ಅರವಿಂದ್ ಕೇಜ್ರಿವಾಲ್ 
ದೇಶ

ತಿಹಾರ್ ಜೈಲಿನಲ್ಲಿ ಎರಡು ಹೆಚ್ಚುವರಿ ಕಾನೂನು ಸಭೆಗಳಿಗೆ ಕೇಜ್ರಿವಾಲ್ ಗೆ ಹೈಕೋರ್ಟ್ ಅನುಮತಿ

ಕೇಜ್ರಿವಾಲ್ ಅವರಿಗೆ ಹೆಚ್ಚುವರಿ ಸಭೆ ನಡೆಸುವ ಅವಕಾಶ ನೀಡುವ ಕೋರ್ಟ್ ನಿರ್ಧಾರಕ್ಕೆ ಜಾರಿ ನಿರ್ದೇಶನಾಲಯ ಮತ್ತು ತಿಹಾರ್ ಜೈಲು ಅಧಿಕಾರಿಗಳು ಆಕ್ಷೇಪ ವ್ಯಕ್ತಪಡಿಸಿದರು.

ನವದೆಹಲಿ: ಜೈಲಿನಲ್ಲಿರುವ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ತಿಹಾರ್ ಜೈಲಿನಲ್ಲಿರುವಾಗ ತಮ್ಮ ಕಾನೂನು ತಂಡದೊಂದಿಗೆ ವಾರಕ್ಕೆ ಎರಡು ಹೆಚ್ಚುವರಿ ಸಭೆ ನಡೆಸಲು ದೆಹಲಿ ಹೈಕೋರ್ಟ್ ಗುರುವಾರ ಅನುಮತಿ ನೀಡಿದೆ.

2021-22ರ ದೆಹಲಿ ಅಬಕಾರಿ ನೀತಿಯಲ್ಲಿನ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಜ್ರಿವಾಲ್ ಕಾನೂನು ಹೋರಾಟ ನಡೆಸುತ್ತಿರುವ ನಡುವೆ ನ್ಯಾಯಾಲಯದಿಂದ ಈ ಆದೇಶ ಬಂದಿದೆ.

ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ನೀನಾ ಬನ್ಸಾಲ್ ಕೃಷ್ಣ ಅವರು, ಕೇಜ್ರಿವಾಲ್ ಜೈಲು ಶಿಕ್ಷೆ ಸಂದರ್ಭದಲ್ಲಿ ನ್ಯಾಯಯುತ ವಿಚಾರಣೆ ಮತ್ತು ಪರಿಣಾಮಕಾರಿ ಕಾನೂನು ಪ್ರಾತಿನಿಧ್ಯದ ಹಕ್ಕನ್ನು ಖಾತ್ರಿಪಡಿಸುವ ಮಹತ್ವವನ್ನು ಒತ್ತಿಹೇಳುವ ಮೂಲಕ ತಮ್ಮ ತೀರ್ಪನ್ನು ಸಮರ್ಥಿಸಿಕೊಂಡರು.

ಸಾಮಾನ್ಯ ಕೈದಿಗಳಿಗೆ ವಾರದಲ್ಲಿ ಎರಡು ಸಭೆ ನಡೆಸಲು ಅವಕಾಶವಿದೆ. ಆದರೆ, ಕೇಜ್ರಿವಾಲ್ ಅವರಿಗೆ ಹೆಚ್ಚುವರಿ ಸಭೆ ನಡೆಸುವ ಅವಕಾಶ ನೀಡುವ ಕೋರ್ಟ್ ನಿರ್ಧಾರಕ್ಕೆ ಜಾರಿ ನಿರ್ದೇಶನಾಲಯ ಮತ್ತು ತಿಹಾರ್ ಜೈಲು ಅಧಿಕಾರಿಗಳು ಆಕ್ಷೇಪ ವ್ಯಕ್ತಪಡಿಸಿದರು.

ವಿವಿಧ ರಾಜ್ಯಗಳಲ್ಲಿಯೂ ಅನೇಕ ಪ್ರಕರಣಗಳನ್ನು ಎದುರಿಸುತ್ತಿರುವ ಕೇಜ್ರಿವಾಲ್, ತನ್ನ ಕಾನೂನು ತಂಡದೊಂದಿಗೆ ಹೆಚ್ಚುವರಿ ವರ್ಚುಯಲ್ ಸಭೆ ನಡೆಸಲು ಅನುಮತಿ ಕೋರಿ ಆರಂಭದಲ್ಲಿ ವಿಚಾರಣಾ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಆದರೆ, ಅಲ್ಲಿ ಅವರ ಅರ್ಜಿ ತಿರಸ್ಕೃತಗೊಂಡಿದ್ದರಿಂದ ದೆಹಲಿ ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದರು.

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಹಣ ಅವ್ಯವಹಾರ, ಕ್ರಿಮಿನಲ್ ಸಂಚಿನಲ್ಲಿ ತೊಡಗಿಸಿಕೊಂಡಿರುವ ಆರೋಪದಲ್ಲಿ ಕೇಜ್ರಿವಾಲ್ ಕಾನೂನು ಹೋರಾಟ ನಡೆಸುತ್ತಿದ್ದಾರೆ. ಜಾರಿ ನಿರ್ದೇಶನಾಲಯ ಪ್ರಕರಣದಲ್ಲಿ ಕೇಜ್ರಿವಾಲ್‌ಗೆ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ನೀಡಿದ್ದರೂ, ಸಿಬಿಐ ವಿಚಾರಣೆಗೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್‌ ಸರ್ಕಾರ ವಿರುದ್ಧ ಪ್ರತಿಭಟನೆ: ಹಿಂಸಾಚಾರದಲ್ಲಿ ಮೃತಪಟ್ಟವರ ಸಂಖ್ಯೆ 116 ಕ್ಕೆ ಏರಿಕೆ

ಕೇಂದ್ರ ಬಜೆಟ್ 2026-27: ರಾಜ್ಯದ ಹಣಕಾಸು ಸಮತೋಲನ ಪುನಃಸ್ಥಾಪಿಸಲು ಹೆಚ್ಚಿನ ಅನುದಾನ ಒದಗಿಸಿ; ಕೇಂದ್ರಕ್ಕೆ ರಾಜ್ಯ ಸರ್ಕಾರ ಆಗ್ರಹ

Grok ಅಶ್ಲೀಲ ಕಂಟೆಂಟ್ ವಿವಾದ: ಕೇಂದ್ರ ಸರ್ಕಾರಕ್ಕೆ ಕೊನೆಗೂ ಮಣಿದ X, 600 ಖಾತೆಗಳ ಡಿಲೀಟ್!

ನೋಂದಣಿ ಇಲ್ಲದೆ 'stock tips': ‘Finfluencers’ಗಳ ಸುಮಾರು 1 ಲಕ್ಷ ವಿಡಿಯೋ ಡಿಲೀಟ್​ ಮಾಡಿದ SEBI

ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯಿಂದ ರಿಷಭ್ ಪಂತ್ ಔಟ್; ಭಾರತ ತಂಡ ಸೇರಿದ 24 ವರ್ಷದ ಆಟಗಾರ!

SCROLL FOR NEXT