ಬಿಡಾಡಿ ದನಗಳು 
ದೇಶ

ಇನ್ನು ಮುಂದೆ ಹಸುಗಳಿಗೆ 'ಬಿಡಾಡಿ ದನ' ಎಂದು ಕರೆಯುವಂತಿಲ್ಲ: ರಾಜಸ್ಥಾನ ಸಚಿವ

ಇನ್ನು ಮುಂದೆ ಬಿಡಾಡಿ ದನಗಳಿಗೆ 'ನಿರಾಶ್ರಿತ್' (ನಿರ್ಗತಿಕ) ಪದವನ್ನು ಬಳಸಲಾಗುವುದು ಎಂದು ಪಶುಸಂಗೋಪನೆ ಮತ್ತು ಡೈರಿ ಸಚಿವ ಜೋರಾರಾಮ್ ಕುಮಾವತ್ ಹೇಳಿದರು.

ಜೈಪುರ: ರಾಜಸ್ಥಾನದಲ್ಲಿ ಇನ್ನು ಮುಂದೆ ಹಸುಗಳಿಗೆ 'ಬಿಡಾಡಿ ದನ' ಎಂಬ ಪದವನ್ನು ಬಳಸುವಂತಿಲ್ಲ ಎಂದು ಪಶುಸಂಗೋಪನೆ ಮತ್ತು ಡೈರಿ ಸಚಿವ ಜೋರಾರಾಮ್ ಕುಮಾವತ್ ಅವರು ಹೇಳಿದ್ದಾರೆ.

ರಾಜಸ್ಥಾನ ವಿಧಾನಸಭೆಯಲ್ಲಿ ಬುಧವಾರ ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಯ ಅನುದಾನದ ಬೇಡಿಕೆಯ ಮೇಲಿನ ಚರ್ಚೆಗೆ ಉತ್ತರಿಸಿದ ಕುಮಾವತ್ ಅವರು, ಇನ್ನು ಮುಂದೆ ಬಿಡಾಡಿ ದನಗಳಿಗೆ 'ನಿರಾಶ್ರಿತ್' (ನಿರ್ಗತಿಕ) ಪದವನ್ನು ಬಳಸಲಾಗುವುದು ಎಂದು ಹೇಳಿದರು.

ಇದೇ ವೇಳೆ ಮೌಲ್ಯಯುತ ಪಶು ಸಂಪತ್ತನ್ನು ಅಭಿವೃದ್ಧಿಪಡಿಸಿ ಜಾನುವಾರುಗಳ ಉತ್ಪಾದನೆ ಹೆಚ್ಚಿಸುವ ಮೂಲಕ ಪಶುಪಾಲಕರನ್ನು ಆರ್ಥಿಕವಾಗಿ ಸ್ವಾವಲಂಬಿಗಳನ್ನಾಗಿ ಮಾಡಲು ರಾಜ್ಯ ಸರ್ಕಾರ ಬದ್ಧವಾಗಿದೆ. ಗೋವು ಮತ್ತು ಗೂಳಿಗಳ ರಕ್ಷಣೆ ಹಾಗೂ ಪ್ರಚಾರಕ್ಕಾಗಿ ಸರ್ಕಾರ ಸೂಕ್ಷ್ಮವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಸಚಿವರು ಹೇಳಿದರು.

ಚರ್ಚೆಯ ನಂತರ ವಿಧಾನಸಭೆಯು ಧ್ವನಿ ಮತದ ಮೂಲಕ ಇಲಾಖೆಯ ಅನುದಾನ ಬೇಡಿಕೆಗಳನ್ನು ಅಂಗೀಕರಿಸಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

SCROLL FOR NEXT