ಸಿಎಂ ಯೋಗಿ ಆದಿತ್ಯನಾಥ 
ದೇಶ

ಕನ್ವರ್ ಯಾತ್ರೆ ಮಾರ್ಗದಲ್ಲಿ ಅಂಗಡಿಗಳು ಮಾಲೀಕರ ಹೆಸರು ನಮೂದಿಸುವಂತೆ ಸಿಎಂ ಯೋಗಿ ಆದೇಶ: ಸಂಗಮ್ ಹೆಸರು ಬದಲಿಸಿದ ಸಲೀಂ!

ದೆಹಲಿ-ಡೆಹ್ರಾಡೂನ್‌ನ ರಾಂಪುರಿ ಬಳಿ 25 ವರ್ಷಗಳಿಂದ ಸಲೀಂ ಎಂಬಾತ ಸಂಗಮ್ ಶುದ್ಧ ಸಸ್ಯಾಹಾರಿ ರೆಸ್ಟೋರೆಂಟ್ ನಡೆಸುತ್ತಿದ್ದನು. ಜಿಲ್ಲಾಡಳಿತ ಸೂಚನೆ ಬೆನ್ನಲ್ಲೇ ತನ್ನ ಸಸ್ಯಹಾರಿ ರೆಸ್ಟೋರೆಂಟ್ ಗೆ ಸಲೀಂ ಪ್ಯೂರ್ ವೆಜಿಟೇರಿಯನ್ ರೆಸ್ಟೋರೆಂಟ್ ಎಂಬ ಬೋರ್ಡ್ ಅನ್ನು ಹಾಕಲಾಗಿದೆ.

ಮುಜಫರ್ನಗರ: ಕನ್ವರ್ ಮಾರ್ಗದಲ್ಲಿರುವ ಢಾಬಾಗಳು, ಅಂಗಡಿಗಳು ಅಥವಾ ಬಂಡಿಗಳ ಮಾಲೀಕರು ತಮ್ಮ ಹೆಸರನ್ನು ಪ್ರದರ್ಶಿಸುವ ಸೂಚನಾ ಫಲಕಗಳನ್ನು ಅಳವಡಿಸಬೇಕು ಎಂದು ಸಿಎಂ ಯೋಗಿ ಆದಿತ್ಯನಾಥ ಆದೇಶಿಸಿದ್ದಾರೆ.

ದೆಹಲಿ-ಡೆಹ್ರಾಡೂನ್‌ನ ರಾಂಪುರಿ ಬಳಿ 25 ವರ್ಷಗಳಿಂದ ಸಲೀಂ ಎಂಬಾತ ಸಂಗಮ್ ಶುದ್ಧ ಸಸ್ಯಾಹಾರಿ ರೆಸ್ಟೋರೆಂಟ್ ನಡೆಸುತ್ತಿದ್ದನು. ಕನ್ವರ್ ಯಾತ್ರಿಗಳನ್ನು ಗಮನದಲ್ಲಿಟ್ಟುಕೊಂಡು ಪೊಲೀಸ್-ಜಿಲ್ಲಾಡಳಿತವೂ ಅಂಗಡಿಯವರಿಗೆ ತಮ್ಮ ಗುರುತಿನ ಫಲಕವನ್ನು ಅಳವಡಿಸುವಂತೆ ಹೇಳಿದ್ದು ಇದೀಗ ಸಸ್ಯಹಾರಿ ರೆಸ್ಟೋರೆಂಟ್ ಗೆ ಸಲೀಂ ಪ್ಯೂರ್ ವೆಜಿಟೇರಿಯನ್ ರೆಸ್ಟೋರೆಂಟ್ ಎಂಬ ಬೋರ್ಡ್ ಅನ್ನು ಹಾಕಲಾಗಿದೆ.

ಆಹಾರ ಸುರಕ್ಷತಾ ಇಲಾಖೆಯ ನೋಂದಣಿಯಲ್ಲೂ ಸಲೀಂ ತಮ್ಮ ಹೆಸರನ್ನು ಬದಲಾಯಿಸಿಕೊಂಡಿದ್ದಾರೆ. ಕನ್ವರ್ ಮಾರ್ಗ್‌ನಲ್ಲಿರುವ ಎಲ್ಲಾ ಅಂಗಡಿಗಳು, ಢಾಬಾಗಳು ಮತ್ತು ಗಾಡಿಗಳಲ್ಲಿ ಅಂತಹ ಬದಲಾವಣೆಗಳು ಕಾಣಸಿಗುತ್ತಿವೆ. ಹೆಸರು ಮತ್ತು ಗುರುತು ಬಹಿರಂಗಪಡಿಸಲು ನನ್ನ ಅಭ್ಯಂತರವಿಲ್ಲ ಎಂದು ಧಾಬಾ ಮಾಲೀಕ ಸಲೀಂ ಹೇಳಿದ್ದಾರೆ.

