ಸಾಂದರ್ಭಿಕ ಚಿತ್ರ 
ದೇಶ

ರೈತ ಒಕ್ಕೂಟದಿಂದ ಆಗಸ್ಟ್ 1ರಂದು ಬಿಜೆಪಿ ಪ್ರತಿಕೃತಿ ದಹನ; ಆಗಸ್ಟ್ 15 ಕ್ಕೆ ದೇಶಾದ್ಯಂತ ಟ್ರ್ಯಾಕ್ಟರ್ ಮೆರವಣಿಗೆ

ಸಂಯುಕ್ತ ಕಿಸಾನ್ ಮೋರ್ಚಾ(ರಾಜಕೀಯೇತರ) ಮತ್ತು ಕೆಎಂಎಂ ಜಂಟಿ ಪ್ರಕಟಣೆ ಬಿಡುಗಡೆ ಮಾಡಿದ್ದು, ಆಗಸ್ಟ್ 1 ರಂದು ರೈತರು ದೇಶಾದ್ಯಂತ ಜಿಲ್ಲಾ ಕೇಂದ್ರಗಳಿಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಆಡಳಿತಾರೂಢ ಬಿಜೆಪಿಯ ಪ್ರತಿಕೃತಿಗಳನ್ನು ದಹನ ಮಾಡಲಿದ್ದಾರೆ.

ನವದೆಹಲಿ: ಎಮ್‌ಎಸ್‌ಪಿಗೆ ಕಾನೂನಾತ್ಮಕ ಖಾತರಿ ಸೇರಿದಂತೆ ರೈತರ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಆಗಸ್ಟ್ 1 ರಂದು ಬಿಜೆಪಿಯ ಪ್ರತಿಕೃತಿ ದಹನ ಮತ್ತು ಆಗಸ್ಟ್ 15 ರಂದು ದೇಶಾದ್ಯಂತ ಟ್ರ್ಯಾಕ್ಟರ್ ಮೆರವಣಿಗೆ ನಡೆಸುವುದಾಗಿ ಸಂಯುಕ್ತ ಕಿಸಾನ್ ಮೋರ್ಚಾ(ಎಸ್‌ಕೆಎಂ) ಮತ್ತು ಕಿಸಾನ್ ಮಜ್ದೂರ್ ಮೋರ್ಚಾ ಸೋಮವಾರ ಘೋಷಿಸಿವೆ.

ಇಂದು ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕಿಸಾನ್ ಮಜ್ದೂರ್ ಮೋರ್ಚಾ(ಕೆಎಂಎಂ) ಮುಖಂಡ ಸರ್ವಣ್ ಸಿಂಗ್ ಪಂಧೇರ್ ಅವರು, ರೈತರ 'ದೆಹಲಿ ಚಲೋ' ಆಗಸ್ಟ್ 31 ರಂದು 200 ದಿನ ಪೂರೈಸುತ್ತದೆ. ಅಂದು ಪಂಜಾಬ್ ಹಾಗೂ ಹರಿಯಾಣ ಗಡಿಯಲ್ಲಿರುವ ಖಾನೌರಿ ಮತ್ತು ಶಂಭು ಪಾಯಿಂಟ್‌ಗಳನ್ನು ತಲುಪುವಂತೆ ಜನರಿಗೆ ಮನವಿ ಮಾಡಿದರು.

ಸಂಯುಕ್ತ ಕಿಸಾನ್ ಮೋರ್ಚಾ(ರಾಜಕೀಯೇತರ) ಮತ್ತು ಕೆಎಂಎಂ ಜಂಟಿ ಪ್ರಕಟಣೆ ಬಿಡುಗಡೆ ಮಾಡಿದ್ದು, ಆಗಸ್ಟ್ 1 ರಂದು ರೈತರು ದೇಶಾದ್ಯಂತ ಜಿಲ್ಲಾ ಕೇಂದ್ರಗಳಿಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಆಡಳಿತಾರೂಢ ಬಿಜೆಪಿಯ ಪ್ರತಿಕೃತಿಗಳನ್ನು ದಹನ ಮಾಡಲಿದ್ದಾರೆ.

ಆಗಸ್ಟ್ 15 ರಂದು, ರೈತರು ಕನಿಷ್ಠ ಬೆಂಬಲ ಬೆಲೆ(ಎಂಎಸ್‌ಪಿ) ಕಾನೂನು ಖಾತರಿ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಟ್ರ್ಯಾಕ್ಟರ್ ಮೆರವಣಿಗೆ ನಡೆಸಲಿದ್ದಾರೆ ಎಂದು ಹೇಳಿದ್ದಾರೆ.

ಎಸ್‌ಕೆಎಂ ಮತ್ತು ಕೆಎಂಎಂ ನೇತೃತ್ವದಲ್ಲಿ ಪಂಜಾಬ್‌ ರೈತರು ಫೆಬ್ರುವರಿ 13 ರಂದು ದೆಹಲಿಗೆ 'ದೆಹಲಿ ಚಲೋ' ಮೆರವಣಿಗೆ ಪ್ರಾರಂಭಿಸಿದ್ದು, MSP ಸೇರಿದಂತೆ ರೈತರ ಇತರ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿದ್ದಾರೆ. ಆದರೆ ಹರಿಯಾಣ ಪೊಲೀಸರು ಸಿಮೆಂಟ್ ತಡೆಗೋಡೆ ಸೇರಿದಂತೆ ಬ್ಯಾರಿಕೇಡ್‌ಗಳ ಮೂಲಕ ರೈತರನ್ನು ತಡೆದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಭಾರತ–ನ್ಯೂಜಿಲ್ಯಾಂಡ್ ಸಂಬಂಧ ಕಾರ್ಯತಂತ್ರ ಪಾಲುದಾರಿಕೆಗೆ ಉನ್ನತಿ; 5 ವರ್ಷಗಳಲ್ಲಿ 35,000 ಕೋಟಿ ರೂ. ವ್ಯಾಪಾರದ ಗುರಿ

ಕದನ ವಿರಾಮ ಅಂತ್ಯ; ಹೊಸ ಮಾತುಕತೆಗೆ ಡೊನಾಲ್ಡ್ ಟ್ರಂಪ್ ಒಪ್ಪಿಗೆ – 'ಶರಣಾಗುವುದಿಲ್ಲ' ಎಂದ ಇರಾನ್

ಬೆಂಗಳೂರು: ತಾಯಿ, ಅಜ್ಜಿ, ಮಾವನನ್ನು ಕೊಂದು ಆರೋಪಿ ಆತ್ಮಹತ್ಯೆ!

ಪ್ರಿಯಾಂಕ್ ಖರ್ಗೆ RSS ಸಚಿವರು- ಪರಮೇಶ್ವರ್ 'ಗೊತ್ತಿಲ್ಲ' ಸಚಿವರು: ಶೋಭಾ ಕರಂದ್ಲಾಜೆ

ಪೋಕ್ಸೋ ಕೇಸ್​ ಆರೋಪಿಯ ಭೀಭತ್ಸ ಕೃತ್ಯ: ಜಾಮೀನಿನ ಮೇಲೆ ಬಿಡುಗಡೆಯಾದ ಕೂಡಲೇ ಸಂತ್ರಸ್ತೆ ಸೇರಿ 6 ಮಂದಿಯ ಭೀಕರ ಹತ್ಯೆ!