ಸಾಂದರ್ಭಿಕ ಚಿತ್ರ 
ದೇಶ

Kerala: ಮಲಪ್ಪುರಂ ಬಾಲಕನಿಗೆ ನಿಫಾ ವೈರಸ್ ಸೋಂಕು ಶಂಕೆ; ಆರೋಗ್ಯ ಸಚಿವೆ ಉನ್ನತ ಮಟ್ಟದ ಸಭೆ

ಉತ್ತರ ಮಲಪ್ಪುರಂ ಜಿಲ್ಲೆಯಲ್ಲಿ ನಿಫಾ ವೈರಾಣು ಸೋಂಕು ಕಾಣಿಸಿಕೊಂಡಿರುವ ಶಂಕೆ ಹಿನ್ನೆಲೆಯಲ್ಲಿ ತುರ್ತು ಸಭೆ ನಡೆಸಿ ಆರೋಗ್ಯ ರಕ್ಷಣೆ ಕೈಗೊಳ್ಳುವ ಕುರಿತು ಅಧಿಕಾರಿಗಳ ಜೊತೆ ಚರ್ಚಿಸಿದ್ದಾರೆ.

ತಿರುವನಂತಪುರ: ಕೇರಳ ರಾಜ್ಯದಲ್ಲಿ ನಿಫಾ ಸೋಂಕು ಹರಡದಂತೆ ಕ್ರಮ ಕೈಗೊಳ್ಳಲು ಆರೋಗ್ಯ ಸಚಿವೆ ವೀಣಾ ಜಾರ್ಜ್ ಅವರು ಶನಿವಾರ ಉನ್ನತ ಮಟ್ಟದ ಸಭೆ ನಡೆಸಿದ್ದಾರೆ.

ಉತ್ತರ ಮಲಪ್ಪುರಂ ಜಿಲ್ಲೆಯಲ್ಲಿ ನಿಫಾ ವೈರಾಣು ಸೋಂಕು ಕಾಣಿಸಿಕೊಂಡಿರುವ ಶಂಕೆ ಹಿನ್ನೆಲೆಯಲ್ಲಿ ತುರ್ತು ಸಭೆ ನಡೆಸಿ ಆರೋಗ್ಯ ರಕ್ಷಣೆ ಕೈಗೊಳ್ಳುವ ಕುರಿತು ಅಧಿಕಾರಿಗಳ ಜೊತೆ ಚರ್ಚಿಸಿದ್ದಾರೆ.

ಕೋಝಿಕ್ಕೋಡ್‌ನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಲಪ್ಪುರಂನ ಬಾಲಕನಿಗೆ ನಿಫಾ ರೋಗಲಕ್ಷಣಗಳಿವೆ ಎಂದು ಶಂಕಿಸಲಾಗಿದ್ದು, ಬಾಲಕನ ರಕ್ತದ ಮಾದರಿಗಳನ್ನು ಪರೀಕ್ಷೆಗಾಗಿ ಕೇಂದ್ರೀಯ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.

ಪರೀಕ್ಷೆ ವರದಿ ಇನ್ನೂ ಸಿಕ್ಕಿಲ್ಲ. ಆದರೆ ನಿಫಾ ಸೋಂಕಿನ ಶಿಷ್ಠಾಚಾರ ಪ್ರಕಾರವೇ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.

ನಿಫಾ ವೈರಸ್ ತಡೆಗಟ್ಟುವಿಕೆಗೆ ಸಂಬಂಧಿಸಿದಂತೆ ಸರ್ಕಾರದ ಆದೇಶದಂತೆ ರೂಪಿಸಲಾದ ಸ್ಟ್ಯಾಂಡರ್ಡ್ ಆಪರೇಟಿಂಗ್ ಪ್ರೊಸೀಜರ್ (SOP) ಅನುಸರಿಸಲಾಗುತ್ತಿದೆ. ಆರೋಗ್ಯ ಸಚಿವೆ ಶೀಘ್ರದಲ್ಲೇ ಮಲಪ್ಪುರಂಗೆ ಭೇಟಿ ನೀಡಲಿದ್ದಾರೆ.

ಈ ಹಿಂದೆ ನಾಲ್ಕು ಬಾರಿ ಕೇರಳ ರಾಜ್ಯವನ್ನು ಕಾಡಿದ್ದ ನಿಫಾ ವೈರಸ್ ಹಾವಳಿ ತಡೆಗೆ ವಿಶೇಷ ಕ್ರಿಯಾ ಯೋಜನೆ ಸಿದ್ಧಪಡಿಸಲಾಗುತ್ತಿದೆ ಎಂದು ರಾಜ್ಯ ಸರ್ಕಾರ ಇತ್ತೀಚೆಗೆ ಪ್ರಕಟಿಸಿತ್ತು.

2018, 2021, ಮತ್ತು 2023 ರಲ್ಲಿ ಕೋಝಿಕ್ಕೋಡ್ ಜಿಲ್ಲೆಯಲ್ಲಿ ಮತ್ತು 2019 ರಲ್ಲಿ ಎರ್ನಾಕುಲಂ ಜಿಲ್ಲೆಯಲ್ಲಿ ನಿಫಾ ವೈರಸ್ ವರದಿಯಾಗಿತ್ತು. ಕೋಝಿಕ್ಕೋಡ್, ವಯನಾಡ್, ಇಡುಕ್ಕಿ, ಮಲಪ್ಪುರಂ ಮತ್ತು ಎರ್ನಾಕುಲಂ ಜಿಲ್ಲೆಗಳಲ್ಲಿ ಬಾವಲಿಗಳಲ್ಲಿ ನಿಫಾ ವೈರಸ್ ಪ್ರತಿಕಾಯಗಳಗಳು ಪತ್ತೆಯಾಗಿದ್ದವು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇದು ಕೇವಲ ಧ್ವಜವಲ್ಲ ಭಾರತೀಯ ನಾಗರಿಕತೆಯ ಪುನರ್‌ ಜಾಗೃತಿಯ ಧ್ವಜ, ಶತಮಾನಗಳಷ್ಟು ಹಳೆಯ ಗಾಯ ಈಗ ವಾಸಿಯಾಗುತ್ತಿದೆ: ಪ್ರಧಾನಿ ಮೋದಿ

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಪೂರ್ಣ: ರಾಮ-ಸೀತೆ ವಿವಾಹ ಪರ್ವದಂದೇ ದೇಗುಲದ ಶಿಖರದ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

ರಾಜ್ಯದಲ್ಲಿ ಸಿಎಂ ಗದ್ದುಗೆ ಗುದ್ದಾಟ: ಎಲ್ಲ ಗೊಂದಲಗಳಿಗೆ ತೆರೆ ಎಳೆಯಲು ಹೈಕಮಾಂಡ್ ತೀರ್ಮಾನಿಸಬೇಕು- ಸಿಎಂ ಸಿದ್ದರಾಮಯ್ಯ

"Misfit For Army": ಗುರುದ್ವಾರ ಪ್ರವೇಶಿಸಲು ನಿರಾಕರಣೆ; ಕ್ರಿಶ್ಚಿಯನ್ ಸೇನಾ ಅಧಿಕಾರಿಗೆ ಸುಪ್ರೀಂ ಕೋರ್ಟ್ ತರಾಟೆ!

ಭ್ರಷ್ಟರಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್: ಏಕ ಕಾಲದಲ್ಲಿ ರಾಜ್ಯದ 10 ಕಡೆ ದಾಳಿ- ಪರಿಶೀಲನೆ

SCROLL FOR NEXT