ಪಿಣರಾಯಿ ವಿಜಯನ್-ವಾಸುಕಿ 
ದೇಶ

ಕೇರಳದಲ್ಲಿ 'ರಾಜ್ಯ ವಿದೇಶಾಂಗ' ಕಾರ್ಯದರ್ಶಿ ನೇಮಕ ವಿವಾದ: ಪಿಣರಾಯಿ ಸರ್ಕಾರದ ವಿರುದ್ಧ ಬಿಜೆಪಿ, ಕಾಂಗ್ರೆಸ್ ವಾಗ್ದಾಳಿ

ಕೇರಳ ಸರ್ಕಾರದ ಈ ನಿರ್ಧಾರವನ್ನು ಬಿಜೆಪಿ ಹಾಗೂ ಕಾಂಗ್ರೆಸ್ ತೀವ್ರವಾಗಿ ಟೀಕಿಸಿದ್ದು, ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ರಾಜ್ಯವನ್ನು ಸ್ವತಂತ್ರ ದೇಶ ಎಂದು ಪರಿಗಣಿಸಬಾರದು ಎಂದು ಹೇಳಿದ್ದಾರೆ.

ಕೇರಳದಲ್ಲಿ ಪಿಣರಾಯಿ ವಿಜಯನ್ ಸರ್ಕಾರ ಐಎಎಸ್ ಅಧಿಕಾರಿಯೊಬ್ಬರನ್ನು 'ರಾಜ್ಯ ವಿದೇಶಾಂಗ' ಕಾರ್ಯದರ್ಶಿಯನ್ನಾಗಿ ನೇಮಿಸಿರುವ ಹಿನ್ನೆಲೆಯಲ್ಲಿ ರಾಜಕೀಯ ಬಿಸಿ ಏರಿದೆ.

ಕೇರಳ ಸರ್ಕಾರದ ಈ ನಿರ್ಧಾರವನ್ನು ಬಿಜೆಪಿ ಹಾಗೂ ಕಾಂಗ್ರೆಸ್ ತೀವ್ರವಾಗಿ ಟೀಕಿಸಿದ್ದು, ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ರಾಜ್ಯವನ್ನು ಸ್ವತಂತ್ರ ದೇಶ ಎಂದು ಪರಿಗಣಿಸಬಾರದು ಎಂದು ಹೇಳಿದ್ದಾರೆ.

ಐಎಎಸ್ ಅಧಿಕಾರಿ ಕೆ ವಾಸುಕಿ ಅವರನ್ನು 'ರಾಜ್ಯದ ವಿದೇಶಾಂಗ ಕಾರ್ಯದರ್ಶಿ'ಯಾಗಿ ನೇಮಕ ಮಾಡಿರುವುದು ಅಸಾಂವಿಧಾನಿಕ ಮತ್ತು ಫೆಡರಲ್ ತತ್ವಗಳ ಉಲ್ಲಂಘನೆಯಾಗಿದೆ ಎಂದು ಕೇರಳ ಬಿಜೆಪಿ ಅಧ್ಯಕ್ಷ ಕೆ ಸುರೇಂದ್ರನ್ ಹೇಳಿದ್ದಾರೆ. ಸರ್ಕಾರದ ಈ ಆದೇಶವನ್ನು ಟೀಕಿಸಿದ ಕೆ.ಸುರೇಂದ್ರನ್ ಮುಖ್ಯಮಂತ್ರಿಗೆ ಸ್ವಂತ ಕಾನ್ಸುಲೇಟ್ ಮತ್ತು ವಿದೇಶಾಂಗ ಸಚಿವರ ಅಗತ್ಯವಿದೆ ಎಂದು ಅನಿಸುತ್ತದೆ ಎಂದರು. ವಿದೇಶಾಂಗ ವ್ಯವಹಾರಗಳು ಕೇಂದ್ರದ ವ್ಯಾಪ್ತಿಗೆ ಬರುತ್ತಿದ್ದು, ಇದರಲ್ಲಿ ರಾಜ್ಯ ಸರ್ಕಾರ ಮಧ್ಯಪ್ರವೇಶಿಸುತ್ತಿರುವುದು ದೇಶಕ್ಕೆ ಒಳ್ಳೆಯ ಸಂದೇಶವಲ್ಲ ಎಂದರು.

