ರಕ್ಷಣಾ ಕಾರ್ಯಾಚರಣೆ ಚಿತ್ರ 
ದೇಶ

ಕೇರಳ: ನದಿ ಮಧ್ಯದ ಬಂಡೆ ಮೇಲೆ ಸಿಲುಕಿದ್ದ ಮೈಸೂರಿನ ನಾಲ್ವರ ರಕ್ಷಣೆ!

ಮಳೆಯಿಂದಾಗಿ ನೀರಿನ ಮಟ್ಟ ಹೆಚ್ಚಾಗುವ ಸಾಧ್ಯತೆಯ ಬಗ್ಗೆ ಅಗತ್ಯ ಮುನ್ನೆಚ್ಚರಿಕೆ ನೀಡಲಾಗಿದೆ. ಆದರೆ, ಕೆಲಸ ಅರಸಿ ಪಾಲಕ್ಕಾಡ್‌ಗೆ ಬಂದಿದ್ದ ಕರ್ನಾಟಕದ ಮೈಸೂರು ನಿವಾಸಿಗಳಾದ ನಾಲ್ವರು ಎಚ್ಚರಿಕೆ ಅರಿಯದೆ ನದಿಗೆ ಇಳಿದಿದ್ದು, ಏಕಾಏಕಿ ನೀರಿನ ಮಟ್ಟ ಹೆಚ್ಚಾದಾಗ ಸಿಕ್ಕಿಬಿದ್ದಿದ್ದಾರೆ.

ಪಾಲಕ್ಕಾಡ್‌: ಪಾಲಕ್ಕಾಡ್‌ ಜಿಲ್ಲೆಯ ಚಿತ್ತೂರು ನದಿಯ ಮಧ್ಯದ ಬಂಡೆಯೊಂದರಲ್ಲಿ ಸಿಲುಕಿದ್ದ ವೃದ್ಧ ಮಹಿಳೆ ಸೇರಿದಂತೆ ನಾಲ್ವರನ್ನು ಅಗ್ನಿಶಾಮಕ ದಳದ ಸಿಬ್ಬಂದಿ ದಿಟ್ಟ ಕಾರ್ಯಾಚರಣೆಯಲ್ಲಿ ಮಂಗಳವಾರ ರಕ್ಷಿಸಿದ್ದಾರೆ.

ಚಿತ್ತೂರು ನದಿಯ ಜಲಾನಯನ ಪ್ರದೇಶಗಳಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮೂಲತಾರಾ ನಿಯಂತ್ರಕ ಪ್ರದೇಶದಿಂದ ನೀರು ಬಿಡುಗಡೆ ಮಾಡಿದ್ದರಿಂದ ನದಿಯಲ್ಲಿ ನೀರಿನ ಮಟ್ಟ ಏರಿಕೆಯಾಗಿದೆ.

ನಂತರ ಅಗ್ನಿಶಾಮಕ ದಳದ ಸಿಬ್ಬಂದಿ ಕೆಚ್ಚೆದೆಯ ಕಾರ್ಯಾಚರಣೆ ನಡೆಸಿ, ಎಚ್ಚರಿಕೆಯಿಂದ ಬಂಡೆಯನ್ನು ತಲುಪಿದ್ದು, ಹಗ್ಗದ ಮೂಲಕ ಅದನ್ನು ನದಿ ದಡಕ್ಕೆ ಸಂಪರ್ಕಿಸಿದ್ದಾರೆ. ಲೈಫ್ ಜಾಕೆಟ್‌ಗಳನ್ನು ಒದಗಿಸಲಾದ ನಾಲ್ವರು ವ್ಯಕ್ತಿಗಳನ್ನು ಅಗ್ನಿಶಾಮಕ ದಳದ ಸಿಬ್ಬಂದಿ ಸುರಕ್ಷಿತವಾಗಿ ಹಗ್ಗಕ್ಕೆ ಜೋಡಿಸಲಾದ ಗಾಳಿ ತುಂಬಿದ ರಕ್ಷಣಾ ಟ್ಯೂಬ್‌ಗಳ ಮೇಲೆ ದಡಕ್ಕೆ ತರಲಾಯಿತು ಎಂದು ಟಿವಿ ಸುದ್ದಿ ವಾಹಿನಿಗಳು ಪ್ರಸಾರ ಮಾಡಿದ ದೃಶ್ಯಗಳು ತೋರಿಸಿವೆ. ಕೇರಳದ ವಿದ್ಯುತ್ ಸಚಿವ ಕೃಷ್ಣನ್‌ಕುಟ್ಟಿ ಕೂಡಲೇ ಘಟನಾ ಸ್ಥಳಕ್ಕೆ ಆಗಮಿಸಿ ರಕ್ಷಣಾ ಕಾರ್ಯಗಳ ಉಸ್ತುವಾರಿ ವಹಿಸಿಕೊಂಡಿದ್ದಾಗಿ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಗ್ನಿಶಾಮಕ ದಳದ ಸಿಬ್ಬಂದಿಯ ದಿಟ್ಟ ಕಾರ್ಯಾಚರಣೆಗೆ ಸಚಿವ ಕೃಷ್ಣನಕುಟ್ಟಿ ಅಭಿನಂದನೆ ಸಲ್ಲಿಸಿದ್ದಾರೆ. ಪಾಲಕ್ಕಾಡ್‌ನಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, 11 ಸೆಂಟಿಮೀಟರ್‌ನಿಂದ 20 ಸೆಂಮೀ ವರೆಗೆ ಭಾರಿ ಮಳೆಯಾಗುವ ಎಚ್ಚರಿಕೆ ನೀಡಲಾಗಿದೆ. ಮಳೆಯಿಂದಾಗಿ ನೀರಿನ ಮಟ್ಟ ಹೆಚ್ಚಾಗುವ ಸಾಧ್ಯತೆಯ ಬಗ್ಗೆ ಅಗತ್ಯ ಮುನ್ನೆಚ್ಚರಿಕೆ ನೀಡಲಾಗಿದೆ. ಆದರೆ, ಕೆಲಸ ಅರಸಿ ಪಾಲಕ್ಕಾಡ್‌ಗೆ ಬಂದಿದ್ದ ಕರ್ನಾಟಕದ ಮೈಸೂರು ನಿವಾಸಿಗಳಾದ ನಾಲ್ವರು ಎಚ್ಚರಿಕೆ ಅರಿಯದೆ ನದಿಗೆ ಇಳಿದಿದ್ದು, ಏಕಾಏಕಿ ನೀರಿನ ಮಟ್ಟ ಹೆಚ್ಚಾದಾಗ ಸಂಕಷ್ಟಕ್ಕೆ ಸಿಲುಕಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT