ಕೇದಾರನಾಥ ದೇವಾಲಯ- ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ online desk
ದೇಶ

ಚಿನ್ನ ಕಳುವು ಆರೋಪ: ಅವಿಮುಕ್ತೇಶ್ವರಾನಂದ ಸರಸ್ವತಿ ಕೋರ್ಟ್ ಮೊರೆ ಹೋಗಲಿ- ಬದರಿ-ಕೇದಾರ ದೇವಾಲಯ ಮುಖ್ಯಸ್ಥ!

ಎಎನ್ಐ ಗೆ ಸಂದರ್ಶನ ನೀಡಿರುವ ಅಜಯ್, ಕೇದಾರನಾಥ್ ಧಾಮ್ ನಿಂದ ಚಿನ್ನ ನಾಪತ್ತೆಯಾಗಿದೆ ಎಂಬ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಅವರ ಆರೋಪ ದುರದೃಷ್ಟಕರವಾದದ್ದು, ಅವರು ವಾಸ್ತವಾಂಶಗಳನ್ನು ಮುಂದಿಡಲಿ ಎಂದು ಹೇಳಿದ್ದಾರೆ.

ಕೇದಾರನಾಥ: ಕೇದಾರನಾಥ ದೇವಾಲಯದಿಂದ 228 ಕೆ.ಜಿ ಚಿನ್ನವನ್ನು ಕಳುವು ಮಾಡಲಾಗಿದೆ ಎಂಬ ಜ್ಯೋತಿಷ್ಪೀಠದ ಶಂಕರಾಚಾರ್ಯ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಅವರ ಆರೋಪಕ್ಕೆ ಬದರಿ- ಕೇದಾರಾನಾಥ ದೇವಾಲಯ ಸಮಿತಿ ಅಧ್ಯಕ್ಷ ಅಜೇಂದ್ರ ಅಜಯ್ ಪ್ರತಿಕ್ರಿಯೆ ನೀಡಿದ್ದಾರೆ.

ಎಎನ್ಐ ಗೆ ಸಂದರ್ಶನ ನೀಡಿರುವ ಅಜಯ್, ಕೇದಾರನಾಥ್ ಧಾಮ್ ನಿಂದ ಚಿನ್ನ ನಾಪತ್ತೆಯಾಗಿದೆ ಎಂಬ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಅವರ ಆರೋಪ ದುರದೃಷ್ಟಕರವಾದದ್ದು, ಅವರು ವಾಸ್ತವಾಂಶಗಳನ್ನು ಮುಂದಿಡಲಿ ಎಂದು ಹೇಳಿದ್ದಾರೆ.

ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಅವರು ಕೇವಲ ಹೇಳಿಕೆ ನೀಡುವ ಬದಲು ಸಂಬಂಧಪಟ್ಟ ಪ್ರಾಧಿಕಾರವನ್ನು ಸಂಪರ್ಕಿಸಿ, ತಮ್ಮ ಆರೋಪಗಳ ಬಗ್ಗೆ ತನಿಖೆ ನಡೆಸುವಂತೆ ಮನವಿ ಮಾಡಲಿ ಅಥವಾ ಅವರ ಬಳಿ ಸಾಕ್ಷ್ಯಗಳಿದ್ದಲ್ಲಿ ಅವುಗಳನ್ನು ಸುಪ್ರೀಂ ಕೋರ್ಟ್, ಹೈಕೋರ್ಟ್ ಮುಂದಿಡಲಿ ಎಂದು ಅಜಯ್ ಹೇಳಿದ್ದಾರೆ.

ಕೇದಾರನಾಥ ಧಾಮದ ಘನತೆಗೆ ಧಕ್ಕೆ ತರುವ ಹಕ್ಕು ಅವಿಮುಕ್ತೇಶ್ವರಾನಂದ ಸರಸ್ವತಿ ಅವರಿಗೆ ಇಲ್ಲ ಎಂದು ದೇವಾಲಯ ಸಮಿತಿ ಅಧ್ಯಕ್ಷರು ತಿಳಿಸಿದ್ದಾರೆ. ಸ್ವಾಮಿ ಅವಿಮುಕ್ತೇಶ್ವರಾನಂದರು ರಾಜಕೀಯ ಅಜೆಂಡಾವನ್ನು ಮುಂದಿಟ್ಟುಕೊಂಡು ಕೆಲಸ ಮಾಡುತ್ತಿದ್ದರೆ ಅದು ಅತ್ಯಂತ ದುರದೃಷ್ಟಕರ ಎಂದು ಅಜಯ್ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

SCROLL FOR NEXT