ಶಶಿ ತರೂರ್ ಮತ್ತು ಸಿದ್ದರಾಮಯ್ಯ 
ದೇಶ

ಕನ್ನಡಿಗರಿಗೆ ಉದ್ಯೋಗ ಮೀಸಲಾತಿ: ಕರ್ನಾಟಕ ಸರ್ಕಾರದ ಕ್ರಮ ಖಂಡಿಸಿದ Shashi Tharoor

ಒಂದೊಮ್ಮೆ ಎಲ್ಲಾ ರಾಜ್ಯಗಳು ಇಂಥ ಕಾನೂನು ಜಾರಿಗೆ ತರಲು ಹೊರಟರೆ ಅದು ಸಂವಿಧಾನ ವಿರೋಧಿಯಾಗಲಿದೆ. ಹೀಗಾಗಿ ಕರ್ನಾಟಕದ ಮುಖ್ಯಮಂತ್ರಿಯದ್ದು ಬುದ್ಧಿವಂತಿಕೆಯ ನಿರ್ಧಾರವಲ್ಲ’

ನವದೆಹಲಿ: ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಕಲ್ಪಿಸುವ ಕರ್ನಾಟಕ ಸರ್ಕಾರದ ಮಸೂದೆಗೆ ಮಾಜಿ ಕೇಂದ್ರ ಸಚಿವ ಹಾಗೂ ಕಾಂಗ್ರೆಸ್ ಸಂಸದ ಶಶಿತರೂರ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಕರ್ನಾಟಕ ರಾಜ್ಯದ ಖಾಸಗಿ ಉದ್ಯಮಗಳ ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲಾತಿ ನೀಡುವ ಮಸೂದೆಯನ್ನು ಮಂಡಿಸಿ ಜಾರಿ ಮಾಡಲು ಹೊರಟಿದ್ದ ರಾಜ್ಯ ಸರ್ಕಾರದ ಕ್ರಮವು ಸಂವಿಧಾನ ವಿರೋಧ ಹಾಗೂ ವಿವೇಚನಾರಹಿತ ಕ್ರಮ ಎಂದು ಕಾಂಗ್ರೆಸ್ ಸಂಸದ ಶಶಿ ತರೂರ್ ಹೇಳಿದ್ದು, ಮಾತ್ರವಲ್ಲದೇ ಘೋಷಿಸಿದ ಕ್ರಮದಿಂದ ಹಿಂದೆ ಸರಿದ ಸಿದ್ದರಾಮಯ್ಯ ಸರ್ಕಾರದ ಕ್ರಮ ಕುರಿತೂ ತರೂರ್ ಸಂತಸ ವ್ಯಕ್ತಪಡಿಸಿದ್ದಾರೆ.

‘ಸಂವಿಧಾನದ ಪ್ರಕಾರ ದೇಶದ ಪ್ರತಿಯೊಬ್ಬ ಪ್ರಜೆಗೂ ದೇಶದೊಳಗೆ ಸ್ವತಂತ್ರವಾಗಿ ಬದುಕುವ, ವೃತ್ತಿ ಕೈಗೊಳ್ಳುವ ಹಾಗೂ ಸಂಚರಿಸುವ ಮುಕ್ತ ಅವಕಾಶವನ್ನು ನೀಡಲಾಗಿದೆ. ಒಂದೊಮ್ಮೆ ಎಲ್ಲಾ ರಾಜ್ಯಗಳು ಇಂಥ ಕಾನೂನು ಜಾರಿಗೆ ತರಲು ಹೊರಟರೆ ಅದು ಸಂವಿಧಾನ ವಿರೋಧಿಯಾಗಲಿದೆ. ಹೀಗಾಗಿ ಕರ್ನಾಟಕದ ಮುಖ್ಯಮಂತ್ರಿಯದ್ದು ಬುದ್ಧಿವಂತಿಕೆಯ ನಿರ್ಧಾರವಲ್ಲ’ ಎಂದು ಹೇಳಿದ್ದಾರೆ.

ಅಂತೆಯೇ ‘ಇಂಥದ್ದೇ ಪ್ರಯತ್ನಕ್ಕೆ ಕೈಹಾಕಿದ್ದ ಹರಿಯಾಣ ಸರ್ಕಾರದ ಮಸೂದೆಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿತ್ತು. ಆದರೆ ಕರ್ನಾಟಕ ಇಂಥದ್ದೊಂದು ಯತ್ನಕ್ಕೆ ಏಕೆ ಕೈಹಾಕಿತು ಎಂಬುದೇ ಅರ್ಥವಾಗುತ್ತಿಲ್ಲ. ಸರ್ಕಾರದ ಈ ಕ್ರಮದಿಂದ ಅಲ್ಲಿನ ವಹಿವಾಟು, ಉದ್ದಿಮೆಗಳು ನೆರೆಯ ರಾಜ್ಯಗಳಾದ ತಮಿಳುನಾಡು, ಕೇರಳಕ್ಕೆ ಸ್ಥಳಾಂತರಗೊಳ್ಳುವ ಅಪಾಯವೂ ಇದೆ’ ಎಂದು ಶಶಿತರೂರ್ ಎಚ್ಚರಿಕೆ ನೀಡಿದ್ದಾರೆ.

ನಿರ್ಧಾರದಿಂದ ಹಿಂದೆ ಸರಿದ ರಾಜ್ಯ ಸರ್ಕಾರ

ರಾಜ್ಯದ ಖಾಸಗಿ ಉದ್ಯಮಗಳ ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲಾತಿ ಕಲ್ಪಿಸುವ ನಿಟ್ಟಿನಲ್ಲಿ ರಾಜ್ಯ ಸಚಿವ ಸಂಪುಟ ಅನುಮೋದನೆ ಪಡೆದಿತ್ತು. ಆದರೆ ನ್ಯಾಸ್‌ಕಾಮ್ ಸೇರಿದಂತೆ ಉದ್ಯಮದಿಂದ ವ್ಯಕ್ತವಾದ ತೀವ್ರ ವಿರೋಧ ಹಾಗೂ ರಾಜ್ಯದಿಂದ ವಲಸೆ ಹೋಗುವ ಬೆದರಿಕೆ ನಂತರ ಅದಕ್ಕೆ ತಾತ್ಕಾಲಿಕ ತಡೆ ನೀಡಿತ್ತು. ಆದರೆ ಇದೇ ವಿಚಾರವಾಗಿ ಇದೀಗ ರಾಜ್ಯಾದ್ಯಂತ ಕನ್ನಡಪರ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

SCROLL FOR NEXT