ರಾಜತಾಂತ್ರಿಕ ಮಾರ್ಗಗಳ ಮೂಲಕ ವಿದೇಶದಲ್ಲಿ ಹಣ ಸಂಗ್ರಹಿಸಿದ ಆರೋಪ ವಿಜಯನ್ ಮೇಲಿದೆ ಎಂದು ಬಿಜೆಪಿ ನಾಯಕ ಹೇಳಿದ್ದಾರೆ. ಹೀಗಿರುವಾಗ ಗಲ್ಫ್‌ ರಾಷ್ಟ್ರಗಳಲ್ಲಿ ಸಿಎಂ ಅವರ ಆಪಾದಿತ ಹಣಕಾಸು ಸಂಬಂಧವನ್ನು ಗಮನದಲ್ಲಿಟ್ಟುಕೊಂಡು ಆ 'ರಾಜ್ಯ ವಿದೇಶಾಂಗ' ಕಾರ್ಯದರ್ಶಿಯನ್ನು ನೇಮಿಸಲಾಗಿದೆಯೇ? ಸರ್ಕಾರದ ಈ ನೇಮಕವು ರಾಷ್ಟ್ರದ ಏಕತೆ ಮತ್ತು ಸಮಗ್ರತೆಯನ್ನು ನಾಶಪಡಿಸಲಿದ್ದು ಈ ನಿರ್ಧಾರವನ್ನು ತಕ್ಷಣವೇ ಹಿಂಪಡೆಯಬೇಕು ಎಂದು ಹೇಳಿದರು.

ಮತ್ತೊಂದೆಡೆ ಕಾಂಗ್ರೆಸ್ ಸಂಸದ ಶಶಿ ತರೂರ್, ವಾಸ್ತವವೆಂದರೆ ವಿದೇಶಿ ಸಂಬಂಧಗಳನ್ನು ಕೇಂದ್ರ ಸರ್ಕಾರವು ನಿಯಂತ್ರಿಸುತ್ತದೆ. ಯಾವುದೇ ರಾಜ್ಯ ಸರ್ಕಾರವು ಯಾವುದೇ ಸ್ವತಂತ್ರ ವಿದೇಶಿ ಸಂಬಂಧಗಳನ್ನು ಹೊಂದಿಲ್ಲ. ಆದರೆ ರಾಜ್ಯ ಸರ್ಕಾರಗಳು ತಮ್ಮ ನಿವಾಸಿಗಳನ್ನು ಒಳಗೊಂಡಿರುವ ವಿಷಯಕ್ಕಾಗಿ ವಿದೇಶದಲ್ಲಿ ರಾಯಭಾರ ಕಚೇರಿಗಳಿಲ್ಲದೆ ಕೆಲಸ ಮಾಡುವುದು ಸಂಪೂರ್ಣವಾಗಿ ಸೂಕ್ತವಾಗಿದೆ. ಆದರೆ ಒಬ್ಬ ಅಧಿಕಾರಿಗೆ ಈ ರೀತಿಯ ನಿರ್ದಿಷ್ಟ ಜವಾಬ್ದಾರಿಯನ್ನು ನೀಡುವುದು ಅಸಾಮಾನ್ಯವಾಗಿದೆ. ಆದರೆ ಆಕೆಗೆ ತನ್ನದೇ ಆದ ಯಾವುದೇ ವಿದೇಶಿ ಸಂಬಂಧದ ಜವಾಬ್ದಾರಿ ಇಲ್ಲ, ಅದು ಮೂಲತಃ ಭಾರತ ಸರ್ಕಾರದ ಸಂಸ್ಥೆಗಳ ಮೂಲಕ ಇರುತ್ತದೆ ಎಂದು ತರೂರ್ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

ಮಹಾತ್ಮ ಗಾಂಧಿ ಸಂದೇಶಗಳು ಹಿಂದೆಂದಿಗಿಂತಲೂ ಈಗ ಹೆಚ್ಚು ಪ್ರಸ್ತುತ: ಸಬರಮತಿ ಆಶ್ರಮದಲ್ಲಿ ಜರ್ಮನ್ ಚಾನ್ಸೆಲರ್!

'sir' ವಿವಾದ ಕೊನೆಗೂ ಅಂತ್ಯ: 'ಸರ್.. ನೀವು ನನ್ನ ಹಿರಿಯರು': ಕಿಚ್ಚಾ ಸುದೀಪ್ ಗೆ ಧನ್ಯವಾದ ಹೇಳಿದ ನಟ ಯಶ್!

SCROLL FOR NEXT