ಪಿಣರಾಯಿ ವಿಜಯನ್-ವಾಸುಕಿ 
ದೇಶ

ಕೇರಳದಲ್ಲಿ 'ರಾಜ್ಯ ವಿದೇಶಾಂಗ' ಕಾರ್ಯದರ್ಶಿ ನೇಮಕ ವಿವಾದ: ಪಿಣರಾಯಿ ಸರ್ಕಾರದ ವಿರುದ್ಧ ಬಿಜೆಪಿ, ಕಾಂಗ್ರೆಸ್ ವಾಗ್ದಾಳಿ

ಕೇರಳ ಸರ್ಕಾರದ ಈ ನಿರ್ಧಾರವನ್ನು ಬಿಜೆಪಿ ಹಾಗೂ ಕಾಂಗ್ರೆಸ್ ತೀವ್ರವಾಗಿ ಟೀಕಿಸಿದ್ದು, ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ರಾಜ್ಯವನ್ನು ಸ್ವತಂತ್ರ ದೇಶ ಎಂದು ಪರಿಗಣಿಸಬಾರದು ಎಂದು ಹೇಳಿದ್ದಾರೆ.

ಕೇರಳದಲ್ಲಿ ಪಿಣರಾಯಿ ವಿಜಯನ್ ಸರ್ಕಾರ ಐಎಎಸ್ ಅಧಿಕಾರಿಯೊಬ್ಬರನ್ನು 'ರಾಜ್ಯ ವಿದೇಶಾಂಗ' ಕಾರ್ಯದರ್ಶಿಯನ್ನಾಗಿ ನೇಮಿಸಿರುವ ಹಿನ್ನೆಲೆಯಲ್ಲಿ ರಾಜಕೀಯ ಬಿಸಿ ಏರಿದೆ.

ಕೇರಳ ಸರ್ಕಾರದ ಈ ನಿರ್ಧಾರವನ್ನು ಬಿಜೆಪಿ ಹಾಗೂ ಕಾಂಗ್ರೆಸ್ ತೀವ್ರವಾಗಿ ಟೀಕಿಸಿದ್ದು, ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ರಾಜ್ಯವನ್ನು ಸ್ವತಂತ್ರ ದೇಶ ಎಂದು ಪರಿಗಣಿಸಬಾರದು ಎಂದು ಹೇಳಿದ್ದಾರೆ.

ಐಎಎಸ್ ಅಧಿಕಾರಿ ಕೆ ವಾಸುಕಿ ಅವರನ್ನು 'ರಾಜ್ಯದ ವಿದೇಶಾಂಗ ಕಾರ್ಯದರ್ಶಿ'ಯಾಗಿ ನೇಮಕ ಮಾಡಿರುವುದು ಅಸಾಂವಿಧಾನಿಕ ಮತ್ತು ಫೆಡರಲ್ ತತ್ವಗಳ ಉಲ್ಲಂಘನೆಯಾಗಿದೆ ಎಂದು ಕೇರಳ ಬಿಜೆಪಿ ಅಧ್ಯಕ್ಷ ಕೆ ಸುರೇಂದ್ರನ್ ಹೇಳಿದ್ದಾರೆ. ಸರ್ಕಾರದ ಈ ಆದೇಶವನ್ನು ಟೀಕಿಸಿದ ಕೆ.ಸುರೇಂದ್ರನ್ ಮುಖ್ಯಮಂತ್ರಿಗೆ ಸ್ವಂತ ಕಾನ್ಸುಲೇಟ್ ಮತ್ತು ವಿದೇಶಾಂಗ ಸಚಿವರ ಅಗತ್ಯವಿದೆ ಎಂದು ಅನಿಸುತ್ತದೆ ಎಂದರು. ವಿದೇಶಾಂಗ ವ್ಯವಹಾರಗಳು ಕೇಂದ್ರದ ವ್ಯಾಪ್ತಿಗೆ ಬರುತ್ತಿದ್ದು, ಇದರಲ್ಲಿ ರಾಜ್ಯ ಸರ್ಕಾರ ಮಧ್ಯಪ್ರವೇಶಿಸುತ್ತಿರುವುದು ದೇಶಕ್ಕೆ ಒಳ್ಳೆಯ ಸಂದೇಶವಲ್ಲ ಎಂದರು.

