ಸ್ಮಿತಾ ಸಬರ್ವಾಲ್ 
ದೇಶ

ಅಂಗವೈಕಲ್ಯ ಮೀಸಲಾತಿಗೆ ಸ್ಮಿತಾ ಸಬರ್ವಾಲ್ ಆಕ್ಷೇಪ; ಐಎಎಸ್ ಅಧಿಕಾರಿಯಿಂದ ವಿವಾದಾತ್ಮಕ ಪೋಸ್ಟ್

ತೆಲಂಗಾಣ ಹಣಕಾಸು ಆಯೋಗದ ಸದಸ್ಯ ಕಾರ್ಯದರ್ಶಿ ಸ್ಮಿತಾ ಸಬರ್ವಾಲ್ ಅವರು ಅಂಗವೈಕಲ್ಯ ಮೀಸಲಾತಿ ಕುರಿತ ಎಕ್ಸ್‌ನಲ್ಲಿ ವಿವಾದಾತ್ಮಕ ಪೋಸ್ಟ್ ಮಾಡಿದ್ದಾರೆ.

ಹೈದರಾಬಾದ್: ಮಹಾರಾಷ್ಟ್ರದ ವಿವಾದಿತ ಪ್ರೊಬೇಷನರಿ ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್ ಅವರ ಅಂಗವೈಕಲ್ಯ ಪ್ರಮಾಣಪತ್ರ ಪ್ರಕರಣ ಭಾರಿ ಚರ್ಚೆಗೆ ಗ್ರಾಸವಾಗಿರುವ ಬೆನ್ನಲ್ಲೇ ತೆಲಂಗಾಣದ ಹಿರಿಯ ಐಎಎಸ್ ಅಧಿಕಾರಿಯೊಬ್ಬರು ಅಖಿಲ ಭಾರತ ನಾಗರಿಕ ಸೇವೆಗಳಲ್ಲಿ ಅಂಗವೈಕಲ್ಯ ಮೀಸಲಾತಿ ಕುರಿತ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ತೆಲಂಗಾಣ ಹಣಕಾಸು ಆಯೋಗದ ಸದಸ್ಯ ಕಾರ್ಯದರ್ಶಿ ಸ್ಮಿತಾ ಸಬರ್ವಾಲ್ ಅವರು ಅಂಗವೈಕಲ್ಯ ಮೀಸಲಾತಿ ಕುರಿತ ಎಕ್ಸ್‌ನಲ್ಲಿ ವಿವಾದಾತ್ಮಕ ಪೋಸ್ಟ್ ಮಾಡಿದ್ದು, "ವಿಕಲಚೇತನರ ಬಗ್ಗೆ ನನಗೆ ಗೌರವ ಇದೆ. ಆದರೆ ವಿಮಾನಯಾನ ಸಂಸ್ಥೆಯೊಂದು ಅಂಗವೈಕಲ್ಯ ಹೊಂದಿರುವ ಪೈಲಟ್ ಅನ್ನು ನೇಮಿಸಿಕೊಳ್ಳುತ್ತದೆಯೇ? ಅಥವಾ ನೀವು ಅಂಗವೈಕಲ್ಯ ಹೊಂದಿರುವ ಶಸ್ತ್ರಚಿಕಿತ್ಸಕರನ್ನು ನಂಬುತ್ತೀರಾ? ಎಂದು ಪ್ರಶ್ನಿಸಿದ್ದಾರೆ.

ಅಖಿಲ ಭಾರತ ನಾಗರಿಕ ಸೇವೆಗಳ (ಐಎಎಸ್/ಐಪಿಎಸ್/ಐಎಫ್ಒಎಸ್) ಸ್ವರೂಪವವು ಕ್ಷೇತ್ರ ಕಾರ್ಯವನ್ನು ಬಯಸುತ್ತದೆ, ದೀರ್ಘಾವಧಿಯ ಪ್ರಯಾಣವನ್ನು ಕೇಳುತ್ತದೆ. ಸಾರ್ವಜನಿಕರ ಕುಂದುಕೊರತೆಗಳನ್ನು ಖುದ್ದಾಗಿ ಆಲಿಸಬೇಕಾಗುತ್ತದೆ. ಇದಕ್ಕೆಲ್ಲ ದೈಹಿಕ ಸಾಮರ್ಥ್ಯ ಅತ್ಯಗತ್ಯವಾಗಿದೆ" ಎಂದು ಸ್ಮಿತಾ ಸಬರ್ವಾಲ್ ಬರೆದುಕೊಂಡಿದ್ದಾರೆ.

ಸಾಮಾಜಿಕ ಜಾಲತಾಣ ಬಳಕೆದಾರರು, ಅಂಗವೈಕಲ್ಯ ಹಕ್ಕುಗಳ ಹೋರಾಟಗಾರರು ಮತ್ತು ಸಾರ್ವಜನಿಕರು ಐಎಎಸ್ ಅಧಿಕಾರಿಯ ಈ ವಿವಾದಾತ್ಮಕ ಪೋಸ್ಟ್ ಅನ್ನು ಖಂಡಿಸಿದ್ದಾರೆ.

ಶಿವಸೇನಾ ಸಂಸದೆ ಪ್ರಿಯಾಂಕಾ ಚತುರ್ವೇದಿ ಅವರು ಸಬರ್ವಾಲ್ ಅವರ ಪೋಸ್ಟ್ ಅನ್ನು ಟೀಕಿಸಿದ್ದು, ಈ ಹೇಳಿಕೆ "ನಮ್ಮಲ್ಲಿ ಇರಬಹುದಾದ ಬಹಳ ಶೋಚನೀಯ ಹಾಗೂ ಹೊರಹಾಕುವ ದೃಷ್ಟಿಕೋನವಾಗಿದೆ. ಅಧಿಕಾರಿಗಳು ತಮ್ಮ ಸೀಮಿತ ಆಲೋಚನೆಗಳನ್ನು ಮತ್ತು ತಮ್ಮ ಸವಲತ್ತುಗಳನ್ನು ಹೇಗೆ ಪ್ರದರ್ಶಿಸುತ್ತಿದ್ದಾರೆ ಎನ್ನುವುದನ್ನು ನೋಡುವುದು ಆಸಕ್ತಿಕರವಾಗಿದೆ" ಎಂದು ಹೇಳಿದ್ದಾರೆ.

ಇದಕ್ಕೆ ಪ್ರತಿಕ್ರಿಯೆ ನೀಡಿರುವ ಸ್ಮಿತಾ, "ಆಡಳಿತದ ಸಮಂಜಸ ಸಮಸ್ಯೆಗಳ ಕುರಿತು ಅಧಿಕಾರಿಗಳು ಮಾತನಾಡದೆ ಇದ್ದರೆ, ಇನ್ಯಾರು ಮಾತನಾಡುತ್ತಾರೆ? ನನ್ನ ಆಲೋಚನೆ ಹಾಗೂ ಕಳವಳವು 24 ವರ್ಷಗಳ ವೃತ್ತಿ ಜೀವನದಿಂದ ಉದ್ಭವಿಸಿರುವುದು... ಸೀಮಿತ ಅನುಭವವಲ್ಲ" ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?