ಹಳಿ ತಪ್ಪಿದ ರೈಲು 
ದೇಶ

ಉತ್ತರ ಪ್ರದೇಶ: ಚಂಡೀಗಢ-ದಿಬ್ರುಗಢ ಎಕ್ಸ್‌ಪ್ರೆಸ್‌ ರೈಲಿನ ಎಂಟು ಬೋಗಿಗಳು ಹಳಿತಪ್ಪಿ ದುರಂತ; ಇಬ್ಬರು ಸಾವು, 34 ಮಂದಿ ಗಾಯ

ಲಖನೌದಿಂದ ಸುಮಾರು 150 ಕಿಮೀ ದೂರದಲ್ಲಿರುವ ಮೋತಿಗಂಜ್ ಮತ್ತು ಜಿಲಾಹಿ ರೈಲು ನಿಲ್ದಾಣಗಳ ನಡುವೆ ಈ ಅಪಘಾತ ಸಂಭವಿಸಿದೆ.

ಲಖನೌ: ಉತ್ತರ ಪ್ರದೇಶದ ಗೊಂಡಾ ಬಳಿ ಚಂಡೀಗಢ-ದಿಬ್ರುಗಢ ಎಕ್ಸ್‌ಪ್ರೆಸ್‌ ರೈಲಿನ ಎಂಟು ಬೋಗಿಗಳು(15904) ಗುರುವಾರ ಹಳಿತಪ್ಪಿದ್ದು, ಘಟನೆಯಲ್ಲಿ ಇಬ್ಬರು ಮೃತಪಟ್ಟಿದ್ದಾರೆ ಮತ್ತು 34 ಮಂದಿ ಗಾಯಗೊಂಡಿದ್ದಾರೆ.

ಲಖನೌದಿಂದ ಸುಮಾರು 150 ಕಿಮೀ ದೂರದಲ್ಲಿರುವ ಮೋತಿಗಂಜ್ ಮತ್ತು ಜಿಲಾಹಿ ರೈಲು ನಿಲ್ದಾಣಗಳ ನಡುವೆ ಈ ಅಪಘಾತ ಸಂಭವಿಸಿದೆ.

ರೈಲ್ವೆ ಅಧಿಕಾರಿಗಳ ಪ್ರಕಾರ, ಐದು ಎಸಿ, ಒಂದು ಪ್ಯಾಂಟ್ರಿ ಮತ್ತು ಒಂದು ಜನರಲ್ ಬೋಗಿ ಸೇರಿದಂತೆ ಎಂಟು ಬೋಗಿಗಳು ಹಳಿಯಿಂದ ಹೊರಬಂದಿದ್ದು, ಉಳಿದ ಬೋಗಿಗಳು ಹಳಿಗಳ ಮೇಲೆ ಉಳಿದಿವೆ.

ಎಕ್ಸ್‌ಪ್ರೆಸ್ ರೈಲು ಹಳಿ ತಪ್ಪುವ ಮೊದಲು ಸ್ಫೋಟದ ಶಬ್ದ ಕೇಳಿ ಬಂದಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಆದರೆ ಹೆಚ್ಚಿನ ವಿವರಗಳನ್ನು ನೀಡಲು ಅವರು ನಿರಾಕರಿಸಿದ್ದಾರೆ.

ಇಬ್ಬರು ಗಾಯಾಳುಗಳಲ್ಲಿ ಒಬ್ಬರು ಸ್ಥಳದಲ್ಲೇ ಮೃತಪಟ್ಟರೆ, ಗಂಭೀರವಾಗಿ ಗಾಯಗೊಂಡಿದ್ದ ಮತ್ತೊಬ್ಬರು ಗೊಂಡಾ ಜಿಲ್ಲಾಸ್ಪತ್ರೆಯಿಂದ ಲಖನೌಗೆ ಕರೆತರುವಾಗ ಮೃತಪಟ್ಟಿದ್ದಾರೆ.

ಮೃತರನ್ನು ಅರಾರಿಯಾ(ಬಿಹಾರ) ಮೂಲದ ಸರೋಜ್ ಕುಮಾರ್ ಸಿಂಗ್(30) ಮತ್ತು ಚಂಡೀಗಢದ ರಾಹುಲ್(38) ಎಂದು ಗುರುತಿಸಲಾಗಿದೆ.

ಆರಂಭದಲ್ಲಿ, ಅಪಘಾತದ ಸ್ಥಳಕ್ಕೆ ಧಾವಿಸಿದ ಉತ್ತರ ಪ್ರದೇಶ ಉಪ ಮುಖ್ಯಮಂತ್ರಿ ಬ್ರಜೇಶ್ ಪಾಠಕ್ ಅವರು, ರೈಲು ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ ಎಂದು ಹೇಳಿದ್ದರು. ಆದರೆ ನಂತರ ಅವರಲ್ಲಿ ಇಬ್ಬರು ಚೇತರಿಸಿಕೊಂಡಿದ್ದಾರೆ ಎಂದು ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT