ತಮಿಳುನಾಡು ಸರ್ವಪಕ್ಷ ಸಭೆ  online desk
ದೇಶ

ಕಾವೇರಿ ವಿವಾದ: ಅಗತ್ಯವಿದ್ದಲ್ಲಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಲು ತಮಿಳುನಾಡು ಸರ್ವಪಕ್ಷ ಸಭೆ ನಿರ್ಧಾರ; ಕರ್ನಾಟಕದ ನಡೆಗೆ ಖಂಡನೆ

"ಕರ್ನಾಟಕ ಸಿಡಬ್ಲ್ಯುಆರ್ ಎ ಸೂಚನೆ ಅನುಸರಿಸಲು ವಿಫಲವಾದರೆ, ತಮಿಳುನಾಡಿಗೆ ನ್ಯಾಯ ಸಿಗುವುದನ್ನು ಖಚಿತಪಡಿಸಿಕೊಳ್ಳಲು ಮತ್ತೊಮ್ಮೆ ಸುಪ್ರೀಂ ಕೋರ್ಟ್ ಮೊರೆ ಹೋಗಲು ನಾವು ಸಿದ್ಧರಿದ್ದೇವೆ" ಎಂದು ಸಿಎಂ ಸ್ಟಾಲಿನ್ ದೃಢಪಡಿಸಿದ್ದಾರೆ.

ಚೆನ್ನೈ: ಕಾವೇರಿ ವಿವಾದದ ಬಗ್ಗೆ ತಮಿಳುನಾಡಿನಲ್ಲಿ ಸರ್ವಪಕ್ಷ ಸಭೆ ನಡೆದಿದ್ದು, ಸಿಡಬ್ಲ್ಯುಆರ್ ಎ ಸೂಚನೆಯ ಪ್ರಕಾರ ನೀರು ಹರಿಸಲು ಮುಂದಾಗದ ಕರ್ನಾಟಕದ ನಡೆಯ ಬಗ್ಗೆ ಖಂಡನೆ ವ್ಯಕ್ತವಾಗಿದೆ.

ಕರ್ನಾಟಕದ ನಡೆಯ ವಿಷಯವಾಗಿ ಸೂಕ್ತ ಕ್ರಮಕ್ಕೆ ಮುಂದಾಗಬೇಕು ಎಂದು ಸಭೆಯಲ್ಲಿ ತಮಿಳುನಾಡು ಸಿಎಂ ಎಂಕೆ ಸ್ಟ್ಯಾಲಿನ್ ಹೇಳಿದ್ದು, ಅಗತ್ಯವಿದ್ದಲ್ಲಿ ಸುಪ್ರೀಂ ಕೋರ್ಟ್ ಮೊರೆ ಹೋಗುವುದಕ್ಕೂ ಸಭೆಯಲ್ಲಿ ತೀರ್ಮಾನಿಸಲಾಗಿದೆ.

"ಕರ್ನಾಟಕ ಸಿಡಬ್ಲ್ಯುಆರ್ ಎ ಸೂಚನೆ ಅನುಸರಿಸಲು ವಿಫಲವಾದರೆ, ತಮಿಳುನಾಡಿಗೆ ನ್ಯಾಯ ಸಿಗುವುದನ್ನು ಖಚಿತಪಡಿಸಿಕೊಳ್ಳಲು ಮತ್ತೊಮ್ಮೆ ಸುಪ್ರೀಂ ಕೋರ್ಟ್ ಮೊರೆ ಹೋಗಲು ನಾವು ಸಿದ್ಧರಿದ್ದೇವೆ" ಎಂದು ಸಿಎಂ ಸ್ಟಾಲಿನ್ ದೃಢಪಡಿಸಿದ್ದಾರೆ.

ಕಾವೇರಿ ನೀರು ನಿಯಂತ್ರಣ ಸಮಿತಿಯ ನಿರ್ದೇಶನದಂತೆ ಪ್ರತಿದಿನ ಒಂದು ಟಿಎಂಸಿ ಅಡಿ ನೀರು ಬಿಡಲು ನಿರಾಕರಿಸುತ್ತಿರುವ ಕರ್ನಾಟಕ ಸರ್ಕಾರವನ್ನು ಸಭೆಯಲ್ಲಿ ಅಂಗೀಕರಿಸಿದ ನಿರ್ಣಯ ತೀವ್ರವಾಗಿ ಖಂಡಿಸಿದೆ.

ಕಾವೇರಿ ನ್ಯಾಯಮಂಡಳಿ ಮತ್ತು ಸುಪ್ರೀಂ ಕೋರ್ಟ್‌ನ ಆದೇಶಗಳನ್ನು ಪಾಲಿಸುವಂತೆ ಕರ್ನಾಟಕಕ್ಕೆ ನೀರು ಬಿಡುವಂತೆ ನಿರ್ದೇಶನ ನೀಡಬೇಕೆಂದು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ನಿರ್ಣಯದಲ್ಲಿ ಒತ್ತಾಯಿಸಲಾಗಿದೆ.

