದ ಬಾರಾಮತಿಯಿಂದ ವಿಧಾನಸಭೆ ಚುನಾವಣೆಗೆ ರಣಕಹಳೆ ಮೊಳಗಿಸಿದ್ದಾರೆ.

ಇಂದು ಬಾರಾಮತಿಯಲ್ಲಿ ಮಹಾಯುತಿ ಮೈತ್ರಿಕೂಟ ಸರ್ಕಾರ ಮಹಿಳೆಯರಿಗೆ ನೀಡಿರುವ ಆರ್ಥಿಕ ನೆರವು ಸೇರಿದಂತೆ ವಿವಿಧ ಕಲ್ಯಾಣ ಯೋಜನೆಗಳನ್ನು ಪ್ರಸ್ತಾಪಿಸಿ ಅಜಿತ್ ಪವಾರ್ ಅವರು ಮತಯಾಚಿಸಿದರು.

ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರನ್ನು ನಂಬುವಂತೆ ಮತ್ತು ವಿರೋಧಿಗಳು ಹರಡುವ ಸಂವಿಧಾನ ಬದಲಾಯಿಸುವ ಪ್ರಯತ್ನಗಳು ಸೇರಿದಂತೆ ಇತರೆ ಯಾವುದೇ "ಸುಳ್ಳುಗಳನ್ನು" ನಂಬಬೇಡಿ ಎಂದು ಅಜಿತ್ ಪವಾರ್ ಕೇಳಿಕೊಂಡರು.

"ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ(ಅಕ್ಟೋಬರ್‌ನಲ್ಲಿ), ಕೆಲವರು ಸುಳ್ಳು ಸುದ್ದಿಗಳನ್ನು ಹರಡಲು ಪ್ರಯತ್ನಿಸುತ್ತಾರೆ. ಆದರೆ ಅದನ್ನು ನೀವು ನಂಬಬೇಡಿ. ನಾವು ಬದುಕಿರುವವರೆಗೆ ಯಾರೂ ಸಂವಿಧಾನವನ್ನು ಬದಲಾಯಿಸುವ ಧೈರ್ಯ ಮಾಡುವುದಿಲ್ಲ" ಎಂದು ಮಹಾ ಡಿಸಿಎಂ ಹೇಳಿದರು.

ಏಕನಾಥ್ ಶಿಂಧೆ ನೇತೃತ್ವದ ಮಹಾಯುತಿ ಸರ್ಕಾರದಲ್ಲಿ ಹಣಕಾಸು ಖಾತೆಯನ್ನು ಹೊಂದಿರುವ ಅಜಿತ್ ಪವಾರ್ ಅವರು, ಇತ್ತೀಚೆಗೆ ಪ್ರಾರಂಭಿಸಲಾದ "ಮಝಿ ಲಡ್ಕಿ ಬಹಿನ್ ಯೋಜನೆ" ಯನ್ನು ಪ್ರಮುಖವಾಗಿ ಪ್ರಮುಖವಾಗಿ ಪ್ರಸ್ತಾಪಿಸಿದರು. ಇದು ಅರ್ಹ ಮಹಿಳೆಯರಿಗೆ ಮಾಸಿಕ 1,500 ರೂಪಾಯಿಗಳ ಆರ್ಥಿಕ ಸಹಾಯ ಒದಗಿಸುವ ಗುರಿಯನ್ನು ಹೊಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಬಹು ಅಂಗಾಂಗ ವೈಫಲ್ಯದಿಂದ ಗಾಯಕಿ ಆಶಾ ಭೋಸ್ಲೆ ನಿಧನ': ಬ್ರೀಚ್ ಕ್ಯಾಂಡಿ ಆಸ್ಪತ್ರೆ ಸ್ಪಷ್ಟನೆ

ಪ್ರತಿ ಪಂದ್ಯಕ್ಕೂ ಬನ್ನಿ... ನೀವು ನನ್ನ ಅದೃಷ್ಟ: IPLನಲ್ಲಿ ಶತಕ ಸಿಡಿಸಿ ವಿನಮ್ರ ಮನವಿ ಮಾಡಿದ ಸಂಜು ಸ್ಯಾಮ್ಸನ್, Video!

'ಇರಾನ್‌ಗೆ ಸಮವಸ್ತ್ರ, ಅಮೆರಿಕಕ್ಕೆ ಸೂಟ್': ಶಾಂತಿ ಮಾತುಕತೆಗೂ ಮುನ್ನ ಗಮನಸೆಳೆದ ಪಾಕ್ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಉಡುಗೆ!

ಬೇಡ ಬೇಡ ಹೀಗೆಲ್ಲಾ ಮಾಡಬೇಡಿ: ರಸ್ತೆಯಲ್ಲೇ ಗಳಗಳನೆ ಅತ್ತ ನಟಿ ರಮ್ಯಾ

ಮುಂಬೈ: ಖ್ಯಾತ ಹಿರಿಯ ಗಾಯಕಿ ಆಶಾ ಭೋಸ್ಲೆ ನಿಧನ, ಗಣ್ಯರ ಕಂಬನಿ

SCROLL FOR NEXT