ಅನ್ವಿ ಕಾಮ್ದಾರ್ Photo | Instagram
ದೇಶ

ಮಹಾರಾಷ್ಟ್ರ: ವಿಡಿಯೋ ಮಾಡುವ ವೇಳೆ ಜಲಪಾತದ ಕಮರಿಗೆ ಬಿದ್ದು ರೀಲ್ಸ್ ಸ್ಟಾರ್ ಅನ್ವಿ ಕಾಮ್ದಾರ್‌ ಸಾವು

27 ವರ್ಷದ ರೀಲ್ಸ್ ಸ್ಟಾರ್ ಅನ್ವಿ ಅವರು ತಮ್ಮ ಏಳು ಸ್ನೇಹಿತರೊಂದಿಗೆ ಪ್ರವಾಸಕ್ಕೆಂದು ಮಂಗಳವಾರ ಪಕ್ಕದ ರಾಯಗಡ ಜಿಲ್ಲೆಯ ಮಂಗಾಂವ್‌ನ ಪ್ರಸಿದ್ಧ ಕುಂಭೆ ಜಲಪಾತಕ್ಕೆ ತೆರಳಿದ್ದರು.

ಮುಂಬೈ: ರೀಲ್ಸ್ ಮೂಲಕ ಖ್ಯಾತಿ ಗಳಿಸಿದ್ದ ಮುಂಬೈ ಮೂಲದ ಚಾರ್ಟರ್ಡ್ ಅಕೌಂಟೆಂಟ್ ಅನ್ವಿ ಕಾಮ್ದಾರ್‌ ಅವರು ಬುಧವಾರ ಮಹಾರಾಷ್ಟ್ರದ ರಾಯಗಢ ಜಿಲ್ಲೆಯಲ್ಲಿ ವಿಡಿಯೋ ಮಾಡುವಾಗ ಜಲಪಾತದ ಕಮರಿಗೆ ಬಿದ್ದು ಸಾವನ್ನಪ್ಪಿದ್ದಾರೆ.

27 ವರ್ಷದ ರೀಲ್ಸ್ ಸ್ಟಾರ್ ಅನ್ವಿ ಅವರು ತಮ್ಮ ಏಳು ಸ್ನೇಹಿತರೊಂದಿಗೆ ಪ್ರವಾಸಕ್ಕೆಂದು ಮಂಗಳವಾರ ಪಕ್ಕದ ರಾಯಗಡ ಜಿಲ್ಲೆಯ ಮಂಗಾಂವ್‌ನ ಪ್ರಸಿದ್ಧ ಕುಂಭೆ ಜಲಪಾತಕ್ಕೆ ತೆರಳಿದ್ದರು. ಜಲಪಾತದ ಬಳಿ ವಿಡಿಯೋ ಮಾಡುತ್ತಿದ್ದ ವೇಳೆ 300 ಅಡಿ ಆಳದ ಕಮರಿಗೆ ಬಿದ್ದಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ.

ಮಂಗಾಂವ್ ಪೊಲೀಸ್ ಠಾಣೆಯ ಅಧಿಕಾರಿ ಪ್ರಕಾರ, ಮುಂಬೈನ ಮುಲುಂಡ್ ಪ್ರದೇಶದ ನಿವಾಸಿ ಕಾಮ್ದಾರ್ ಮಳೆಯ ನಡುವೆ ತಮ್ಮ ಸ್ನೇಹಿತರೊಂದಿಗೆ ಸುಂದರವಾದ ಜಲಪಾತಕ್ಕೆ ಬಂದಿದ್ದರು ಮತ್ತು ಸುತ್ತಮುತ್ತಲಿನ ರಮಣೀಯ ದೃಶ್ಯಗಳನ್ನು ವಿಡಿಯೋ ಮಾಡುತ್ತಿದ್ದಾಗ ಕಾಲು ಜಾರಿ ಕಮರಿಗೆ ಬಿದ್ದಿದ್ದಾರೆ ಎಂದು ಅವರು ಹೇಳಿದ್ದಾರೆ.

ಅನ್ವಿ ಕಮರಿಗೆ ಬಿದ್ದ ಬಗ್ಗೆ ಆಕೆಯ ಸ್ನೇಹಿತರು ಪೊಲೀಸರಿಗೆ ಮಾಹಿತಿ ನೀಡಿದ್ದು, ನಂತರ ಪೊಲೀಸರು ಹಾಗೂ ಸ್ಥಳೀಯರು ಸ್ಥಳಕ್ಕೆ ಧಾವಿಸಿ, ಆರು ಗಂಟೆಗಳ ರಕ್ಷಣಾ ಕಾರ್ಯಾಚರಣೆಯ ಬಳಿಕ ಅನ್ವಿಯನ್ನು ಕಮರಿಯಿಂದ ಹೊರತೆಗೆಯಲಾಯಿತು. ಗಂಭೀರವಾಗಿ ಗಾಯಗೊಂಡಿದ್ದ ಅನ್ವಿ ಅವರನ್ನು ಹತ್ತಿರದ ಮಂಗಾವ್ ತಾಲೂಕು ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಅಲ್ಲಿ ಅವರು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಘಟನೆಯ ನಂತರ ತಹಶೀಲ್ದಾರ್ ಮತ್ತು ಮನಗಾಂವ್ ಪೊಲೀಸ್ ಇನ್​ಸ್ಪೆಕ್ಟರ್​ ಸೇರಿದಂತೆ ಸ್ಥಳೀಯ ಅಧಿಕಾರಿಗಳು ಪ್ರವಾಸಿಗರು ಮತ್ತು ನಾಗರಿಕರಿಗೆ ಎಚ್ಚರಿಕೆ ವಹಿಸುವಂತೆ ಮನವಿ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

SCROLL FOR NEXT