ಅಖಿಲೇಶ್ ಯಾದವ್ 
ದೇಶ

ಮಾನ್ಸೂನ್ ಆಫರ್: 100 ಶಾಸಕರನ್ನು ಕರೆತನ್ನಿ, ಸರ್ಕಾರ ರಚಿಸಿ; BJP ಬಿರುಕಿನ ಬಗ್ಗೆ ಅಖಿಲೇಶ್ ಪೋಸ್ಟ್!

2022 ರ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಸಮಾಜವಾದಿ ಪಕ್ಷ 111 ಸ್ಥಾನಗಳನ್ನು ಗೆದ್ದಿದೆ. ನಮಗೆ 100 ಅತೃಪ್ತ ಬಿಜೆಪಿ ಶಾಸಕರ ಬೆಂಬಲ ಸಿಕ್ಕರೆ, ನಾವು ಸುಲಭವಾಗಿ ಸರ್ಕಾರ ರಚಿಸುತ್ತೇವೆ" ಎಂದು ಎಸ್‌ಪಿ ನಾಯಕ ವಿವರಿಸಿದರು.

ಲಕ್ನೋ: ಉತ್ತರ ಪ್ರದೇಶ ಬಿಜೆಪಿಯಲ್ಲಿ ಬಿರುಕು ಮೂಡಿದೆ ಎಂಬ ಊಹಾಪೋಹಗಳ ನಡುವೆ ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಗುರುವಾರ ತಮ್ಮ ಎಕ್ಸ್‌ನಲ್ಲಿ ಬರೆದು ಕೊಂಡಿರುವ ವಿಷಯ ಹಲವರ ನಿದ್ದೆಗೆಡುವಂತೆ ಮಾಡಿದೆ.

ರಾಜ್ಯದಲ್ಲಿ ಹೊಸ ಸರ್ಕಾರ ರಚಿಸಲು ಆಡಳಿತ ಪಕ್ಷದ ಶಾಸಕರನ್ನು ಪಕ್ಷ ಬದಲಾಯಿಸುವಂತೆ ಹೇಳಲಾಗುತ್ತಿದೆ ಎನ್ನಲಾಗುತ್ತಿದೆ. ಹೀಗಾಗಿ ಮಾನ್ಸೂನ್ ಆಫರ್: ನೂರು ತನ್ನಿ, ಸರ್ಕಾರ ರಚಿಸಿ ಎಂದು ಅಖಿಲೇಶ್ ಪೋಸ್ಟ್ ಮಾಡಿದ್ದಾರೆ.

ಯಾದವ್ ಅವರು ತಮ್ಮ ಪೋಸ್ಟ್‌ನಲ್ಲಿ ಯಾರನ್ನೂ ಹೆಸರಿಸದಿದ್ದರೂ, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ಅತೃಪ್ತಗೊಂಡು ಬಿಜೆಪಿ ತೊರೆಯಲು ಸಿದ್ದರಾಗಿರುವವರಿಗೆ ಇದು ಸಂದೇಶವಾಗಿದೆ ಎಂದು ಹೆಸರು ಹೇಳಲು ಬಯಸದ ಎಸ್‌ಪಿಯ ಹಿರಿಯ ನಾಯಕರೊಬ್ಬರು ತಿಳಿಸಿದ್ದಾರೆ. 2022 ರ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಸಮಾಜವಾದಿ ಪಕ್ಷ 111 ಸ್ಥಾನಗಳನ್ನು ಗೆದ್ದಿದೆ. ನಮಗೆ 100 ಅತೃಪ್ತ ಬಿಜೆಪಿ ಶಾಸಕರ ಬೆಂಬಲ ಸಿಕ್ಕರೆ, ನಾವು ಸುಲಭವಾಗಿ ಸರ್ಕಾರ ರಚಿಸುತ್ತೇವೆ" ಎಂದು ಎಸ್‌ಪಿ ನಾಯಕ ವಿವರಿಸಿದರು.

