ಸಂಸತ್ 
ದೇಶ

ಸಂಸತ್ತಿನ ಬಜೆಟ್ ಅಧಿವೇಶನ: ಜುಲೈ 21ಕ್ಕೆ ಸರ್ವ ಪಕ್ಷ ಸಭೆ, ಟಿಎಂಸಿ ಗೈರು

ಸಂಸತ್ತಿನ ಮುಂಗಾರು ಅಧಿವೇಶನ ಜುಲೈ 22 ರಂದು ಪ್ರಾರಂಭವಾಗಲಿದ್ದು, ಆಗಸ್ಟ್ 12 ರಂದು ಮುಕ್ತಾಯಗೊಳ್ಳಲಿದೆ. ಜುಲೈ 23 ರಂದು ಬಜೆಟ್ ಮಂಡಿಸಲಾಗುವುದು. ಹುತಾತ್ಮರ ದಿನವಾದ ಜುಲೈ 21 ರಂದು ಸರ್ವ ಪಕ್ಷ ಸಭೆಯಲ್ಲಿ ಪಕ್ಷದ ಯಾವುದೇ ಪ್ರತಿನಿಧಿಗಳು ಹಾಜರಾಗುವುದಿಲ್ಲ ಎಂದು ತೃಣಮೂಲ ಕಾಂಗ್ರೆಸ್ ಮೂಲಗಳು ಹೇಳಿವೆ.

ನವದೆಹಲಿ: ಮುಂದಿನ ಸೋಮವಾರದಿಂದ ಸಂಸತ್ತಿನ ಬಜೆಟ್ ಅಧಿವೇಶನ ಪ್ರಾರಂಭವಾಗಲಿರುವ ಹಿನ್ನೆಲೆಯಲ್ಲಿ ಜುಲೈ 21 ರಂದು ಕೇಂದ್ರ ಸರ್ಕಾರ ಸರ್ವ ಪಕ್ಷ ಸಭೆಯನ್ನು ಆಯೋಜಿಸಿದೆ ಎಂದು ಮೂಲಗಳು ತಿಳಿಸಿವೆ.

ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಇದು ಮೊದಲ ಸಭೆಯಾಗಿದೆ. ಅವರು ಸಭೆಯಲ್ಲಿ ಭಾಗವಹಿಸಿದ್ದರೆ, ಇತರ ಪಕ್ಷಗಳ ಸದನದ ನಾಯಕರೊಂದಿಗೆ ಹಾಜರಾಗಲಿದ್ದಾರೆ.

ಸಂಸತ್ತಿನ ಮುಂಗಾರು ಅಧಿವೇಶನ ಜುಲೈ 22 ರಂದು ಪ್ರಾರಂಭವಾಗಲಿದ್ದು, ಆಗಸ್ಟ್ 12 ರಂದು ಮುಕ್ತಾಯಗೊಳ್ಳಲಿದೆ. ಜುಲೈ 23 ರಂದು ಬಜೆಟ್ ಮಂಡಿಸಲಾಗುವುದು. ಹುತಾತ್ಮರ ದಿನವಾದ ಜುಲೈ 21 ರಂದು ಸರ್ವ ಪಕ್ಷ ಸಭೆಯಲ್ಲಿ ಪಕ್ಷದ ಯಾವುದೇ ಪ್ರತಿನಿಧಿಗಳು ಹಾಜರಾಗುವುದಿಲ್ಲ ಎಂದು ತೃಣಮೂಲ ಕಾಂಗ್ರೆಸ್ ಮೂಲಗಳು ಹೇಳಿವೆ.

1993 ರಲ್ಲಿ ಸಿಪಿಐ(ಎಂ) ನೇತೃತ್ವದ ಎಡರಂಗವು ಅಧಿಕಾರದಲ್ಲಿದ್ದಾಗ ರಾಜ್ಯ ಸಚಿವಾಲಯ ಮತ್ತು ಲೇಖಕರ ಭವನಗಳಿಗೆ ಮೆರವಣಿಗೆ ತೆರಳುತ್ತಿದ್ದ 13 ಕಾಂಗ್ರೆಸ್ ಬೆಂಬಲಿಗರು ಕೋಲ್ಕತ್ತಾ ಪೋಲೀಸರ ಗುಂಡಿಗೆ ಬಲಿಯಾದ ನೆನಪಿಗಾಗಿ ಜುಲೈ 21 ಹುತಾತ್ಮರ ದಿನವನ್ನು ಆಚರಿಸಲಾಗುತ್ತದೆ. ಆ ಸಮಯದಲ್ಲಿ ಮಮತಾ ಬ್ಯಾನರ್ಜಿ ಅವರು ರಾಜ್ಯ ಯುವ ಕಾಂಗ್ರೆಸ್ ಮುಖ್ಯಸ್ಥರಾಗಿದ್ದರು ಮತ್ತು ಅವರು ಜನವರಿ 1, 1998 ರಂದು ತೃಣಮೂಲ ಕಾಂಗ್ರೆಸ್ ಸ್ಥಾಪಿಸಿದ ನಂತರವೂ ಪ್ರತಿ ವರ್ಷ ರ್‍ಯಾಲಿ ಆಯೋಜನೆ ಮೂಲಕ ಹುತಾತ್ಮರ ದಿನವನ್ನು ಆಚರಿಸುತ್ತಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT