ನೀತಿ ಆಯೋಗ  
ದೇಶ

ನೀತಿ ಆಯೋಗ ಮರು ರಚನೆ: 15 ಸಚಿವರು, ಬಿಜೆಪಿ ಮಿತ್ರಪಕ್ಷಗಳು ಸೇರ್ಪಡೆ

ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷರಾಗಿ ಉಳಿದಿದ್ದಾರೆ. ಅಧಿಕೃತ ಅಧಿಸೂಚನೆಯ ಪ್ರಕಾರ ಅರ್ಥಶಾಸ್ತ್ರಜ್ಞ ಸುಮನ್ ಕೆ ಬೆರಿ ಅವರು ನೀತಿ ಆಯೋಗದ ಉಪಾಧ್ಯಕ್ಷರಾಗಿ ಮುಂದುವರಿಯುತ್ತಾರೆ.

ನವದೆಹಲಿ: ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ-3.0 ನೀತಿ ಆಯೋಗವನ್ನು ಪುನರ್‌ ರಚಿಸಿದ್ದು, ನಾಲ್ಕು ಪೂರ್ಣಾವಧಿ ಸದಸ್ಯರು ಮತ್ತು ಬಿಜೆಪಿ ಮಿತ್ರಪಕ್ಷಗಳು ಸೇರಿದಂತೆ 15 ಕೇಂದ್ರ ಸಚಿವರನ್ನು ಪದನಿಮಿತ್ತ ಸದಸ್ಯರು ಅಥವಾ ವಿಶೇಷ ಆಹ್ವಾನಿತರನ್ನಾಗಿ ನೇಮಕ ಮಾಡಲಾಗಿದೆ.

ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷರಾಗಿ ಉಳಿದಿದ್ದಾರೆ. ಅಧಿಕೃತ ಅಧಿಸೂಚನೆಯ ಪ್ರಕಾರ ಅರ್ಥಶಾಸ್ತ್ರಜ್ಞ ಸುಮನ್ ಕೆ ಬೆರಿ ಅವರು ನೀತಿ ಆಯೋಗದ ಉಪಾಧ್ಯಕ್ಷರಾಗಿ ಮುಂದುವರಿಯುತ್ತಾರೆ.

ವಿಜ್ಞಾನಿ ವಿ ಕೆ ಸಾರಸ್ವತ್, ಕೃಷಿ ಅರ್ಥಶಾಸ್ತ್ರಜ್ಞ ರಮೇಶ್ ಚಂದ್, ಮಕ್ಕಳ ತಜ್ಞ ವಿ ಕೆ ಪಾಲ್ ಮತ್ತು ಮ್ಯಾಕ್ರೋ-ಎಕನಾಮಿಸ್ಟ್ ಅರವಿಂದ ವೀರಮಾನಿ ಅವರು ಸರ್ಕಾರದ ಚಿಂತಕರ ಚಾವಡಿಯ ಪೂರ್ಣಾವಧಿ ಸದಸ್ಯರಾಗಿ ಮುಂದುವರಿಯಲಿದ್ದಾರೆ.

ನಾಲ್ವರು ಪದನಿಮಿತ್ತ ಸದಸ್ಯರು ರಾಜನಾಥ್ ಸಿಂಗ್ (ರಕ್ಷಣಾ ಖಾತೆ ಸಚಿವ ), ಅಮಿತ್ ಶಾ (ಗೃಹ ಖಾತೆ ಸಚಿವ), ಶಿವರಾಜ್ ಸಿಂಗ್ ಚೌಹಾಣ್ (ಕೃಷಿ ಖಾತೆ ) ಮತ್ತು ನಿರ್ಮಲಾ ಸೀತಾರಾಮನ್ (ಹಣಕಾಸು ಖಾತೆ).

ನೀತಿ ಆಯೋಗದ ಪರಿಷ್ಕೃತ ಸಂಯೋಜನೆಯನ್ನು ಪ್ರಧಾನಿ ಅನುಮೋದಿಸಿದ್ದಾರೆ ಎಂದು ಅಧಿಸೂಚನೆ ತಿಳಿಸಿದೆ. ಪುನರ್ ರಚಿಸಲಾದ ನೀತಿ ಆಯೋಗದ ವಿಶೇಷ ಆಹ್ವಾನಿತರು ಕೇಂದ್ರ ಸಚಿವರಾದ ನಿತಿನ್ ಗಡ್ಕರಿ (ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳು ಖಾತೆ ಸಚಿವರು), ಜಗತ್ ಪ್ರಕಾಶ್ ನಡ್ಡಾ (ಆರೋಗ್ಯ ಇಲಾಖೆ ಸಚಿವರು) ಒಳಗೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT