ಸುರೇಂದರ್ ಪನ್ವಾರ್ 
ದೇಶ

ಅಕ್ರಮ ಗಣಿಗಾರಿಕೆ ಪ್ರಕರಣ: ಹರಿಯಾಣ ಕಾಂಗ್ರೆಸ್ ಶಾಸಕ ಸುರೇಂದರ್ ಪನ್ವಾರ್ ಬಂಧಿಸಿದ ED

ಅಕ್ರಮ ಗಣಿಗಾರಿಕೆ ಪ್ರಕರಣ ಸಂಬಂಧ ಇ.ಡಿ ಅಧಿಕಾರಿಗಳು ಸುರೇಂದರ್ ಪನ್ವಾರ್ ಮನೆ ಹಾಗೂ ಕಚೇರಿಗಳ ಮೇಲೆ ಜನವರಿಯಲ್ಲಿ ದಾಳಿ ನಡೆಸಿದ್ದರು.

ನವದೆಹಲಿ: ಅಕ್ರಮ ಗಣಿಗಾರಿಕೆ ಸಂಬಂಧ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಹರಿಯಾಣದ ಸೋನಿಪತ್‌ ಕ್ಷೇತ್ರದ ಕಾಂಗ್ರೆಸ್ ಶಾಸಕ ಸುರೇಂದರ್ ಪನ್ವಾರ್ ಅವರನ್ನು ಜಾರಿ ನಿರ್ದೇಶನಾಲಯ (ಇ.ಡಿ) ಬಂಧಿಸಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಅಕ್ರಮ ಗಣಿಗಾರಿಕೆ ಪ್ರಕರಣ ಸಂಬಂಧ ಇ.ಡಿ ಅಧಿಕಾರಿಗಳು ಸುರೇಂದರ್ ಪನ್ವಾರ್ ಮನೆ ಹಾಗೂ ಕಚೇರಿಗಳ ಮೇಲೆ ಜನವರಿಯಲ್ಲಿ ದಾಳಿ ನಡೆಸಿದ್ದರು. ಈ ಪ್ರಕರಣದಲ್ಲಿ ಯಮುನಾನಗರದ ಇಂಡಿಯನ್‌ ನ್ಯಾಷನಲ್‌ ಲೋಕದಳದ (ಐಎನ್‌ಎಲ್‌ಡಿ) ಮಾಜಿ ಶಾಸಕ ದಿಲ್‌ಬಾಗ್ ಸಿಂಗ್ ಮತ್ತು ಆತನ ಸಹಚರರೊಬ್ಬರನ್ನು ಇ.ಡಿ ಬಂಧಿಸಿತ್ತು.

ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (ಎನ್‌ಜಿಟಿ) ವಿಧಿಸಿರುವ ನಿಷೇಧದ ನಡುವೆಯೂ ಯಮುನಾನಗರ ಮತ್ತು ಸಮೀಪದ ಜಿಲ್ಲೆಗಳಲ್ಲಿ ಕಲ್ಲು ಮತ್ತು ಮರಳು ಅಕ್ರಮ ಗಣಿಗಾರಿಕೆ ನಡೆಸುತ್ತಿರುವ ಕುರಿತು ಹರಿಯಾಣ ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದರು.

ಗಣಿಗಾರಿಕೆ ಪ್ರದೇಶಗಳಲ್ಲಿ ತೆರಿಗೆ ವಂಚನೆಯನ್ನು ತಡೆಗಟ್ಟಲು ಹರಿಯಾಣ ಸರ್ಕಾರವು 2020ರಲ್ಲಿ ಪರಿಚಯಿಸಿದ ಆನ್‌ಲೈನ್ ಪೋರ್ಟಲ್ ‘ಇ-ರಾವಣ’ ಯೋಜನೆಯಡಿ ದಾಖಲಾಗಿರುವ ವಂಚನೆ ಪ್ರಕರಣಗಳ ಕುರಿತು ಇ.ಡಿ ತನಿಖೆ ನಡೆಸುತ್ತಿದೆ.

ಅಧಿಕೃತ ಮೂಲಗಳ ಪ್ರಕಾರ, ಫೆಡರಲ್ ತನಿಖಾ ಸಂಸ್ಥೆಯು ಪನ್ವಾರ್ ಅವರನ್ನು ಹರಿಯಾಣದ ಅಂಬಾಲಾದ ವಿಶೇಷ ಪಿಎಂಎಲ್‌ಎ ನ್ಯಾಯಾಲಯಕ್ಕೆ ಕರೆದೊಯ್ಯಬಹುದು, ಅಲ್ಲಿ ಅವರು ಶಾಸಕರ ಕಸ್ಟಡಿಗೆ ಕೋರುವ ಸಾಧ್ಯತೆಯಿದೆ.ಇ ಡಿ ಗುರುಗ್ರಾಮ್ ಕಚೇರಿಯ ತಂಡವೊಂದು ಮುಂಜಾನೆ ಶಾಸಕರ ನಿವಾಸಕ್ಕೆ ಆಗಮಿಸಿ ಕೆಲಕಾಲ ವಿಚಾರಣೆ ನಡೆಸಿದ ಬಳಿಕ ಅವರನ್ನು ಬಂಧಿಸಲಾಯಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Delhi Red Fort blast: ಉಗ್ರ ಉಮರ್‌ಗೆ ಆಶ್ರಯ ನೀಡಿದ್ದ ಆರೋಪಿ ಬಂಧನ, NIA ವಿಚಾರಣೆ

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ಅರುಣಾಚಲ ಪ್ರದೇಶ ಭಾರತದ "ಅವಿಭಾಜ್ಯ-ಅಳಿಸಲಾಗದ" ಭಾಗ: ಚೀನಾಗೆ ಭಾರತ ತಿರುಗೇಟು

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

ಅಯೋಧ್ಯೆ ಧರ್ಮಧ್ವಜದಲ್ಲಿರುವ ಕೋವಿದಾರ ಮರ: ರಾಜವೃಕ್ಷಕ್ಕೂ, ಶ್ರೀರಾಮಚಂದ್ರನಿಗೂ ಅದೆಂಥ ನಂಟು? ತ್ರೇತಾಯುಗದಲ್ಲಿದ್ದ ದೈವಿಕ ಮರದ ವಿಶೇಷತೆ ಏನು?

SCROLL FOR NEXT