ಕ್ಲೈಡ್ ಕ್ರಾಸ್ಟೊ 
ದೇಶ

NDA ಮಿತ್ರಪಕ್ಷಗಳಿಗಾಗಿ ಕೇಂದ್ರ ಬಜೆಟ್ ಮಂಡಿಸಲಾಗಿದೆ, ದೇಶಕ್ಕಾಗಿ ಅಲ್ಲ: NCP (SP)

ಬಜೆಟ್‌ನಲ್ಲಿ ಮಹಾರಾಷ್ಟ್ರವನ್ನು ನಿರ್ಲಕ್ಷಿಸಲಾಗಿದೆ ಮತ್ತು ಈ ವರ್ಷದ ಕೊನೆಯಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ರಾಜ್ಯದ ಜನರು ಬಿಜೆಪಿಗೆ ತಕ್ಕ ಪಾಠ ಕಲಿಸಲಿದ್ದಾರೆ.

ಮುಂಬೈ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಕೇಂದ್ರ ಬಜೆಟ್ ದೇಶಕ್ಕಾಗಿ ಅಲ್ಲ. ಬಿಹಾರ ಮತ್ತು ಆಂಧ್ರಪ್ರದೇಶದ ಎನ್‌ಡಿಎ ಮಿತ್ರಪಕ್ಷಗಳಿಗಾಗಿ ಈ ಬಜೆಟ್ ಮಂಡಿಸಲಾಗಿದೆ ಎಂದು ಎನ್‌ಸಿಪಿ(ಎಸ್‌ಪಿ) ಮಂಗಳವಾರ ಟೀಕಿಸಿದೆ.

ಈ ಕುರಿತು 'ಎಕ್ಸ್' ನಲ್ಲಿ ಪೋಸ್ಟ್ ಮಾಡಿದ ಎನ್‌ಸಿಪಿ(ಎಸ್‌ಪಿ) ವಕ್ತಾರ ಕ್ಲೈಡ್ ಕ್ರಾಸ್ಟೊ, ಬಜೆಟ್‌ನಲ್ಲಿ ಮಹಾರಾಷ್ಟ್ರವನ್ನು ನಿರ್ಲಕ್ಷಿಸಲಾಗಿದೆ ಮತ್ತು ಈ ವರ್ಷದ ಕೊನೆಯಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ರಾಜ್ಯದ ಜನರು ಬಿಜೆಪಿಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಹೇಳಿದ್ದಾರೆ.

"ನಿರ್ಮಲಾ ಸೀತಾರಾಮನ್ ಅವರೇ ಬಿಹಾರ ಮತ್ತು ಆಂಧ್ರ ಪ್ರದೇಶಕ್ಕಾಗಿ ಮಾತ್ರ ಬಜೆಟ್ ಮಂಡಿಸಿದ್ದೀರಾ? ಇದು ಮಿತ್ರಪಕ್ಷಗಳನ್ನು ಹಿಡಿದಿಟ್ಟುಕೊಳ್ಳುವ ಬಜೆಟ್'. ಬಿಹಾರ ಮತ್ತು ಆಂಧ್ರಪ್ರದೇಶಕ್ಕೆ ಬಜೆಟ್ ಅನುಕೂಲಕರವಾಗಿಲ್ಲದಿದ್ದರೆ, ಅವರ ಸರ್ಕಾರ ಬೀಳುತ್ತದೆ ಎಂದು ಬಿಜೆಪಿ ತಿಳಿದಿದೆ. ಹೀಗಾಗಿ ನಿರ್ಮಲಾ ಸೀತಾರಾಮನ್ ಅವರು ಎನ್‌ಡಿಎ ಮಿತ್ರಪಕ್ಷಗಳಿಗೆ ಅನುಕೂಲವಾಗುವಂತೆ ಬಜೆಟ್ ಮಂಡಿಸಿದ್ದಾರೆಯೇ ಹೊರತು ದೇಶಕ್ಕಾಗಿ ಅಲ್ಲ ಎಂದು ಎನ್ ಸಿಪಿ ನಾಯಕ ವಾಗ್ದಾಳಿ ನಡೆಸಿದ್ದಾರೆ.

ಬಜೆಟ್ ನಲ್ಲಿ ಮಹಾರಾಷ್ಟ್ರವನ್ನು ಸಂಪೂರ್ಣವಾಗಿ ನಿರ್ಲಕ್ಷಿಸಲಾಗಿದೆ. ಜನ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ತಕ್ಕ ಪಾಠ ಕಲಿಸುತ್ತಾರೆ. ಜೈ ಹಿಂದ್, ಜೈ ಮಹಾರಾಷ್ಟ್ರ" ಎಂದು ಕ್ರಾಸ್ಟೊ ಪೋಸ್ಟ್ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಒಂದೆ ಕಂಪನಿಯ ವಾಚ್ ಕಟ್ಟಿ ಒಗ್ಗಟ್ಟು ಪ್ರದರ್ಶಿಸಿದ್ರಾ CM, DCM?; Cartier ವಾಚಿನ ಬೆಲೆ ಎಷ್ಟು ಗೊತ್ತಾ?

PMO ಕಚೇರಿಗೆ 'ಸೇವಾ ತೀರ್ಥ': ದೇಶದಲ್ಲಿರುವ ಎಲ್ಲಾ ರಾಜಭವನಗಳಿಗೆ 'ಲೋಕಭವನ' ಎಂದು ಮರುನಾಮಕರಣ!

ಬೆಂಗಳೂರು ವಿಮಾನ ನಿಲ್ದಾಣ, ಮಾಲ್‌ಗಳಿಗೆ ಬಾಂಬ್ ಬೆದರಿಕೆ; ತನಿಖೆ ಆರಂಭಿಸಿದ ಪೊಲೀಸರು

ಗೌತಮ್ ಗಂಭೀರ್ ಗೆ ಮೂಗುದಾರ..? ಮೆಂಟರ್ ಆಗಿ MS Dhoni ಎಂಟ್ರಿ.. 2026 ಟಿ20 ವಿಶ್ವಕಪ್ ಗೆ ಸಿದ್ಧತೆ!

ಯುಪಿಯಲ್ಲಿ ಮತ್ತೊಬ್ಬ BLO ಸಾವು; SIR ಕೆಲಸದ ಒತ್ತಡಕ್ಕೆ ಒಂದೇ ವಾರದಲ್ಲಿ ಐವರು ಬಲಿ

SCROLL FOR NEXT