ಸಿಆರ್‌ಪಿಎಫ್ ಯೋಧ 
ದೇಶ

ಮಣಿಪುರದಲ್ಲಿ ಉಗ್ರರಿಂದ ಹೊಂಚು ದಾಳಿ: ಓರ್ವ ಸಿಆರ್‌ಪಿಎಫ್ ಯೋಧ ಹುತಾತ್ಮ

ಮಣಿಪುರದ ಜಿರಿಬಾಮ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಪೊಲೀಸರೊಂದಿಗೆ ಜಂಟಿ ಗಸ್ತು ತಿರುಗುವ ಸಿಆರ್‌ಪಿಎಫ್ ತಂಡವನ್ನು ಶಂಕಿತ ಉಗ್ರರು ಹೊಂಚು ಹಾಕಿ ದಾಳಿ ಮಾಡಿದ್ದು ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಯೋಧ ಹುತಾತ್ಮರಾಗಿದ್ದಾರೆ.

ಮಣಿಪುರದ ಜಿರಿಬಾಮ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಪೊಲೀಸರೊಂದಿಗೆ ಜಂಟಿ ಗಸ್ತು ತಿರುಗುವ ಸಿಆರ್‌ಪಿಎಫ್ ತಂಡವನ್ನು ಶಂಕಿತ ಉಗ್ರರು ಹೊಂಚು ಹಾಕಿ ದಾಳಿ ಮಾಡಿದ್ದು ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಯೋಧ ಹುತಾತ್ಮರಾಗಿದ್ದರೆ ಪೊಲೀಸ್ ಕಮಾಂಡೋ ಗಾಯಗೊಂಡಿದ್ದಾರೆ. ಸದ್ಯ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ.

ಅಸ್ಸಾಂ ಗಡಿಗೆ ಹೊಂದಿಕೊಂಡಿರುವ ಜಿಲ್ಲೆಯಲ್ಲಿ ಜಂಟಿ ಗಸ್ತು ತಿರುಗುತ್ತಿದ್ದ ತಂಡದ ಮೇಲೆ ಶಂಕಿತ ಉಗ್ರರು ಭಾರೀ ಗುಂಡಿನ ದಾಳಿ ನಡೆಸಿದ್ದಾರೆ ಎಂದು ಮಣಿಪುರ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಆ ಸಮಯದಲ್ಲಿ, ಸಿಆರ್‌ಪಿಎಫ್ ಯೋಧರಿದ್ದ ಗಸ್ತು ವಾಹನದ ಮೇಲೆ ಶಂಕಿತ ಉಗ್ರರು ಗುಂಡಿನ ದಾಳಿ ಆರಂಭಿಸಿದ್ದರು. ನಾವೂ ಪ್ರತಿದಾಳಿ ನಡೆಸಿದ್ದೇವೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಇದಾದ ಬಳಿಕ ಉಗ್ರರು ಅರಣ್ಯದೊಳಗೆ ಪರಾರಿಯಾಗಿದ್ದಾರೆ. ಸದ್ಯ ಪೊಲೀಸ್ ಶೋಧ ಕಾರ್ಯ ನಡೆಯುತ್ತಿದೆ.

ಏತನ್ಮಧ್ಯೆ, ಪೊಲೀಸರ ಮೇಲಿನ ದಾಳಿಯ ಬಗ್ಗೆ ರಾಜ್ಯದ ಮುಖ್ಯಮಂತ್ರಿ ಎನ್ ವೀರೇನ್ ಸಿಂಗ್ ಪ್ರತಿಕ್ರಿಯೆ ನೀಡಿದ್ದಾರೆ. ಜಿರಿಬಾಮ್ ಜಿಲ್ಲೆಯಲ್ಲಿ ಕುಕಿ ಉಗ್ರಗಾಮಿಗಳೆಂದು ಶಂಕಿಸಲಾದ ಸಶಸ್ತ್ರ ಗುಂಪು ನಡೆಸಿದ ದಾಳಿಯಲ್ಲಿ ಇಂದು ಸಿಆರ್‌ಪಿಎಫ್ ಜವಾನನನ್ನು ಕೊಂದಿರುವುದನ್ನು ನಾನು ಬಲವಾಗಿ ಖಂಡಿಸುತ್ತೇನೆ ಎಂದು ಅವರು ಹೇಳಿದರು. ಕರ್ತವ್ಯ ನಿರ್ವಹಣೆಯಲ್ಲಿ ಅವರ ಅತ್ಯುನ್ನತ ತ್ಯಾಗ ವ್ಯರ್ಥವಾಗುವುದಿಲ್ಲ ಎಂದು ಅವರು ಹೇಳಿದರು. ಮೃತ ಯೋಧನ ಕುಟುಂಬಕ್ಕೆ ನನ್ನ ಹೃತ್ಪೂರ್ವಕ ಸಂತಾಪವನ್ನು ವ್ಯಕ್ತಪಡಿಸುತ್ತೇನೆ ಮತ್ತು ದಾಳಿಯಲ್ಲಿ ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸಿಎಂ ಹೇಳಿದರು.

ಕಳೆದ ವರ್ಷ ಮೇ ತಿಂಗಳಿನಿಂದ ಮಣಿಪುರದಲ್ಲಿ ನಡೆಯುತ್ತಿರುವ ಹಿಂಸಾಚಾರದಿಂದ ಇಲ್ಲಿಯವರೆಗೆ ಜಿರಿಬಾಮ್ ಬಾಧಿತವಾಗಿಲ್ಲ. ಮೈತೇಯಿ, ಮುಸ್ಲಿಮರು, ನಾಗಾ, ಕುಕಿ ಮತ್ತು ಮಣಿಪುರಿಯೇತರ ಜನರು ಸಹ ಇಲ್ಲಿ ವಾಸಿಸುತ್ತಿದ್ದಾರೆ. ಅದೇ ಸಮಯದಲ್ಲಿ, ಕಳೆದ ವರ್ಷ ಮೇ ತಿಂಗಳಿನಿಂದ ಇಂಫಾಲ್ ಕಣಿವೆಯಲ್ಲಿ ವಾಸಿಸುವ ಮೈತೆಯ್ ಜನರು ಮತ್ತು ಗುಡ್ಡಗಾಡು ಪ್ರದೇಶಗಳಲ್ಲಿ ವಾಸಿಸುವ ಕುಕಿ ಜನರ ನಡುವೆ ನಡೆಯುತ್ತಿರುವ ಜನಾಂಗೀಯ ಹಿಂಸಾಚಾರದಲ್ಲಿ ನೂರಾರು ಜನರು ಸಾವನ್ನಪ್ಪಿದ್ದಾರೆ ಮತ್ತು ಸಾವಿರಾರು ಜನರು ನಿರಾಶ್ರಿತರಾಗಿದ್ದಾರೆ. ಅದೇ ಸಮಯದಲ್ಲಿ, ಕಳೆದ ವರ್ಷ ಮೇ ತಿಂಗಳಲ್ಲಿ ಹಿಂಸಾಚಾರ ಭುಗಿಲೆದ್ದ ನಂತರ, ನಿರಂತರವಾಗಿ ಗುಂಡಿನ ದಾಳಿ ಮತ್ತು ಹಿಂಸಾಚಾರದ ಘಟನೆಗಳು ಬೆಳಕಿಗೆ ಬರುತ್ತಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT