ರಾಷ್ಟ್ರಪತಿ ದ್ರೌಪದಿ ಮುರ್ಮು  
ದೇಶ

ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಶಿಕ್ಷಕಿಯಾದ ರಾಷ್ಟ್ರಪತಿ ದ್ರೌಪದಿ ಮುರ್ಮು: ಪರಿಸರ ಸಂರಕ್ಷಣೆ ಕುರಿತು ಬೋಧನೆ!

ವಿದ್ಯಾರ್ಥಿಗಳಿಗೆ ರಾಷ್ಟ್ರಪತಿ ಮುರ್ಮು ಅವರು, ಹವಾಮಾನ ಬದಲಾವಣೆ, ನೀರಿನ ಸಂರಕ್ಷಣೆ, ಪರಿಸರ ಸಂರಕ್ಷಣೆಯ ಕುರಿತು ಬೋಧನೆ ಮಾಡಿದರು. ಅಲ್ಲದೆ, ಮರ ನೆಡುವಂತೆ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಿಸಿದರು.

ನವದೆಹಲಿ: ದೆಹಲಿಯ ಡಾ ರಾಜೇಂದ್ರ ಪ್ರಸಾದ್ ಕೇಂದ್ರೀಯ ವಿದ್ಯಾಲಯಕ್ಕೆ ಗುರುವಾರ ಭೇಟಿ ನೀಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು, ಜಾಗತಿಕ ತಾಪಮಾನ ಏರಿಕೆ ಹಾಗೂ ಪರಿಸರ ಸಂರಕ್ಷಣೆ ಕುರಿತು ವಿದ್ಯಾರ್ಥಿಗಳಿಗೆ ಬೋಧನೆ ಮಾಡಿದರು.

ರಾಷ್ಟ್ರಪತಿಗಳಾಗಿ 2 ವರ್ಷಗಳ ಅಧಿಕಾರಾವಧಿ ಪೂರೈಸಿದ ಹಿನ್ನೆಲೆಯಲ್ಲಿ ದ್ರೌಪದಿ ಮುರ್ಮು ಅವರು, ಶಾಲೆಗೆ ಭೇಟಿ ನೀಡಿ, ವಿದ್ಯಾರ್ಥಿಗಳೊಂದಿಗೆ ಕೆಲಕಾಲ ಸಂವಾದ ನಡೆಸಿದರು.

ಈ ವೇಳೆ ಶಾಲೆಯ 9 ತರಗತಿಯ ವಿದ್ಯಾರ್ಥಿಗಳಿಗೆ ರಾಷ್ಟ್ರಪತಿ ಮುರ್ಮು ಅವರು, ಹವಾಮಾನ ಬದಲಾವಣೆ, ನೀರಿನ ಸಂರಕ್ಷಣೆ, ಪರಿಸರ ಸಂರಕ್ಷಣೆಯ ಕುರಿತು ಬೋಧನೆ ಮಾಡಿದರು. ಅಲ್ಲದೆ, ಮರ-ಗಿಡ ನೆಡುವಂತೆ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಿಸಿದರು.

ಹೆಚ್ಚಿನ ಸಂಖ್ಯೆಯಲ್ಲಿ ಮರಗಳ ನೆಡಬೇಕು. ನೀರು ವ್ಯರ್ಥ ಮಾಡಬಾರದು. ಮಳೆನೀರು ಕೊಯ್ಲು ಮೂಲಕ ಸಂರಕ್ಷಣಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಹೇಳಿದರು. ಇದಲ್ಲದೆ, ವಾಯು ಮಾಲಿನ್ಯ ಹಾಗೂ ಮಾಲಿನ್ಯ ಕಡಿಮೆ ಮಾಡುವ ಮಾರ್ಗಗಳ ಕುರಿತಂತೆ ಹಾಗೂ ಪ್ರಧಾನಿ ಮೋದಿ ಅವರು ಪ್ರಾರಂಭಿಸಿದ 'ಏಕ್ ಪೆಡ್ ಮಾ ಕೆ ನಾಮ್' ಉಪಕ್ರಮದ ಬಗ್ಗೆ ಮಾತನಾಡಿದರು. ಇದೇ ವೇಳೆ ವಿದ್ಯಾರ್ಥಿಗಳು ತಮ್ಮ ಜನ್ಮದಿನದಂದು ಮರವನ್ನು ನೆಡುವಂತೆಯೂ ಹೇಳಿದರು.

ವಿದ್ಯಾರ್ಥಿಗಳೊಂದಿಗೆ ಮಾತುಕತೆ ನಡೆಸುವ ವೇಳೆ ಮಕ್ಕಳೊಂದಿಗೆ ಮಕ್ಕಳಾದ ರಾಷ್ಟ್ರಪತಿಗಳು, ವಿದ್ಯಾರ್ಥಿಗಳ ಆಸೆ, ಆಕಾಂಕ್ಷೆ ಹಾಗೂ ಅವರು ಇಷ್ಟಪಡುವ ವಿಷಯಗಳನ್ನು ಕೇಳಿದರು. ಈ ವೇಳೆ ಕೆಲ ವಿದ್ಯಾರ್ಥಿಗಳು ವಿಜ್ಞಾನಿ, ವೈದ್ಯರಾಗುವ ಇಚ್ಛೆಯನ್ನು ವ್ಯಕ್ತಪಡಿಸಿದರು.

ನಿಮ್ಮೊಂದಿಗಿದ್ದ ಸಮಯ ಸಾಕಷ್ಟು ಸಂತಸ ತಂದಿದೆ. ನಿಮ್ಮೆಲ್ಲರಿಂದ ಸಾಕಷ್ಟು ಕಲಿಯುವ ಅವಕಾಶ ಸಿಕ್ಕಿತು. ನೀವು 9 ನೇ ತರಗತಿಯಲ್ಲಿ ಓದುತ್ತಿದ್ದು, ಜಾಗತಿಕ ತಾಪಮಾನದ ಪ್ರಭಾವದ ಬಗ್ಗೆ ಚೆನ್ನಾಗಿ ತಿಳಿದಿರುತ್ತೀರಿ. ನೀವು ದೊಡ್ಡವರಾದ ನಂತರ ಜಾಗತಿಕ ತಾಪಮಾನ ಕಡಿಮೆಯಾಗುವ ವಿಶ್ವಾಸವಿದೆ ಎಂದು ಹೇಳಿದರು.

ದ್ರೌಪದಿ ಮುರ್ಮು ಅವರು 1958 ಜೂನ್ 20 ರಂದು ಒಡಿಶಾ ರಾಜ್ಯದ ಮಯೂರ್ ಭಂಜ್ ಜಿಲ್ಲೆಯ ಬೈದಪೋಸಿ ಗ್ರಾಮದ ಸಂತಾಲಿ ಎಂಬ ಬುಡಕಟ್ಟು ಕುಟುಂಬದಲ್ಲಿ ಜನಿಸಿದರು. ಇವರ ತಂದೆ ಮತ್ತು ಅಜ್ಜ ಪಂಚಾಯಾತ್ ರಾಜ್‌ ಯೋಜನೆಯಡಿಯಲ್ಲಿ ಗ್ರಾಮದ ಮುಖ್ಯಸ್ಥರಾಗಿದ್ದರು. ದ್ರೌಪದಿ ಮುರ್ಮು ವಿದ್ಯಾಭ್ಯಾಸ ಭುವನೇಶ್ವರದ ರಮಾದೇವಿ ಮಹಿಳಾ ಕಾಲೇಜಿನಲ್ಲಿ ವ್ಯಾಸಂಗ ಮಾಡಿರುವ ದ್ರೌಪದಿ ಮುರ್ಮು ಅವರು ಬಿಎ ಪದವಿ ಪಡೆದಿದ್ದಾರೆ.

ದ್ರೌಪದಿ ಮುರ್ಮು ಅವರು ರಾಜಕೀಯಕ್ಕೆ ಪ್ರವೇಶಿಸುವ ಮೊದಲು ಶಿಕ್ಷಕಿಯಾಗಿ ಸೇವೆಸಲ್ಲಿಸಿದ್ದರು. ಒಡಿಶಾದ ರಾಯರಂಗಪುರದಿಂದ 2000 ಮತ್ತು 2009 ರಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ರಾಷ್ಟ್ರಪತಿ ಭವನವನ್ನು ತೊರೆಯಲು ನಿರ್ಧರಿಸಿದಾಗ ದ್ರೌಪದಿ ಮುರ್ಮು ಅವರನ್ನು ಮೊದಲ ಸ್ಪರ್ಧಿಯಾಗಿ ಪರಿಗಣಿಸಲಾಗಿತ್ತು. 2000 ರಲ್ಲಿ ಶಾಸಕಿಯಾಗಿ ಆಯ್ಕೆಯಾದ ಸಮಯದಲ್ಲಿ ಬಿಜೆಪಿ-ಬಿಜೆಡಿ ಸಮ್ಮಿಶ್ರ ಸರ್ಕಾರದಲ್ಲಿ ವಾಣಿಜ್ಯ, ಸಾರಿಗೆ, ಮೀನುಗಾರಿಕೆ, ಪಶುಸಂಗೋಪನೆ ಖಾತೆಗಳನ್ನು ಹೊಂದಿದ್ದರು. 2015 ದ್ರೌಪದಿ ಮುರ್ಮು ಅವರು ಜಾರ್ಖಂಡ್‌ನ ಮೊದಲ ಮಹಿಳಾ ರಾಜ್ಯಪಾಲರಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

SCROLL FOR NEXT