ಸಭೆಯನ್ನುದ್ದೇಶಿಸಿ ಮಾತನಾಡಿದ ಸಿಎಂ ಸ್ಟಾಲಿನ್, ಈ ವರ್ಷ ಸಾಕಷ್ಟು ಮಳೆಯಾಗಿದ್ದರೂ ಕರ್ನಾಟಕ ಸಿಡಬ್ಲ್ಯೂಆರ್‌ಎ ಶಿಫಾರಸುಗಳನ್ನು ಪಾಲಿಸಲು ನಿರಾಕರಿಸಿರುವ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದರು.

"ಕಳೆದ ವರ್ಷ, ಕರ್ನಾಟಕ, ಆದೇಶಗಳನ್ನು ಅನುಸರಿಸದ ಕಾರಣ, ಕಾವೇರಿ ನೀರಿನ ನಮ್ಮ ಹಕ್ಕಿನ ಪಾಲನ್ನು ಪಡೆಯಲು ನಾವು ಸುಪ್ರೀಂ ಕೋರ್ಟ್ ಸಂಪರ್ಕಿಸುವ ಪರಿಸ್ಥಿತಿ ನಿರ್ಮಾಣವಾಯಿತು." ಎಂದು ಸ್ಟಾಲಿನ್ ಟೀಕಿಸಿದ್ದಾರೆ.

ಸ್ಥಳೀಯ ನೀರಿನ ಕೊರತೆಯ ಕಳವಳವನ್ನು ಉಲ್ಲೇಖಿಸಿ ಕಾವೇರಿ ನೀರು ಬಿಡುಗಡೆಯನ್ನು ನಿರ್ಬಂಧಿಸುವ ಕರ್ನಾಟಕದ ಇತ್ತೀಚಿನ ನಿರ್ಧಾರದಿಂದ ಉಭಯ ರಾಜ್ಯಗಳ ನಡುವಿನ ಉದ್ವಿಗ್ನತೆಗಳು ಹೆಚ್ಚಿವೆ. ಕರ್ನಾಟಕದ ಈ ನಡೆ ತಮಿಳುನಾಡಿನ ಕೃಷಿ ವಲಯದ ಮೇಲೆ ವಿಶೇಷವಾಗಿ ಪರಿಣಾಮ ಬೀರುವುದರೊಂದಿಗೆ, ಸಮಾನ ನೀರಿನ ಹಂಚಿಕೆಯ ಕುರಿತು ಎರಡು ರಾಜ್ಯಗಳ ನಡುವಿನ ದೀರ್ಘಕಾಲದ ಅಸಮಾಧಾನವನ್ನು ಉಲ್ಬಣಗೊಳಿಸಿದೆ.

ತಮಿಳುನಾಡಿನಲ್ಲಿ ಸರ್ವಪಕ್ಷ ಸಭೆ ನಡೆಯುವುದಕ್ಕೂ ಹಿಂದಿನ ದಿನ, ಕರ್ನಾಟಕದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಸಂವಾದಕ್ಕೆ ಮುಕ್ತವಾಗಿರುವುದಾಗಿ ಹೇಳಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್ ಜೊತೆ ರಷ್ಯಾ ಗೌಪ್ಯ ಮಾಹಿತಿ ಹಂಚಿಕೆ: ವಿಶ್ವದಲ್ಲೇ ಅತ್ಯುತ್ತಮ ಗುಪ್ತಚರ ವ್ಯವಸ್ಥೆ ನಮ್ಮದು, ಭಯವಿಲ್ಲ ಎಂದ ಅಮೆರಿಕಾ

LPG Price Hike: ದೇಶದ ನಾಗರಿಕರಿಗೆ ತಟ್ಟಿದ ಬಿಸಿ, ಇರಾನ್ ಯುದ್ಧ ಮಧ್ಯೆ ಎಲ್ ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

ಬಿಹಾರದ ನೂತನ ಸಾರಥಿ ಯಾರು: ದಲಿತ ನಾಯಕನಿಗೆ ಸಿಎಂ ಪಟ್ಟವೋ? ಅಮಿತ್ ಶಾ ಭಂಟನಿಗೆ ಸಿಂಹಾಸನವೋ!

Karnataka Budget 2026-ಬೆಂಗಳೂರು ನಂತರ ರಾಜ್ಯದ ಎರಡನೇ ಐಟಿ ನಗರವಾಗಿ ಮೈಸೂರು ಅಭಿವೃದ್ಧಿ: ಸಿಎಂ ಸಿದ್ದರಾಮಯ್ಯ

ನ್ಯೂಯಾರ್ಕ್ ನಲ್ಲೇ ನಿಮ್ಮ ಬುಡ ಗಟ್ಟಿ ಇಲ್ಲ; ಇನ್ನು ನಮ್ಮ ದೇಶದ ಅಧಿಕಾರ ಬದಲಾಯಿಸ್ತೀರಾ?: ಟ್ರಂಪ್ ಬಗ್ಗೆ ಇರಾನ್ ಅಪಹಾಸ್ಯ!

SCROLL FOR NEXT