ಹಾವನ್ನು ರಕ್ಷಿಸಿದ ಉರಗ ಪ್ರೇಮಿ 
ದೇಶ

ಜೀವದ ಹಂಗು ತೊರೆದು ಬಾವಿಗೆ ಬಿದ್ದಿದ್ದ ನಾಗರಹಾವು ರಕ್ಷಿಸಿದ ಉರಗ ಪ್ರೇಮಿ

ತೋಟವೊಂದರಲ್ಲಿ ಇದ್ದ ಬಾವಿಗೆ ನಾಗರಹಾವೊಂದು ಬಂದು ಬಿದ್ದಿದ್ದು, ಮೇಲೇರಿ ಬರಲಾಗದೇ ಒದ್ದಾಡುತ್ತಿತ್ತು. ಇದನ್ನು ಕಂಡ ತೋಟದಲ್ಲಿ ಕೆಲಸ ಮಾಡುತ್ತಿದ್ದವರು ಉರಗ ರಕ್ಷಕರಿಗೆ ಮಾಹಿತಿ ನೀಡಿದ್ದಾರೆ.

ನವದೆಹಲಿ: ಉರಗ ರಕ್ಷಕರೊಬ್ಬರು ಬಾವಿಗೆ ಬಿದ್ದಿದ್ದ ಹಾವೊಂದನ್ನು ತಮ್ಮ ಜೀವದ ಹಂಗು ತೊರೆದು ರಕ್ಷಣೆ ಮಾಡಿರುವ ವಿಡಿಯೋ ಇದೀಗ ವೈರಲ್ ಆಗುತ್ತಿದೆ.

ಈ ವಿಡಿಯೋವನ್ನು ವಿದಿತ್ ಶರ್ಮಾ ಎಂಬ ಟ್ವಿಟರ್ ಖಾತೆದಾರರು ಅಪ್ಲೋಡ್ ಮಾಡಿದ್ದು, ಈ ವೈರಲ್ ವಿಡಿಯೋದಲ್ಲಿ ತೋಟವೊಂದರಲ್ಲಿ ಇದ್ದ ಬಾವಿಗೆ ನಾಗರಹಾವೊಂದು ಬಂದು ಬಿದ್ದಿದ್ದು, ಮೇಲೇರಿ ಬರಲಾಗದೇ ಒದ್ದಾಡುತ್ತಿತ್ತು. ಇದನ್ನು ಕಂಡ ತೋಟದಲ್ಲಿ ಕೆಲಸ ಮಾಡುತ್ತಿದ್ದವರು ಉರಗ ರಕ್ಷಕರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ದೌಡಾಯಿಸಿದ ಉರಗ ರಕ್ಷಕ ತನ್ನ ಸೊಂಟಕ್ಕೆ ಹಗ್ಗ ಕಟ್ಟಿಕೊಂಡು ಬಾವಿಗೆ ಇಳಿದು ಕ್ಷಣಮಾತ್ರದಲ್ಲಿ ಹಾವನ್ನು ರಕ್ಷಿಸಿದ್ದಾರೆ.

ಈ ರಕ್ಷಣಾ ಕಾರ್ಯಾಚರಣೆ ವೇಳೆ ನಾಗರಹಾವು ಎರಡು ಮೂರು ಬಾರಿ ಉರಗರಕ್ಷಕನನ್ನು ಕಚ್ಚೆಲೆತ್ನಿಸಿತು. ಆದರೆ ಆತ ತುಂಬಾ ಚಾಕಚಕ್ಯತೆ ಇಂದು ತನ್ನ ತಾನು ರಕ್ಷಿಸಿಕೊಂಡು ಹಾವನ್ನೂ ರಕ್ಷಿಸಿ ಮೇಲಕ್ಕೆ ತಂದ ವಿಡಿಯೋ ವೈರಲ್ ಆಗುತ್ತಿದೆ.

ಉರಗ ರಕ್ಷಕನ ಸಾಹಸಕ್ಕೆ ಎಲ್ಲಡೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಈ ವಿಡಿಯೋ ಎಲ್ಲಿ ಸೆರೆಹಿಡಿದಿದ್ದು ಎಂಬ ಮಾಹಿತಿ ಲಭ್ಯವಾಗಿಲ್ಲ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜೀನಾಮೆ ಬಗ್ಗೆ ಖುದ್ದು ಸುಳಿವು ನೀಡಿದ CM ಸಿದ್ದರಾಮಯ್ಯ; ಸಾಮಾಜಿಕ ಮಾಧ್ಯಮದಲ್ಲಿ ಮಹತ್ವದ ಪೋಸ್ಟ್​!

ಸಿಎಂ ಬದಲಾವಣೆಯಾದ್ರೆ ಜನರಿಗೆ ಕಾರಣ ತಿಳಿಸಬೇಕು, ಇಲ್ಲ ಪರಿಣಾಮ ಎದುರಿಸಬೇಕಾಗುತ್ತದೆ: ಕಾಂಗ್ರೆಸ್ ಗೆ 'ಅಹಿಂದ' ಎಚ್ಚರಿಕೆ

ಊಹಾಪೋಹಕ್ಕೆ ಕೊನೆಗೂ ತೆರೆ: 'ಹೌದು, ಸಿಎಂ ರಾಜೀನಾಮೆ ಕೊಡ್ತಾರಂತೆ': ಆರ್‌ ವಿ ದೇಶಪಾಂಡೆ ಹೇಳಿಕೆ

ಮಮತಾಗೆ ಮತ್ತೊಂದು ಶಾಕ್; ಪಕ್ಷದ ಎಲ್ಲಾ ಹುದ್ದೆಗಳಿಗೆ ಸಂಸದೆ ಕಾಕೋಲಿ ಘೋಷ್ ರಾಜೀನಾಮೆ

ಮಮತಾಗೆ ಬಿಗ್ ಶಾಕ್; TMC ವಿಭಜನೆ? ತೃಣಮೂಲ ಕಾಂಗ್ರೆಸ್ ನ 50 ಶಾಸಕರು, 20 ಸಂಸದರು ಬಿಜೆಪಿ ಸೇರ್ಪಡೆ?

SCROLL FOR NEXT