ಸಾಂದರ್ಭಿಕ ಚಿತ್ರ 
ದೇಶ

ರೈತ ಒಕ್ಕೂಟದಿಂದ ಆಗಸ್ಟ್ 1ರಂದು ಬಿಜೆಪಿ ಪ್ರತಿಕೃತಿ ದಹನ; ಆಗಸ್ಟ್ 15 ಕ್ಕೆ ದೇಶಾದ್ಯಂತ ಟ್ರ್ಯಾಕ್ಟರ್ ಮೆರವಣಿಗೆ

ಸಂಯುಕ್ತ ಕಿಸಾನ್ ಮೋರ್ಚಾ(ರಾಜಕೀಯೇತರ) ಮತ್ತು ಕೆಎಂಎಂ ಜಂಟಿ ಪ್ರಕಟಣೆ ಬಿಡುಗಡೆ ಮಾಡಿದ್ದು, ಆಗಸ್ಟ್ 1 ರಂದು ರೈತರು ದೇಶಾದ್ಯಂತ ಜಿಲ್ಲಾ ಕೇಂದ್ರಗಳಿಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಆಡಳಿತಾರೂಢ ಬಿಜೆಪಿಯ ಪ್ರತಿಕೃತಿಗಳನ್ನು ದಹನ ಮಾಡಲಿದ್ದಾರೆ.

ನವದೆಹಲಿ: ಎಮ್‌ಎಸ್‌ಪಿಗೆ ಕಾನೂನಾತ್ಮಕ ಖಾತರಿ ಸೇರಿದಂತೆ ರೈತರ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಆಗಸ್ಟ್ 1 ರಂದು ಬಿಜೆಪಿಯ ಪ್ರತಿಕೃತಿ ದಹನ ಮತ್ತು ಆಗಸ್ಟ್ 15 ರಂದು ದೇಶಾದ್ಯಂತ ಟ್ರ್ಯಾಕ್ಟರ್ ಮೆರವಣಿಗೆ ನಡೆಸುವುದಾಗಿ ಸಂಯುಕ್ತ ಕಿಸಾನ್ ಮೋರ್ಚಾ(ಎಸ್‌ಕೆಎಂ) ಮತ್ತು ಕಿಸಾನ್ ಮಜ್ದೂರ್ ಮೋರ್ಚಾ ಸೋಮವಾರ ಘೋಷಿಸಿವೆ.

ಇಂದು ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕಿಸಾನ್ ಮಜ್ದೂರ್ ಮೋರ್ಚಾ(ಕೆಎಂಎಂ) ಮುಖಂಡ ಸರ್ವಣ್ ಸಿಂಗ್ ಪಂಧೇರ್ ಅವರು, ರೈತರ 'ದೆಹಲಿ ಚಲೋ' ಆಗಸ್ಟ್ 31 ರಂದು 200 ದಿನ ಪೂರೈಸುತ್ತದೆ. ಅಂದು ಪಂಜಾಬ್ ಹಾಗೂ ಹರಿಯಾಣ ಗಡಿಯಲ್ಲಿರುವ ಖಾನೌರಿ ಮತ್ತು ಶಂಭು ಪಾಯಿಂಟ್‌ಗಳನ್ನು ತಲುಪುವಂತೆ ಜನರಿಗೆ ಮನವಿ ಮಾಡಿದರು.

ಸಂಯುಕ್ತ ಕಿಸಾನ್ ಮೋರ್ಚಾ(ರಾಜಕೀಯೇತರ) ಮತ್ತು ಕೆಎಂಎಂ ಜಂಟಿ ಪ್ರಕಟಣೆ ಬಿಡುಗಡೆ ಮಾಡಿದ್ದು, ಆಗಸ್ಟ್ 1 ರಂದು ರೈತರು ದೇಶಾದ್ಯಂತ ಜಿಲ್ಲಾ ಕೇಂದ್ರಗಳಿಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಆಡಳಿತಾರೂಢ ಬಿಜೆಪಿಯ ಪ್ರತಿಕೃತಿಗಳನ್ನು ದಹನ ಮಾಡಲಿದ್ದಾರೆ.

ಆಗಸ್ಟ್ 15 ರಂದು, ರೈತರು ಕನಿಷ್ಠ ಬೆಂಬಲ ಬೆಲೆ(ಎಂಎಸ್‌ಪಿ) ಕಾನೂನು ಖಾತರಿ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಟ್ರ್ಯಾಕ್ಟರ್ ಮೆರವಣಿಗೆ ನಡೆಸಲಿದ್ದಾರೆ ಎಂದು ಹೇಳಿದ್ದಾರೆ.

ಎಸ್‌ಕೆಎಂ ಮತ್ತು ಕೆಎಂಎಂ ನೇತೃತ್ವದಲ್ಲಿ ಪಂಜಾಬ್‌ ರೈತರು ಫೆಬ್ರುವರಿ 13 ರಂದು ದೆಹಲಿಗೆ 'ದೆಹಲಿ ಚಲೋ' ಮೆರವಣಿಗೆ ಪ್ರಾರಂಭಿಸಿದ್ದು, MSP ಸೇರಿದಂತೆ ರೈತರ ಇತರ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿದ್ದಾರೆ. ಆದರೆ ಹರಿಯಾಣ ಪೊಲೀಸರು ಸಿಮೆಂಟ್ ತಡೆಗೋಡೆ ಸೇರಿದಂತೆ ಬ್ಯಾರಿಕೇಡ್‌ಗಳ ಮೂಲಕ ರೈತರನ್ನು ತಡೆದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT