ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಗುಲ್ಮಾರ್ಗ್ ಸ್ಕೀ ರೆಸಾರ್ಟ್ ನಲ್ಲಿ ಸ್ಕೀಯಿಂಗ್ ಮಾಡಿ ಸಂಭ್ರಮಿಸುತ್ತಿರುವ ಪ್ರವಾಸಿಗರು. 
ದೇಶ

ಜಮ್ಮು ಮತ್ತು ಕಾಶ್ಮೀರಕ್ಕೆ ಕಳೆದ 6 ತಿಂಗಳಲ್ಲಿ 1 ಕೋಟಿಗೂ ಹೆಚ್ಚು ಪ್ರವಾಸಿಗರು ಭೇಟಿ

ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ ರೈ ಅವರು, ಕಾಶ್ಮೀರದ "ಪ್ರವಾಸೋದ್ಯಮ ಕ್ಷೇತ್ರವು ಕಳೆದ ಮೂರು ವರ್ಷಗಳಲ್ಲಿ ವಾರ್ಷಿಕ ಸರಾಸರಿ ಬೆಳವಣಿಗೆ ದರ ಶೇ. 15.13 ರಷ್ಟಿದೆ" ಎಂದು ಹೇಳಿದರು.

ನವದೆಹಲಿ: ಆರ್ಟಿಕಲ್ 370 ರದ್ದತಿಯ ನಂತರ ಜಮ್ಮು ಮತ್ತು ಕಾಶ್ಮೀರ ಪ್ರವಾಸೋದ್ಯಮ ಕ್ಷೇತ್ರವು ಅಭೂತಪೂರ್ವ ಬೆಳವಣಿಗೆ ಕಂಡಿದ್ದು, ಈ ವರ್ಷ ಕಳೆದ ಆರು ತಿಂಗಳಲ್ಲಿ ಒಟ್ಟು 1.08 ಕೋಟಿ ಪ್ರವಾಸಿಗರು ಭೇಟಿ ನೀಡಿದ್ದಾರೆ ಎಂದು ಎಂದು ಕೇಂದ್ರ ಗೃಹ ಸಚಿವಾಲಯ(MHA) ಬುಧವಾರ ರಾಜ್ಯಸಭೆಗೆ ತಿಳಿಸಿದೆ.

ಜಮ್ಮು ಮತ್ತು ಕಾಶ್ಮೀರ ಸರ್ಕಾರವು ಎಂಎಚ್‌ಎಗೆ ನೀಡಿದ ವರದಿಯನ್ನು ಉಲ್ಲೇಖಿಸಿ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ ರೈ ಅವರು, ಕಾಶ್ಮೀರದ "ಪ್ರವಾಸೋದ್ಯಮ ಕ್ಷೇತ್ರವು ಕಳೆದ ಮೂರು ವರ್ಷಗಳಲ್ಲಿ ವಾರ್ಷಿಕ ಸರಾಸರಿ ಬೆಳವಣಿಗೆ ದರ ಶೇ. 15.13 ರಷ್ಟಿದೆ" ಎಂದು ಹೇಳಿದರು.

2024ರ ಜನವರಿಯಿಂದ ಜೂನ್‌ವರೆಗೆ ಒಟ್ಟು 1,08,41,009 ಪ್ರವಾಸಿಗರು ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಿದ್ದಾರೆ ಮತ್ತು 2023ರಲ್ಲಿ 2,11,24,674 ಪ್ರವಾಸಿಗರು ಭೇಟಿ ನೀಡಿದ್ದಾರೆ. ಇದು ಇದುವರೆಗಿನ ಸಾರ್ವಕಾಲಿಕ ಗರಿಷ್ಠ ಪ್ರವಾಸಿಗರ ಸಂಖ್ಯೆಯಾಗಿದೆ ಎಂದು ರೈ ತಿಳಿಸಿದ್ದಾರೆ.

