ಲಕ್ನೊ: ಇತ್ತೀಚಿನ ಲೋಕಸಭೆ ಚುನಾವಣೆಯಲ್ಲಿ ಉತ್ತರ ಪ್ರದೇಶ ರಾಜ್ಯದಲ್ಲಿ ಭಾರತೀಯ ಜನತಾ ಪಾರ್ಟಿ ಹೀನಾಯವಾಗಿ ಸೋತಿತ್ತು. ಸೋಲಿನ ನಂತರ ಉತ್ತರ ಪ್ರದೇಶ ಭಾರತೀಯ ಜನತಾ ಪಕ್ಷದ ಘಟಕದ ಮೊದಲ ಪ್ರಮುಖ ಸಭೆಯಲ್ಲಿ, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಅತಿಯಾದ ಆತ್ಮವಿಶ್ವಾಸ ಈ ವರ್ಷದ ಚುನಾವಣೆಯಲ್ಲಿ ಬಿಜೆಪಿಯ ಭರವಸೆಯನ್ನು ಹುಸಿಗೊಳಿಸಿತು ಎಂದು ಹೇಳಿದ್ದಾರೆ.
ಲಕ್ನೋದಲ್ಲಿ ಬಿಜೆಪಿಯ ಯುಪಿ ಕಾರ್ಯಕಾರಿ ಸಮಿತಿ ಸಭೆಯನ್ನುದ್ದೇಶಿಸಿ ಮಾತನಾಡಿದ ಆದಿತ್ಯನಾಥ್, ಹಿಂದಿನ ಚುನಾವಣೆಗಳಲ್ಲಿ ಬಿಜೆಪಿ ತನ್ನ ಮತಗಳ ಪಾಲನ್ನು ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದರೆ, ಈ ಬಾರಿ ಮತಗಳ ಪಲ್ಲಟ ಕಂಡುಬಂದಿದೆ. ಆದರೆ ನಾವು ಮತ್ತೆ ಪುಟಿದೆದ್ದು ಬರುತ್ತೇವೆ ಎಂದಿದ್ದಾರೆ.
ಪಿಎಂ ಮೋದಿಯವರ ನಾಯಕತ್ವದಲ್ಲಿ ನಾವು ಉತ್ತರ ಪ್ರದೇಶದಲ್ಲಿ ಪ್ರತಿಪಕ್ಷಗಳ ಮೇಲೆ ನಿರಂತರ ಒತ್ತಡವನ್ನು ಹೊಂದಿದ್ದೇವೆ, 2014, 2017, 2019 ಮತ್ತು 2022 ರಲ್ಲಿ ಉತ್ತಮ ಯಶಸ್ಸನ್ನು ಸಾಧಿಸಿದ್ದೇವೆ ಎಂದು ಹೇಳಿದರು.
2014 ಮತ್ತು ನಂತರದ ಚುನಾವಣೆಗಳಲ್ಲಿ ಬಿಜೆಪಿ ಪರವಾಗಿದ್ದ ಶೇಕಡವಾರು ಮತಗಳು, 2024ರಲ್ಲೂ ಬಿಜೆಪಿ ಅದೇ ಮತಗಳನ್ನು ಪಡೆಯುವಲ್ಲಿ ಯಶಸ್ವಿಯಾಗಿದೆ, ಆದರೆ ಮತಗಳ ಪಲ್ಲಟ ಮತ್ತು ಅತಿಯಾದ ಆತ್ಮವಿಶ್ವಾಸ ನಮ್ಮ ನಿರೀಕ್ಷೆಯನ್ನು ಹುಸಿಗೊಳಿಸಿದೆ ಎಂದರು.
ಏಳು ರಾಜ್ಯಗಳಲ್ಲಿ ನಡೆದ ಉಪ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್ಡಿಎ ಹೀನಾಯ ಪ್ರದರ್ಶನ ನೀಡಿದ ಒಂದು ದಿನದ ನಂತರ ಆದಿತ್ಯನಾಥ್ರ ಈ ಹೇಳಿಕೆ ನೀಡಿದ್ದಾರೆ.
ಇಂಡಿಯಾ ಮೈತ್ರಿಕೂಟಕ್ಕೆ ಉತ್ತೇಜನ ನೀಡುವಂತೆ, ಏಳು ರಾಜ್ಯಗಳ 13 ವಿಧಾನಸಭಾ ಕ್ಷೇತ್ರಗಳ ಪೈಕಿ 10 ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯಲ್ಲಿ ಅದರ ಸದಸ್ಯರು ಗೆದ್ದಿದ್ದಾರೆ, ಬಿಜೆಪಿ ಆಡಳಿತವಿರುವ ಉತ್ತರ ಪ್ರದೇಶದ ವಿಧಾನಸಭಾ ಉಪಚುನಾವಣೆಯ ವೇಳಾಪಟ್ಟಿಯನ್ನು ಚುನಾವಣಾ ಆಯೋಗ ಇನ್ನೂ ಪ್ರಕಟಿಸಿಲ್ಲ.
ಇತ್ತೀಚೆಗೆ ಮುಕ್ತಾಯಗೊಂಡ ಲೋಕಸಭೆ ಚುನಾವಣೆಯಲ್ಲಿ ಉತ್ತರ ಪ್ರದೇಶದಲ್ಲಿ ಬಿಜೆಪಿ 33 ಸ್ಥಾನಗಳನ್ನು ಗೆದ್ದುಕೊಂಡಿತ್ತು.