ನೌಕೆಯು ಸೋಮವಾರದಂದು ಒಮಾನ್‌ನ ಕರಾವಳಿಯಲ್ಲಿ, ರಾಸ್ ಮದ್ರಕಾದಿಂದ ಆಗ್ನೇಯಕ್ಕೆ 25 ನಾಟಿಕಲ್ ಮೈಲಿ ದೂರದಲ್ಲಿ ಡುಕ್ಮ್‌ನ ವಿಲಾಯತ್‌ನಲ್ಲಿ ಮುಳುಗಿತು. Photo | Special arrangement
ದೇಶ

ಒಮಾನ್ ಕರಾವಳಿಯಲ್ಲಿ ಮುಳುಗಿದ ತೈಲ ಹಡಗು; ಎಂಟು ಭಾರತೀಯರು ಸೇರಿ 9 ಜನರ ರಕ್ಷಣೆ

ಹಡಗಿನಲ್ಲಿ 13 ಭಾರತೀಯರು ಸೇರಿದಂತೆ ಒಟ್ಟು 16 ಸಿಬ್ಬಂದಿ ಇದ್ದರು. ಉಳಿದ ಸಿಬ್ಬಂದಿಗಾಗಿ ಹುಡುಕಾಟ ಮತ್ತು ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ.

ನವದೆಹಲಿ: ಒಮಾನ್‌ ಕರಾವಳಿಯಲ್ಲಿ ಭಾನುವಾರ ಮುಳುಗಿದ ಎಂಟಿ ಫಾಲ್ಕನ್‌ ಪ್ರೆಸ್ಟೀಜ್‌ ತೈಲ ಪೂರೈಕೆ ಹಡಗಿನಿಂದ ಒಂಬತ್ತು ಸಿಬ್ಬಂದಿ - ಎಂಟು ಭಾರತೀಯರು ಮತ್ತು ಒಬ್ಬರು ಶ್ರೀಲಂಕಾದವರನ್ನು ರಕ್ಷಿಸಲಾಗಿದೆ.

ಹಡಗಿನಲ್ಲಿ 13 ಭಾರತೀಯರು ಸೇರಿದಂತೆ ಒಟ್ಟು 16 ಸಿಬ್ಬಂದಿ ಇದ್ದರು. ಉಳಿದ ಸಿಬ್ಬಂದಿಗಾಗಿ ಹುಡುಕಾಟ ಮತ್ತು ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ. ರಕ್ಷಿಸಲಾದ 9 ಸಿಬ್ಬಂದಿ ಮಸ್ಕತ್‌ನ ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಡುಕ್ಮ್‌ನ ವಿಲಾಯತ್‌ನಲ್ಲಿ ಸೋಮವಾರ ಈ ಹಡಗು ಮಗುಚಿ ಬಿದ್ದಿದ್ದು, ಇದು ಕೊಮೊರೊಸ್‌ ದೇಶದ ಧ್ವಜ ಹೊಂದಿದೆ ಎಂದು ಒಮಾನ್ ಕಡಲ ಪ್ರಾಧಿಕಾರ ತಿಳಿಸಿದೆ.

ದುಬೈನ ಹಮ್ರಿಯಾ ಬಂದರಿನಿಂದ ಹೊರಟಿದ್ದ ಹಡಗು ಯೆಮೆನ್ ಬಂದರು ನಗರಿ ಏಡೆನ್‌ಗೆ ಹೋಗುತ್ತಿತ್ತು ಎಂದು ಶಿಪ್ಪಿಂಗ್ ವೆಬ್‌ಸೈಟ್ (marinetraffic.com)ನಲ್ಲಿ ಉಲ್ಲೇಖಿಸಲಾಗಿದೆ. ಡುಕ್ಮ್ ಬಂದರು ಒಮಾನ್‌ನ ತೈಲ ಮತ್ತು ಅನಿಲ ಗಣಿಗಾರಿಕೆ ಯೋಜನೆಗಳ ಪ್ರಮುಖ ಕೇಂದ್ರವಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಸರ್ಕಾರಿ ಸಂಸ್ಥೆಗಳು, ಸಾರ್ವಜನಿಕ ಸ್ಥಳಗಳಲ್ಲಿ RSS ಚಟುವಟಿಕೆಗಳನ್ನು ನಿಷೇಧಿಸಿ: ಮುಖ್ಯಮಂತ್ರಿಗೆ ಪ್ರಿಯಾಂಕ್ ಖರ್ಗೆ ಪತ್ರ

RSS ನಿಷೇಧಕ್ಕೆ ಕರೆ: ಸಚಿವ ಪ್ರಿಯಾಂಕ್ ಖರ್ಗೆ ಬೌದ್ಧಿಕ ದಾರಿದ್ರ್ಯತನ ತೋರಿಸುತ್ತದೆ, ಯತ್ನಾಳ್ ಕಿಡಿ!

ಭಾರತ- ಬಾಂಗ್ಲಾದೇಶ ಗಡಿ: ರೂ. 2.82 ಕೋಟಿ ಮೌಲ್ಯದ 'ಚಿನ್ನದ ಬಿಸ್ಕತ್ತು' ಜೊತೆಗೆ ಕಳ್ಳಸಾಗಣೆದಾರನನ್ನು ಬಂಧಿಸಿದ BSF!

SCROLL FOR NEXT