ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಗುಲ್ಮಾರ್ಗ್ ಸ್ಕೀ ರೆಸಾರ್ಟ್ ನಲ್ಲಿ ಸ್ಕೀಯಿಂಗ್ ಮಾಡಿ ಸಂಭ್ರಮಿಸುತ್ತಿರುವ ಪ್ರವಾಸಿಗರು. 
ದೇಶ

ಜಮ್ಮು ಮತ್ತು ಕಾಶ್ಮೀರಕ್ಕೆ ಕಳೆದ 6 ತಿಂಗಳಲ್ಲಿ 1 ಕೋಟಿಗೂ ಹೆಚ್ಚು ಪ್ರವಾಸಿಗರು ಭೇಟಿ

ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ ರೈ ಅವರು, ಕಾಶ್ಮೀರದ "ಪ್ರವಾಸೋದ್ಯಮ ಕ್ಷೇತ್ರವು ಕಳೆದ ಮೂರು ವರ್ಷಗಳಲ್ಲಿ ವಾರ್ಷಿಕ ಸರಾಸರಿ ಬೆಳವಣಿಗೆ ದರ ಶೇ. 15.13 ರಷ್ಟಿದೆ" ಎಂದು ಹೇಳಿದರು.

ನವದೆಹಲಿ: ಆರ್ಟಿಕಲ್ 370 ರದ್ದತಿಯ ನಂತರ ಜಮ್ಮು ಮತ್ತು ಕಾಶ್ಮೀರ ಪ್ರವಾಸೋದ್ಯಮ ಕ್ಷೇತ್ರವು ಅಭೂತಪೂರ್ವ ಬೆಳವಣಿಗೆ ಕಂಡಿದ್ದು, ಈ ವರ್ಷ ಕಳೆದ ಆರು ತಿಂಗಳಲ್ಲಿ ಒಟ್ಟು 1.08 ಕೋಟಿ ಪ್ರವಾಸಿಗರು ಭೇಟಿ ನೀಡಿದ್ದಾರೆ ಎಂದು ಎಂದು ಕೇಂದ್ರ ಗೃಹ ಸಚಿವಾಲಯ(MHA) ಬುಧವಾರ ರಾಜ್ಯಸಭೆಗೆ ತಿಳಿಸಿದೆ.

ಜಮ್ಮು ಮತ್ತು ಕಾಶ್ಮೀರ ಸರ್ಕಾರವು ಎಂಎಚ್‌ಎಗೆ ನೀಡಿದ ವರದಿಯನ್ನು ಉಲ್ಲೇಖಿಸಿ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ ರೈ ಅವರು, ಕಾಶ್ಮೀರದ "ಪ್ರವಾಸೋದ್ಯಮ ಕ್ಷೇತ್ರವು ಕಳೆದ ಮೂರು ವರ್ಷಗಳಲ್ಲಿ ವಾರ್ಷಿಕ ಸರಾಸರಿ ಬೆಳವಣಿಗೆ ದರ ಶೇ. 15.13 ರಷ್ಟಿದೆ" ಎಂದು ಹೇಳಿದರು.

2024ರ ಜನವರಿಯಿಂದ ಜೂನ್‌ವರೆಗೆ ಒಟ್ಟು 1,08,41,009 ಪ್ರವಾಸಿಗರು ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಿದ್ದಾರೆ ಮತ್ತು 2023ರಲ್ಲಿ 2,11,24,674 ಪ್ರವಾಸಿಗರು ಭೇಟಿ ನೀಡಿದ್ದಾರೆ. ಇದು ಇದುವರೆಗಿನ ಸಾರ್ವಕಾಲಿಕ ಗರಿಷ್ಠ ಪ್ರವಾಸಿಗರ ಸಂಖ್ಯೆಯಾಗಿದೆ ಎಂದು ರೈ ತಿಳಿಸಿದ್ದಾರೆ.

2022ರಲ್ಲಿ 1,88,64,332 ಪ್ರವಾಸಿಗರ ಭೇಟಿ ನೀಡಿದ್ದು, 2021 ರಲ್ಲಿ 1,13,14,884 ಮತ್ತು 2020 ರಲ್ಲಿ 34,70,834 ಪ್ರವಾಸಿಗರು ಭೇಟಿ ನೀಡಿದ್ದಾರೆ. 2020 ರಲ್ಲಿ ಕೋವಿಡ್ ಸಾಂಕ್ರಾಮಿಕ ರೋಗದಿಂದ ಪ್ರವಾಸಿಗರ ಸಂಖ್ಯೆ ಕಡಿಮೆಯಾಗಿದೆ ಎಂದು ಅವರು ಸ್ಪಷ್ಟಪಡಿಸಿದರು.

ಜಮ್ಮು ಮತ್ತು ಕಾಶ್ಮೀರ ಪ್ರವಾಸೋದ್ಯಮ ನೀತಿ 2020 ಸೇರಿದಂತೆ ಪ್ರವಾಸೋದ್ಯಮ ಕ್ಷೇತ್ರದಲ್ಲಿ ಗಮನಾರ್ಹ ಸುಧಾರಣೆಗೆ ಕಾರಣವಾದ ಹಲವಾರು ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಜಮ್ಮು ಮತ್ತು ಕಾಶ್ಮೀರ ಸರ್ಕಾರ ವರದಿ ಮಾಡಿದೆ.

ಇನ್ನು ಹೆಚ್ಚುತ್ತಿರುವ ಪ್ರವಾಸಿಗರಿಗೆ ಅವಕಾಶ ಕಲ್ಪಿಸಲು ಮತ್ತು ಪ್ರವಾಸೋದ್ಯಮ ಕ್ಷೇತ್ರದ ಆರ್ಥಿಕ ಲಾಭದಿಂದ ಸ್ಥಳೀಯರಿಗೆ ಪ್ರಯೋಜನಗಳನ್ನು ನೀಡಲು ಸರ್ಕಾರ ಹೋಂಸ್ಟೇ ಮಾರ್ಗಸೂಚಿಗಳನ್ನು ಸಹ ಪ್ರಕಟಿಸಿದೆ. ಸರ್ಕಾರವು ಜಮ್ಮು ಮತ್ತು ಕಾಶ್ಮೀರ ಚಲನಚಿತ್ರ ನೀತಿ- 2021 ಮತ್ತು ಹೌಸ್‌ಬೋಟ್ ನೀತಿ - 2020 ಜಾರಿಗೊಳಿಸಿದೆ ಅಲ್ಲದೆ 75 ಆಫ್-ಬೀಟ್ ಸ್ಥಳಗಳನ್ನು ಗುರುತಿಸಲಾಗಿದೆ ಎಂದು ಸಚಿವರು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಬಾಂಬೆ ಮಾದರಿಯಲ್ಲಿ ಕೊಳಗೇರಿ ಪುನಶ್ಚೇತನಕ್ಕೆ ಸಮಿತಿ ರಚನೆ: GBA ವ್ಯಾಪ್ತಿಗೆ ಆನೇಕಲ್ ಸೇರಿಸುವುದು ಕಷ್ಟ; ಡಿಕೆ ಶಿವಕುಮಾರ್

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

SCROLL FOR NEXT