2022ರಲ್ಲಿ 1,88,64,332 ಪ್ರವಾಸಿಗರ ಭೇಟಿ ನೀಡಿದ್ದು, 2021 ರಲ್ಲಿ 1,13,14,884 ಮತ್ತು 2020 ರಲ್ಲಿ 34,70,834 ಪ್ರವಾಸಿಗರು ಭೇಟಿ ನೀಡಿದ್ದಾರೆ. 2020 ರಲ್ಲಿ ಕೋವಿಡ್ ಸಾಂಕ್ರಾಮಿಕ ರೋಗದಿಂದ ಪ್ರವಾಸಿಗರ ಸಂಖ್ಯೆ ಕಡಿಮೆಯಾಗಿದೆ ಎಂದು ಅವರು ಸ್ಪಷ್ಟಪಡಿಸಿದರು.

ಜಮ್ಮು ಮತ್ತು ಕಾಶ್ಮೀರ ಪ್ರವಾಸೋದ್ಯಮ ನೀತಿ 2020 ಸೇರಿದಂತೆ ಪ್ರವಾಸೋದ್ಯಮ ಕ್ಷೇತ್ರದಲ್ಲಿ ಗಮನಾರ್ಹ ಸುಧಾರಣೆಗೆ ಕಾರಣವಾದ ಹಲವಾರು ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಜಮ್ಮು ಮತ್ತು ಕಾಶ್ಮೀರ ಸರ್ಕಾರ ವರದಿ ಮಾಡಿದೆ.

ಇನ್ನು ಹೆಚ್ಚುತ್ತಿರುವ ಪ್ರವಾಸಿಗರಿಗೆ ಅವಕಾಶ ಕಲ್ಪಿಸಲು ಮತ್ತು ಪ್ರವಾಸೋದ್ಯಮ ಕ್ಷೇತ್ರದ ಆರ್ಥಿಕ ಲಾಭದಿಂದ ಸ್ಥಳೀಯರಿಗೆ ಪ್ರಯೋಜನಗಳನ್ನು ನೀಡಲು ಸರ್ಕಾರ ಹೋಂಸ್ಟೇ ಮಾರ್ಗಸೂಚಿಗಳನ್ನು ಸಹ ಪ್ರಕಟಿಸಿದೆ. ಸರ್ಕಾರವು ಜಮ್ಮು ಮತ್ತು ಕಾಶ್ಮೀರ ಚಲನಚಿತ್ರ ನೀತಿ- 2021 ಮತ್ತು ಹೌಸ್‌ಬೋಟ್ ನೀತಿ - 2020 ಜಾರಿಗೊಳಿಸಿದೆ ಅಲ್ಲದೆ 75 ಆಫ್-ಬೀಟ್ ಸ್ಥಳಗಳನ್ನು ಗುರುತಿಸಲಾಗಿದೆ ಎಂದು ಸಚಿವರು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇದು ಕೇವಲ ಧ್ವಜವಲ್ಲ ಭಾರತೀಯ ನಾಗರಿಕತೆಯ ಪುನರ್‌ ಜಾಗೃತಿಯ ಧ್ವಜ, ಶತಮಾನಗಳಷ್ಟು ಹಳೆಯ ಗಾಯ ಈಗ ವಾಸಿಯಾಗುತ್ತಿದೆ: ಪ್ರಧಾನಿ ಮೋದಿ

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಪೂರ್ಣ: ರಾಮ-ಸೀತೆ ವಿವಾಹ ಪರ್ವದಂದೇ ದೇಗುಲದ ಶಿಖರದ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

"Misfit For Army": ಗುರುದ್ವಾರ ಪ್ರವೇಶಿಸಲು ನಿರಾಕರಣೆ, ಕ್ರಿಶ್ಚಿಯನ್ ಸೇನಾ ಅಧಿಕಾರಿಗೆ 'ಸುಪ್ರೀಂ' ತರಾಟೆ!

ಭ್ರಷ್ಟರಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್: ಏಕ ಕಾಲದಲ್ಲಿ ರಾಜ್ಯದ 10 ಕಡೆ ದಾಳಿ- ಪರಿಶೀಲನೆ

WPL 2026 auction: ಈ ಬಾರಿಯ 'ಮೋಸ್ಟ್ ಡಿಮ್ಯಾಂಡ್' ಆಟಗಾರ್ತಿ ಯಾರು?

SCROLL FOR NEXT