ಬಿಜೆಪಿಯ ರಾಜ್ಯ ಘಟಕದಲ್ಲಿ ಭಿನ್ನಾಭಿಪ್ರಾಯದ ಬಗ್ಗೆ ರಾಜ್ಯ ಪಕ್ಷದ ಸಭೆಯಲ್ಲಿ ಮಾತನಾಡಿದ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ, ಸರ್ಕಾರಕ್ಕಿಂತ ಪಕ್ಷ ದೊಡ್ಡದಾಗಿದೆ ಎಂದು ಹೇಳಿದ್ದಾರೆ. ಎಲ್ಲಾ ಸಚಿವರು, ಶಾಸಕರು ಮತ್ತು ಸಾರ್ವಜನಿಕ ಪ್ರತಿನಿಧಿಗಳು ಪಕ್ಷದ ಕಾರ್ಯಕರ್ತರನ್ನು ಗೌರವಿಸಬೇಕು ಎಂದು ಅವರು ಒತ್ತಾಯಿಸಿದರು.

ಮೌರ್ಯ ಅವರು ಮಂಗಳವಾರ ದೆಹಲಿಯಲ್ಲಿ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರನ್ನು ಭೇಟಿ ಮಾಡಿದ್ದರು ಆದರೆ ಬಿಜೆಪಿ ಅಥವಾ ಉಪಮುಖ್ಯಮಂತ್ರಿ ಮೌರ್ಯ ಸಭೆಯ ಬಗ್ಗೆ ಏನನ್ನೂ ಹೇಳಲಿಲ್ಲ. ಲೋಕಸಭೆ ಚುನಾವಣೆಯಲ್ಲಿ ಸೋತವರು ಸೇರಿದಂತೆ ಉತ್ತರ ಪ್ರದೇಶದ ಹಲವಾರು ಬಿಜೆಪಿ ನಾಯಕರು ಮುಖ್ಯಮಂತ್ರಿಯವರ ಕಾರ್ಯಶೈಲಿಯನ್ನು ಟೀಕಿಸಿದ್ದಾರೆ ಮತ್ತು ತಮ್ಮ ಸೋಲಿಗೆ ಒಂದು ಕಾರಣವೆಂದು ಉಲ್ಲೇಖಿಸಿದ್ದಾರೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ತಮಿಳು ನಾಡು: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ TVK ಪಕ್ಷ ಸೇರಿದ ಸೆಂಗೊಟ್ಟೈಯನ್ ವಿಜಯ್

CM ಪಟ್ಟಕ್ಕಾಗಿ ಕಿತ್ತಾಟ: ಡಿಕೆಶಿಗೆ 'ಹೈಕಮಾಂಡ್' ಒಲವು ತೋರಿದ್ರೆ, ಸಿದ್ದರಾಮಯ್ಯರ ಮುಂದಿನ ಪ್ಲಾನ್ ಏನು?

ಶಂಕಿತ ದಾಳಿಕೋರ 'ನರಕ ದೇಶ' ಆಫ್ಘಾನಿಸ್ತಾನದಿಂದ ಬಂದವನು, ಇದು ಭಯೋತ್ಪಾದಕ ಕೃತ್ಯ: ನ್ಯಾಷನಲ್ ಗಾರ್ಡ್ ಮೇಲೆ ದಾಳಿಗೆ Donald Trump ತೀವ್ರ ಖಂಡನೆ

450 ಕೋಟಿ ರೂ. ಮೌಲ್ಯದ ಧರ್ಮೇಂದ್ರ ಆಸ್ತಿ ಯಾರ ಪಾಲಾಗುತ್ತೆ? ಕುತೂಹಲ ಕೆರಳಿಸಿದ ಹೇಮಾ ಮಾಲಿನಿ ಪೋಸ್ಟ್!

ಇದು ಜೈಲಲ್ಲ, ಮದ್ಯದ ಫ್ಯಾಕ್ಟರಿ: ಕೈದಿಗಳಿಂದ ಮದ್ಯ ತಯಾರಿಕೆ? ಏನಾಗುತ್ತಿದೆ ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ?

SCROLL FOR NEXT