ಸುಪ್ರೀಂ ಕೋರ್ಟ್ 
ದೇಶ

NEET UG: ವಿವಾದಿತ ಪ್ರಶ್ನೆಯ ಉತ್ತರ ಪರಿಶೀಲಿಸುವಂತೆ ಐಐಟಿ ತಜ್ಞರಿಗೆ ಸುಪ್ರೀಂ ಕೋರ್ಟ್ ಆದೇಶ

ಪರೀಕ್ಷೆಯಲ್ಲಿ ಒಂದೇ ಪ್ರಶ್ನೆಗೆ ಎರಡು ಸರಿಯಾದ ಉತ್ತರಗಳಿವೆ ಎಂದು ಕೆಲವು ಅರ್ಜಿದಾರರು ತಿಳಿಸಿದ ನಂತರ ಸುಪ್ರೀಂ ಕೋರ್ಟ್ ಈ ಆದೇಶ ನೀಡಿದೆ.

ನವದೆಹಲಿ: ನೀಟ್-ಯುಜಿ ಪರೀಕ್ಷೆಯಲ್ಲಿನ ವಿವಾದಿತ ಪ್ರಶ್ನೆಗೆ ಸರಿಯಾದ ಉತ್ತರವನ್ನು ಮೌಲ್ಯಮಾಪನ ಮಾಡಲು ಮತ್ತು ನಿರ್ಧರಿಸಲು ಮಂಗಳವಾರ ಮಧ್ಯಾಹ್ನದೊಳಗೆ ಮೂವರು ವಿಷಯ ತಜ್ಞರ ಸಮಿತಿ ರಚಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ ಐಐಟಿ ದೆಹಲಿಯ ನಿರ್ದೇಶಕರಿಗೆ ಸೂಚನೆ ನೀಡಿದೆ.

ಒಂದೇ ಪ್ರಶ್ನೆಗೆ ಎರಡು ಸಂಭವನೀಯ ಉತ್ತರಗಳಿಗೆ ಅಂಕಗಳನ್ನು ನೀಡುವ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ(NTA) ನಿರ್ಧಾರದ ವಿರುದ್ಧ ಕೆಲವು ವಿದ್ಯಾರ್ಥಿಗಳ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ನೇತೃತ್ವದ ಸುಪ್ರೀಂ ಕೋರ್ಟ್ ತ್ರಿಸದಸ್ಯ ಪೀಠ ಈ ನಿರ್ದೇಶನ ನೀಡಿದೆ.

ಪರೀಕ್ಷೆಯಲ್ಲಿ ಒಂದೇ ಪ್ರಶ್ನೆಗೆ ಎರಡು ಸರಿಯಾದ ಉತ್ತರಗಳಿವೆ ಎಂದು ಕೆಲವು ಅರ್ಜಿದಾರರು ತಿಳಿಸಿದ ನಂತರ ಸುಪ್ರೀಂ ಕೋರ್ಟ್ ಈ ಆದೇಶ ನೀಡಿದೆ.

ಹಳೆಯ ಮತ್ತು ಹೊಸ NCERT ಪಠ್ಯಕ್ರಮಗಳ ಪ್ರಕಾರ, NTA,"ಸರಿಯಾದ" ಆಯ್ಕೆಗಳಲ್ಲಿ ಒಂದನ್ನು ಆಯ್ಕೆ ಮಾಡಿದ ವಿದ್ಯಾರ್ಥಿಗಳಿಗೆ ಅಂಕಗಳನ್ನು ನೀಡಿದೆ. ಎನ್‌ಟಿಎ ನಿರ್ಧಾರವು ಅಸಮಂಜಸ ಮತ್ತು ಅನ್ಯಾಯವಾಗಿದೆ ಎಂದು ಅರ್ಜಿದಾರರು ನ್ಯಾಯಾಲಯದಲ್ಲಿ ವಾದಿಸಿದ್ದಾರೆ.

ಪೇಪರ್ ಸೋರಿಕೆ ಮತ್ತು ಇತರ ಅವ್ಯವಹಾರಗಳ ಆರೋಪಗಳನ್ನು ಒಳಗೊಂಡಿರುವ ಪ್ರಕರಣವು ಜುಲೈ 23 ರಂದು ತನ್ನ ವಿಚಾರಣೆ ಪುನರಾರಂಭಿಸಲಿದೆ. ಏಕೆಂದರೆ ನ್ಯಾಯಾಲಯವು ವಿದ್ಯಾರ್ಥಿಗಳು ಎತ್ತಿರುವ ಕಳವಳಗಳನ್ನು ಪರಿಹರಿಸಲು ಮತ್ತು ಪರೀಕ್ಷಾ ಪ್ರಕ್ರಿಯೆಯ ಸಮಗ್ರತೆಯನ್ನು ಖಚಿತಪಡಿಸಿಕೊಳ್ಳಲು ಪ್ರಯತ್ನಿಸುತ್ತಿದೆ.

NEET-UG ಪರೀಕ್ಷೆಯನ್ನು ಯಾವುದೇ ಕಾರ್ಯವಿಧಾನಗಳನ್ನು ಅನುಸರಿಸದೆ ನಡೆಸಲಾಗಿದೆ. ಇದು "ಸಂಪೂರ್ಣ ವ್ಯವಸ್ಥಿತ ವೈಫಲ್ಯ". ಯಾವುದೇ ಸ್ಥಳದಲ್ಲಿ "ಯಾವುದೇ ವಿಳಾಸ ಪರಿಶೀಲನೆ ಮತ್ತು ಸಿಸಿಟಿವಿ ಕ್ಯಾಮೆರಾ ಮೇಲ್ವಿಚಾರಣೆ ಇಲ್ಲ" ಎಂದು NEET-UG ಎಂದು ಅರ್ಜಿದಾರರು ಆರೋಪಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ವಿಶ್ವಕಪ್ ವಿಜೇತ ಅಂಧ ಕರ್ನಾಟಕದ ಆಟಗಾರ್ತಿಯರಿಗೆ ತಲಾ 10 ಲಕ್ಷ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಮತ್ತೊಂದು ಹೆಣ್ಣಿನೊಂದಿಗೆ ಮೋಹ, ನಂಬಿಕೆ ದ್ರೋಹ; ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಅಯೋಧ್ಯ ಧ್ವಜಾರೋಹಣ: ಸ್ವಿಚ್ ಅಥವಾ ಹಗ್ಗ ಬಳಸದ ಪ್ರಧಾನಿ, ಹೇಗೆ ನೆರವೇರಿಸಿದ್ರು?ಈ ಅದ್ಭುತ Video ನೋಡಿ..

ಬರವಣಿಗೆಯಲ್ಲಿ ಖುಷಿ ಕಂಡ ಪೊಲೀಸ್ ಅಧಿಕಾರಿ: 'ಬಸವಣ್ಣನ ವಚನ' ಗಳನ್ನು ಇಂಗ್ಲೀಷ್ ಗೆ ಅನುವಾದ ಮಾಡ್ತಿರೋ DYSP ಬಸವರಾಜ್ ಯಲಿಗಾರ್!

SCROLL FOR NEXT