ಸಾಂದರ್ಭಿಕ ಚಿತ್ರ 
ದೇಶ

ಜಮ್ಮು-ಕಾಶ್ಮೀರ: ಉಗ್ರರ ಒಳನುಸುಳುವಿಕೆ ಯತ್ನ ವಿಫಲ, ಓರ್ವ ಸೈನಿಕ ಹುತಾತ್ಮ

ಕೃಷ್ಣಗತಿ ಬೆಲ್ಟ್‌ನ ಬತ್ತಲ್ ಫಾರ್ವರ್ಡ್ ಪ್ರದೇಶದಲ್ಲಿ ಉಗ್ರರನ್ನು ಪರಿಣಾಮಕಾರಿಯಾಗಿ ಹಿಮ್ಮಟ್ಟಿಸಲಾಗಿದೆ. ಈ ವೇಳೆ ತೀವ್ರವಾದ ಗುಂಡಿನ ಚಕಮಕಿಯಲ್ಲಿ ಗಾಯಗೊಂಡಿದ್ದ ಲ್ಯಾನ್ಸ್ ನಾಯಕ್ ಸುಭಾಷ್ ಕುಮಾರ್ ಸಾವನ್ನಪ್ಪಿದ್ದಾರೆ. ಉಗ್ರರ ಕಡೆಯೂ ನಷ್ಟವಾಗಿದೆ ಎಂದು ತಿಳಿದುಬಂದಿದೆ.

ಪೂಂಚ್: ಕೇಂದ್ರಾಡಳಿತ ಪ್ರದೇಶದ ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯಲ್ಲಿ ಮಂಗಳವಾರ ಉಗ್ರರ ಒಳನುಸುಳುವಿಕೆ ಪ್ರಯತ್ನವನ್ನು ಸೇನೆಯು ವಿಫಲಗೊಳಿಸಿದ್ದರಿಂದ ಓರ್ವ ಯೋಧ ಹುತಾತ್ಮರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಟ್ವೀಟ್ ಮಾಡಿರುವ ವೈಟ್ ನೈಟ್ ಕಾರ್ಪ್ಸ್, ಬಟ್ಟಲ್ ಸೆಕ್ಟರ್ ನಲ್ಲಿ ಮುಂಜಾನೆ 3 ಗಂಟೆ ಸಮಯದಲ್ಲಿ ಉಗ್ರರ ಒಳನುಸುಳುವಿಕೆ ಪ್ರಯತ್ನವನ್ನು ಸೇನಾ ಪಡೆಗಳು ಪರಿಣಾಮಕಾರಿಯಾಗಿ ವಿಫಲಗೊಳಿಸಿದವು. ಭಾರೀ ಗುಂಡಿನ ಚಕಮಕಿ ಸಮಯದಲ್ಲಿ, ಒಬ್ಬ ಧೈರ್ಯಶಾಲಿ ಗಾಯಗೊಂಡಿದ್ದಾರೆ. ಕಾರ್ಯಾಚರಣೆಗಳು ಮುಂದುವರೆದಿದೆ ಎಂದು ಹೇಳಿತ್ತು.

ಮೂಲಗಳ ಪ್ರಕಾರ, ಕೃಷ್ಣಗತಿ ಬೆಲ್ಟ್‌ನ ಬತ್ತಲ್ ಫಾರ್ವರ್ಡ್ ಪ್ರದೇಶದಲ್ಲಿ ಉಗ್ರರನ್ನು ಪರಿಣಾಮಕಾರಿಯಾಗಿ ಹಿಮ್ಮಟ್ಟಿಸಲಾಗಿದೆ. ಈ ವೇಳೆ ತೀವ್ರವಾದ ಗುಂಡಿನ ಚಕಮಕಿಯಲ್ಲಿ ಗಾಯಗೊಂಡಿದ್ದ ಲ್ಯಾನ್ಸ್ ನಾಯಕ್ ಸುಭಾಷ್ ಕುಮಾರ್ ಸಾವನ್ನಪ್ಪಿದ್ದಾರೆ. ಉಗ್ರರ ಕಡೆಯೂ ನಷ್ಟವಾಗಿದೆ ಎಂದು ತಿಳಿದುಬಂದಿದೆ.

ಮರಣೋತ್ತರ ಪರೀಕ್ಷೆ ನಡೆಸಿ ಯೋಧನ ದೇಹವನ್ನು ಸೇನೆಗೆ ಹಸ್ತಾಂತರಿಸಲಾಗಿದೆ. ಈ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ಆರಂಭಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇತ್ತೀಚಿನ ತಿಂಗಳುಗಳಲ್ಲಿ ಜಮ್ಮುವಿನಲ್ಲಿ ಭಯೋತ್ಪಾದಕ ಚಟುವಟಿಕೆಗಳು ಹೆಚ್ಚುತ್ತಿದ್ದು, ಈ ಪ್ರದೇಶದಲ್ಲಿ ಉಗ್ರಗಾಮಿತ್ವದ ಪುನರುಜ್ಜೀವನದ ಬಗ್ಗೆ ಆತಂಕವನ್ನು ಹೆಚ್ಚಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್‌ ಸರ್ಕಾರ ವಿರುದ್ಧ ಪ್ರತಿಭಟನೆ: ಹಿಂಸಾಚಾರದಲ್ಲಿ ಮೃತಪಟ್ಟವರ ಸಂಖ್ಯೆ 116 ಕ್ಕೆ ಏರಿಕೆ

ಕೇಂದ್ರ ಬಜೆಟ್ 2026-27: ರಾಜ್ಯದ ಹಣಕಾಸು ಸಮತೋಲನ ಪುನಃಸ್ಥಾಪಿಸಲು ಹೆಚ್ಚಿನ ಅನುದಾನ ಒದಗಿಸಿ; ಕೇಂದ್ರಕ್ಕೆ ರಾಜ್ಯ ಸರ್ಕಾರ ಆಗ್ರಹ

Grok ಅಶ್ಲೀಲ ಕಂಟೆಂಟ್ ವಿವಾದ: ಕೇಂದ್ರ ಸರ್ಕಾರಕ್ಕೆ ಕೊನೆಗೂ ಮಣಿದ X, 600 ಖಾತೆಗಳ ಡಿಲೀಟ್!

ಕೌಟುಂಬಿಕ ಹಿಂಸಾಚಾರ ಸಂತ್ರಸ್ಥರಿಗೆ ಬೆಂಗಳೂರಿನಲ್ಲಿ ಅಣಬೆ ಕೃಷಿ ತರಬೇತಿ

ನೋಂದಣಿ ಇಲ್ಲದೆ 'stock tips': ‘Finfluencers’ಗಳ ಸುಮಾರು 1 ಲಕ್ಷ ವಿಡಿಯೋ ಡಿಲೀಟ್​ ಮಾಡಿದ SEBI

SCROLL FOR NEXT