ಕೇದಾರನಾಥ ದೇವಾಲಯ- ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ online desk
ದೇಶ

ಚಿನ್ನ ಕಳುವು ಆರೋಪ: ಅವಿಮುಕ್ತೇಶ್ವರಾನಂದ ಸರಸ್ವತಿ ಕೋರ್ಟ್ ಮೊರೆ ಹೋಗಲಿ- ಬದರಿ-ಕೇದಾರ ದೇವಾಲಯ ಮುಖ್ಯಸ್ಥ!

ಎಎನ್ಐ ಗೆ ಸಂದರ್ಶನ ನೀಡಿರುವ ಅಜಯ್, ಕೇದಾರನಾಥ್ ಧಾಮ್ ನಿಂದ ಚಿನ್ನ ನಾಪತ್ತೆಯಾಗಿದೆ ಎಂಬ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಅವರ ಆರೋಪ ದುರದೃಷ್ಟಕರವಾದದ್ದು, ಅವರು ವಾಸ್ತವಾಂಶಗಳನ್ನು ಮುಂದಿಡಲಿ ಎಂದು ಹೇಳಿದ್ದಾರೆ.

ಕೇದಾರನಾಥ: ಕೇದಾರನಾಥ ದೇವಾಲಯದಿಂದ 228 ಕೆ.ಜಿ ಚಿನ್ನವನ್ನು ಕಳುವು ಮಾಡಲಾಗಿದೆ ಎಂಬ ಜ್ಯೋತಿಷ್ಪೀಠದ ಶಂಕರಾಚಾರ್ಯ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಅವರ ಆರೋಪಕ್ಕೆ ಬದರಿ- ಕೇದಾರಾನಾಥ ದೇವಾಲಯ ಸಮಿತಿ ಅಧ್ಯಕ್ಷ ಅಜೇಂದ್ರ ಅಜಯ್ ಪ್ರತಿಕ್ರಿಯೆ ನೀಡಿದ್ದಾರೆ.

ಎಎನ್ಐ ಗೆ ಸಂದರ್ಶನ ನೀಡಿರುವ ಅಜಯ್, ಕೇದಾರನಾಥ್ ಧಾಮ್ ನಿಂದ ಚಿನ್ನ ನಾಪತ್ತೆಯಾಗಿದೆ ಎಂಬ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಅವರ ಆರೋಪ ದುರದೃಷ್ಟಕರವಾದದ್ದು, ಅವರು ವಾಸ್ತವಾಂಶಗಳನ್ನು ಮುಂದಿಡಲಿ ಎಂದು ಹೇಳಿದ್ದಾರೆ.

ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಅವರು ಕೇವಲ ಹೇಳಿಕೆ ನೀಡುವ ಬದಲು ಸಂಬಂಧಪಟ್ಟ ಪ್ರಾಧಿಕಾರವನ್ನು ಸಂಪರ್ಕಿಸಿ, ತಮ್ಮ ಆರೋಪಗಳ ಬಗ್ಗೆ ತನಿಖೆ ನಡೆಸುವಂತೆ ಮನವಿ ಮಾಡಲಿ ಅಥವಾ ಅವರ ಬಳಿ ಸಾಕ್ಷ್ಯಗಳಿದ್ದಲ್ಲಿ ಅವುಗಳನ್ನು ಸುಪ್ರೀಂ ಕೋರ್ಟ್, ಹೈಕೋರ್ಟ್ ಮುಂದಿಡಲಿ ಎಂದು ಅಜಯ್ ಹೇಳಿದ್ದಾರೆ.

ಕೇದಾರನಾಥ ಧಾಮದ ಘನತೆಗೆ ಧಕ್ಕೆ ತರುವ ಹಕ್ಕು ಅವಿಮುಕ್ತೇಶ್ವರಾನಂದ ಸರಸ್ವತಿ ಅವರಿಗೆ ಇಲ್ಲ ಎಂದು ದೇವಾಲಯ ಸಮಿತಿ ಅಧ್ಯಕ್ಷರು ತಿಳಿಸಿದ್ದಾರೆ. ಸ್ವಾಮಿ ಅವಿಮುಕ್ತೇಶ್ವರಾನಂದರು ರಾಜಕೀಯ ಅಜೆಂಡಾವನ್ನು ಮುಂದಿಟ್ಟುಕೊಂಡು ಕೆಲಸ ಮಾಡುತ್ತಿದ್ದರೆ ಅದು ಅತ್ಯಂತ ದುರದೃಷ್ಟಕರ ಎಂದು ಅಜಯ್ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods|ಮೃತರ ಸಂಖ್ಯೆ 165ಕ್ಕೆ ಏರಿಕೆ; ನಾಪತ್ತೆಯಾದವರಲ್ಲಿ 133 ಮಂದಿ ಭಾರತೀಯರು

Iran ಸರ್ವೋಚ್ಚ ನಾಯಕ Mojtaba Khamenei ಸತ್ತಿಲ್ಲ, ಗಂಭೀರವಾಗಿ ಗಾಯಗೊಂಡಿದ್ದಾರೆ: ಹಳೇ Vidoe ಬಿಡುಗಡೆ ಬೆನ್ನಲ್ಲೇ ಅಸಲಿಯತ್ತು ಬಿಚ್ಚಿಟ್ಟ Donald Trump..!

Nepal floods: ಸಾವಿನ ಸಂಖ್ಯೆ 157ಕ್ಕೇರಿಕೆ, 750ಕ್ಕೂ ಅಧಿಕ ಮಂದಿ ನಾಪತ್ತೆ, ನೇಪಾಳಕ್ಕೆ ಭಾರತ ನೆರವು! ಸಹಾಯವಾಣಿ ಬಿಡುಗಡೆ

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನೇಪಾಳ ಪ್ರವಾಹ: ಭಾರತಕ್ಕೆ ದೊಡ್ಡ ಆತಂಕವಿಲ್ಲ, ಜಲಾಶಯಗಳ ನೀರಿನ ಮಟ್ಟ ಇಳಿಕೆ: ಕೇಂದ್ರ ಸ್ಪಷ್ಟನೆ