ಚಿರಾಗ್ ಪಾಸ್ವಾನ್ online desk
ದೇಶ

Kanwar Yatra: ಉತ್ತರ ಪ್ರದೇಶ ಸರ್ಕಾರದ ನಿಯಮಗಳಿಗೆ ಬಿಜೆಪಿ ಮಿತ್ರಪಕ್ಷಗಳಿಂದ ತೀವ್ರ ವಿರೋಧ

ಈ ನಡೆಯನ್ನು ವಿರೋಧಿಸಿರುವ ಪಾಸ್ವಾನ್, ತಾವು ಜಾತಿ ಅಥವಾ ಧರ್ಮದ ಹೆಸರಿನಲ್ಲಿ ಯಾವುದೇ ವಿಭಜನೆಯನ್ನು "ಖಂಡಿತವಾಗಿ" ಬೆಂಬಲಿಸುವುದಿಲ್ಲ ಅಥವಾ ಪ್ರೋತ್ಸಾಹಿಸುವುದಿಲ್ಲ ಎಂದು ಹೇಳಿದ್ದಾರೆ.

ಲಖನೌ: ಕನ್ವರ್ ಯಾತ್ರೆಗೆ ಉತ್ತರ ಪ್ರದೇಶ ಸರ್ಕಾರ ವಿಧಿಸಿರುವ ನಿಯಮಗಳಿಗೆ ಬಿಜೆಪಿ ಮಿತ್ರಪಕ್ಷಗಳು ತೀವ್ರ ವಿರೋಧ ವ್ಯಕ್ತಪಡಿಸಿವೆ.

ಕೇಂದ್ರ ಸಚಿವ, ಬಿಜೆಪಿ ಮಿತ್ರ ಪಕ್ಷ ಎಲ್ ಜೆಪಿಯ ನಾಯಕ ಚಿರಾಗ್ ಪಾಸ್ವಾನ್ ಉತ್ತರ ಪ್ರದೇಶ ಸರ್ಕಾರದ ನಿರ್ಧಾರಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

ಪರಿಷ್ಕೃತ ನಿಯಮಗಳ ಪ್ರಕಾರ, ಕನ್ವರ್ ಯಾತ್ರೆ ಮಾರ್ಗದಲ್ಲಿ ಅಂಗಡಿಗಳು ಮಾಲೀಕರ ಹೆಸರು ನಮೂದಿಸುವಂತೆ ಉತ್ತರ ಪ್ರದೇಶ ಸರ್ಕಾರ ಸೂಚನೆ ನೀಡಿದೆ.

ಈ ನಡೆಯನ್ನು ವಿರೋಧಿಸಿರುವ ಪಾಸ್ವಾನ್, ತಾವು ಜಾತಿ ಅಥವಾ ಧರ್ಮದ ಹೆಸರಿನಲ್ಲಿ ಯಾವುದೇ ವಿಭಜನೆಯನ್ನು "ಖಂಡಿತವಾಗಿ" ಬೆಂಬಲಿಸುವುದಿಲ್ಲ ಅಥವಾ ಪ್ರೋತ್ಸಾಹಿಸುವುದಿಲ್ಲ ಎಂದು ಹೇಳಿದ್ದಾರೆ.

ಸಮಾಜದಲ್ಲಿ ಶ್ರೀಮಂತರು ಮತ್ತು ಬಡವರು ಎಂಬ ಎರಡು ವರ್ಗದ ಜನರು ಇದ್ದಾರೆ ಮತ್ತು ವಿವಿಧ ಜಾತಿಗಳು ಮತ್ತು ಧರ್ಮಗಳ ವ್ಯಕ್ತಿಗಳು ಎರಡೂ ವರ್ಗಗಳಲ್ಲಿ ಬರುತ್ತಾರೆ ಎಂದು ನಂಬುವುದಾಗಿ ಪಾಸ್ವಾನ್ ಹೇಳಿದ್ದಾರೆ.

"ನಾವು ಈ ಎರಡು ವರ್ಗದ ಜನರ ನಡುವಿನ ಅಂತರವನ್ನು ಕಡಿಮೆ ಮಾಡಬೇಕಾಗಿದೆ. ದಲಿತರು, ಹಿಂದುಳಿದವರು, ಮೇಲ್ಜಾತಿಗಳು ಮತ್ತು ಮುಸ್ಲಿಮರು ಸೇರಿದಂತೆ ಸಮಾಜದ ಎಲ್ಲಾ ವರ್ಗಗಳನ್ನು ಒಳಗೊಂಡಿರುವ ಬಡವರಿಗಾಗಿ ಕೆಲಸ ಮಾಡುವುದು ಪ್ರತಿ ಸರ್ಕಾರದ ಜವಾಬ್ದಾರಿಯಾಗಿದೆ. ಎಲ್ಲರೂ ಇದ್ದಾರೆ. ನಾವು ಅವರಿಗಾಗಿ ಕೆಲಸ ಮಾಡಬೇಕು ಎಂದು ಪಾಸ್ವಾನ್ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

SCROLL FOR NEXT