ರಾಜತಾಂತ್ರಿಕ ಮಾರ್ಗಗಳ ಮೂಲಕ ವಿದೇಶದಲ್ಲಿ ಹಣ ಸಂಗ್ರಹಿಸಿದ ಆರೋಪ ವಿಜಯನ್ ಮೇಲಿದೆ ಎಂದು ಬಿಜೆಪಿ ನಾಯಕ ಹೇಳಿದ್ದಾರೆ. ಹೀಗಿರುವಾಗ ಗಲ್ಫ್‌ ರಾಷ್ಟ್ರಗಳಲ್ಲಿ ಸಿಎಂ ಅವರ ಆಪಾದಿತ ಹಣಕಾಸು ಸಂಬಂಧವನ್ನು ಗಮನದಲ್ಲಿಟ್ಟುಕೊಂಡು ಆ 'ರಾಜ್ಯ ವಿದೇಶಾಂಗ' ಕಾರ್ಯದರ್ಶಿಯನ್ನು ನೇಮಿಸಲಾಗಿದೆಯೇ? ಸರ್ಕಾರದ ಈ ನೇಮಕವು ರಾಷ್ಟ್ರದ ಏಕತೆ ಮತ್ತು ಸಮಗ್ರತೆಯನ್ನು ನಾಶಪಡಿಸಲಿದ್ದು ಈ ನಿರ್ಧಾರವನ್ನು ತಕ್ಷಣವೇ ಹಿಂಪಡೆಯಬೇಕು ಎಂದು ಹೇಳಿದರು.

ಮತ್ತೊಂದೆಡೆ ಕಾಂಗ್ರೆಸ್ ಸಂಸದ ಶಶಿ ತರೂರ್, ವಾಸ್ತವವೆಂದರೆ ವಿದೇಶಿ ಸಂಬಂಧಗಳನ್ನು ಕೇಂದ್ರ ಸರ್ಕಾರವು ನಿಯಂತ್ರಿಸುತ್ತದೆ. ಯಾವುದೇ ರಾಜ್ಯ ಸರ್ಕಾರವು ಯಾವುದೇ ಸ್ವತಂತ್ರ ವಿದೇಶಿ ಸಂಬಂಧಗಳನ್ನು ಹೊಂದಿಲ್ಲ. ಆದರೆ ರಾಜ್ಯ ಸರ್ಕಾರಗಳು ತಮ್ಮ ನಿವಾಸಿಗಳನ್ನು ಒಳಗೊಂಡಿರುವ ವಿಷಯಕ್ಕಾಗಿ ವಿದೇಶದಲ್ಲಿ ರಾಯಭಾರ ಕಚೇರಿಗಳಿಲ್ಲದೆ ಕೆಲಸ ಮಾಡುವುದು ಸಂಪೂರ್ಣವಾಗಿ ಸೂಕ್ತವಾಗಿದೆ. ಆದರೆ ಒಬ್ಬ ಅಧಿಕಾರಿಗೆ ಈ ರೀತಿಯ ನಿರ್ದಿಷ್ಟ ಜವಾಬ್ದಾರಿಯನ್ನು ನೀಡುವುದು ಅಸಾಮಾನ್ಯವಾಗಿದೆ. ಆದರೆ ಆಕೆಗೆ ತನ್ನದೇ ಆದ ಯಾವುದೇ ವಿದೇಶಿ ಸಂಬಂಧದ ಜವಾಬ್ದಾರಿ ಇಲ್ಲ, ಅದು ಮೂಲತಃ ಭಾರತ ಸರ್ಕಾರದ ಸಂಸ್ಥೆಗಳ ಮೂಲಕ ಇರುತ್ತದೆ ಎಂದು ತರೂರ್ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

ಯಾವುದೇ ಸಿದ್ಧಾಂತ ಅಥವಾ ಅಜೆಂಡಾವನ್ನು ಪ್ರಚಾರ ಮಾಡುತ್ತಿಲ್ಲ; 'ಕಾಂತಾರ: ಚಾಪ್ಟರ್ 1' ಕುರಿತು ರಿಷಬ್ ಶೆಟ್ಟಿ

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಹಾಸನಾಂಬ ದರ್ಶನಕ್ಕೆ ಭಕ್ತರ ಸಂಖ್ಯೆ ಹೆಚ್ಚಳ: ಎರಡೇ ದಿನಗಳಲ್ಲಿ ರೂ. 2.24 ಕೋಟಿ ಆದಾಯ, ಆರು ಸಿಬ್ಬಂದಿ ಅಮಾನತು!

SCROLL FOR NEXT