ಡಿಎಂ ಅರವಿಂದ ಮಲ್ಲಪ್ಪ ಬಂಗಾರಿ ಮತ್ತು ಎಸ್‌ಎಸ್‌ಪಿ ಅಭಿಷೇಕ್ ಸಿಂಗ್ ಅವರು ಕನ್ವರಿ ಯಾತ್ರಿಗಳು ತಮ್ಮ ಆಹಾರದಲ್ಲಿ ಕೆಲವು ಆಹಾರ ಪದಾರ್ಥಗಳನ್ನು ಸೇವಿಸುವುದಿಲ್ಲ. ಇಂತಹ ಪರಿಸ್ಥಿತಿಯಲ್ಲಿ ಸ್ವಲ್ಪ ಎಡವಟ್ಟಾದರೂ ಕಾನೂನು ಸುವ್ಯವಸ್ಥೆ ಹದಗೆಡಬಹುದು. ಭಕ್ತರ ನಂಬಿಕೆಯ ದೃಷ್ಠಿಯಿಂದ ಹೋಟೆಲ್ ಮತ್ತು ಢಾಬಾ ನಿರ್ವಾಹಕರು ಮಾಲೀಕರು ಮತ್ತು ಉದ್ಯೋಗಿಗಳ ಹೆಸರನ್ನು ಪ್ರದರ್ಶಿಸಲು ಮನವಿ ಮಾಡಲಾಗಿತ್ತು. ಇದರಲ್ಲಿ ತಪ್ಪೇನಿಲ್ಲ ಎಂದು ಹೇಳಿದ್ದಾರೆ.

ಜಿಲ್ಲಾ ವಕೀಲರ ಸಂಘದ ಮಾಜಿ ಅಧ್ಯಕ್ಷ ಅನಿಲ್ ಜಿಂದಾಲ್ ಮಾತನಾಡಿ, ಗುರುತನ್ನು ಬಹಿರಂಗಪಡಿಸುವುದು ಒಳ್ಳೆಯದ್ದು, ಇದು ಯಾವುದೇ ದಿಕ್ಕಿನಲ್ಲಿ ಕಾನೂನುಬಾಹಿರವಲ್ಲ. ಏಕೆಂದರೆ ಇದರಿಂದ ಯಾರ ಧಾರ್ಮಿಕ ಭಾವನೆಗಳಿಗೂ ಧಕ್ಕೆಯಾಗುವುದಿಲ್ಲ ಮತ್ತು ಯಾರ ಹಕ್ಕುಗಳಿಗೂ ಧಕ್ಕೆಯಾಗುವುದಿಲ್ಲ. ಅದೇ ಸಮಯದಲ್ಲಿ, ಗುರುವಾರ ಕನ್ವರ್ ಯಾತ್ರೆ ಕೈಗೊಂಡಿರುವ ಗುರುಗ್ರಾಮದ ಕನ್ವಾಡಿಯ ಹಿಮಾಂಶು ಮತ್ತು ಪಲ್ವಾಲ್ ನಿವಾಸಿ ಸುಮಿತ್ ಈ ಕ್ರಮವನ್ನು ಸಮರ್ಥಿಸಿಕೊಂಡಿದ್ದಾರೆ. ಕನ್ವರ್ ಯಾತ್ರೆಯ ಸಮಯದಲ್ಲಿ ಯಾವ ಶಿವಭಕ್ತರೂ ಈರುಳ್ಳಿಯನ್ನು ತಿನ್ನುವುದಿಲ್ಲ ಎಂದು ಅವರು ಹೇಳುತ್ತಾರೆ. ಹೋಟೆಲ್ ಮತ್ತು ಧಾಬಾ ನಡೆಸುತ್ತಿರುವ ವ್ಯಕ್ತಿಯ ಹೆಸರನ್ನು ಸ್ಪಷ್ಟವಾಗಿ ಬರೆಯಬೇಕು ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT