IAS ಅಧಿಕಾರಿ ಪೂಜಾ ಖೇಡ್ಕರ್‌ ಆಡಿ ಕಾರು ಜಪ್ತಿ 
ದೇಶ

IAS ಅಧಿಕಾರಿ Puja Khedkar ಆಡಿ ಕಾರು ಜಪ್ತಿ: ಕೆಂಪು ದೀಪ, ನಾಮಫಲಕ ತೆರವು

ದುಬಾರಿ ಖಾಸಗಿ ಕಾರಿಗೆ ಅಕ್ರಮವಾಗಿ ಅಳವಡಿಸಿದ್ದ ಕೆಂಪು ದೀಪ ಹಾಗೂ ‘ಮಹಾರಾಷ್ಟ್ರ ಸರ್ಕಾರ’ ಎಂಬ ನಾಮಫಲಕವನ್ನು ತೆರವುಗೊಳಿಸಿದ್ದಾರೆ. ಜತೆಗೆ ಕಾರಿನ ದಾಖಲೆಗಳನ್ನು ಪರಿಶೀಲನೆ ನಡೆಸಲಾಗುತ್ತಿದೆ..

ಮುಂಬೈ: ಮಹಾರಾಷ್ಟ್ರದ ವಿವಾದಿತ ಐಎಎಸ್ ಅಧಿಕಾರಿ ಡಾ. ಪೂಜಾ ಖೇಡ್ಕರ್‌ ಅವರ ಐಷಾರಾಮಿ ಆಡಿ ಕಾರನ್ನು ಪುಣೆಯ ಪೊಲೀಸರು ಜಪ್ತಿ ಮಾಡಿದ್ದಾರೆ.

ಹೌದು.. ವಿವಾದಿತ ಐಎಎಸ್‌ ಪ್ರೊಬೇಷನರಿ ಅಧಿಕಾರಿ ಡಾ. ಪೂಜಾ ಖೇಡ್ಕರ್‌ ಅವರ ಐಷಾರಾಮಿ ಆಡಿ ಕಾರನ್ನು ಪುಣೆಯ ಚತುರ್ಶೃಂಗಿ ಪೊಲೀಸರು ಜಪ್ತಿ ಮಾಡಿದ್ದು, ತಮ್ಮ ದುಬಾರಿ ಖಾಸಗಿ ಕಾರಿಗೆ ಅಕ್ರಮವಾಗಿ ಅಳವಡಿಸಿದ್ದ ಕೆಂಪು ದೀಪ ಹಾಗೂ ‘ಮಹಾರಾಷ್ಟ್ರ ಸರ್ಕಾರ’ ಎಂಬ ನಾಮಫಲಕವನ್ನು ತೆರವುಗೊಳಿಸಿದ್ದಾರೆ. ಜತೆಗೆ ಕಾರಿನ ದಾಖಲೆಗಳನ್ನು ಪರಿಶೀಲನೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

32 ವರ್ಷದ ಐಎಎಸ್‌ ಅಧಿಕಾರಿ ಪೂಜಾ ಖೇಡ್ಕರ್‌ ಬಳಸುತ್ತಿದ್ದ ಕೆಂಪು ದೀಪ ಹೊಂದಿದ್ದ ಬಿಳಿ ಬಣ್ಣದ ಔಡಿ ಕಾರಿನ ಭಾವಚಿತ್ರವು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು. ಪುಣೆಗೆ ಪೋಸ್ಟಿಂಗ್‌ ಮಾಡಿದ್ದ ವೇಳೆ ಪ್ರತ್ಯೇಕ ಕ್ಯಾಬಿನ್‌, ಸಿಬ್ಬಂದಿ ಒದಗಿಸುವಂತೆ ಬೇಡಿಕೆಯಿಡುವ ಮೂಲಕ ವಿವಾದಕ್ಕೂ ಕಾರಣವಾಗಿದ್ದರು.

ಸರ್ಕಾರದ ಅನುಮತಿ ಪಡೆಯದೇ, ತಮ್ಮ ಸ್ವಂತ ಆಡಿ ಕಾರಿಗೆ ಕೆಂಪು ದೀಪ ಅಳವಡಿಸಿದ್ದರು. ಹೀಗಾಗಿ, ತರಬೇತಿ ಅವಧಿ ಮುಗಿಯುವ ಮೊದಲೇ, ಅವರನ್ನು ಪುಣೆ ಜಿಲ್ಲೆಯಿಂದ ವಾಸೀಂ ಜಿಲ್ಲೆಗೆ ವರ್ಗಾಯಿಸಲಾಗಿತ್ತು.

ಅಂಗವಿಕಲೆ ಎಂದು ಪ್ರಮಾಣಪತ್ರ ಪಡೆದಿದ್ದ ಅಧಿಕಾರಿ

ಹಿಂದುಳಿದ ವರ್ಗದ ಪ್ರಮಾಣಪತ್ರ ಹಾಗೂ ಅಂಗವಿಕಲೆ ಎಂದು ನಕಲಿ ದಾಖಲೆ ಸೃಷ್ಟಿಸಿ ಐಎಎಸ್‌ ಹುದ್ದೆ ಪಡೆದಿದ್ದಾರೆ ಎಂಬ ಆರೋಪ ಪೂಜಾ ವಿರುದ್ಧ ಕೇಳಿಬಂದಿದೆ.

ಪ್ರಕರಣಕ್ಕೆ ಸಂಬಂಧಿಸಿ ಪುಣೆ ಮೂಲದ ಖಾಸಗಿ ಸಂಸ್ಥೆಗೆ ಈಚೆಗೆ ಆರ್‌ಟಿಒ ಅಧಿಕಾರಿಗಳು ನೋಟಿಸ್‌ ಜಾರಿಗೊಳಿಸಿದ್ದರು. ನೋಟಿಸ್ ನಲ್ಲಿ ಜಿಲ್ಲೆಯ ಹವೇಲಿ ತಾಲ್ಲೂಕಿನ ಶಿವಾನೆ ಗ್ರಾಮದ ಕೆಳಗಿನ ವಿಳಾಸದಲ್ಲಿ ನೋಂದಣಿಯಾದ ಎಂಎಚ್‌–12/ಎಆರ್‌700 ಔಡಿ ಕಾರಿನ ಪರಿಶೀಲನೆಗಾಗಿ ತಕ್ಷಣವೇ ಆರ್‌ಟಿಒ ಕಚೇರಿ ಮುಂದೆ ಹಾಜರುಪಡಿಸಬೇಕು. ಫ್ಲೈಯಿಂಗ್‌ ಸ್ಕ್ಯಾಡ್‌ ಕೂಡಲೇ ವಾಹನವನ್ನು ಪತ್ತೆಹಚ್ಚಿ, ಸೂಕ್ತ ಕ್ರಮಕ್ಕೆ ಮುಂದಾಗಬೇಕು ಎಂದು ನೋಟಿಸ್‌ನಲ್ಲಿ ತಿಳಿಸಲಾಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

SCROLL FOR NEXT