ಬಿಡಾಡಿ ದನಗಳು 
ದೇಶ

ಇನ್ನು ಮುಂದೆ ಹಸುಗಳಿಗೆ 'ಬಿಡಾಡಿ ದನ' ಎಂದು ಕರೆಯುವಂತಿಲ್ಲ: ರಾಜಸ್ಥಾನ ಸಚಿವ

ಇನ್ನು ಮುಂದೆ ಬಿಡಾಡಿ ದನಗಳಿಗೆ 'ನಿರಾಶ್ರಿತ್' (ನಿರ್ಗತಿಕ) ಪದವನ್ನು ಬಳಸಲಾಗುವುದು ಎಂದು ಪಶುಸಂಗೋಪನೆ ಮತ್ತು ಡೈರಿ ಸಚಿವ ಜೋರಾರಾಮ್ ಕುಮಾವತ್ ಹೇಳಿದರು.

ಜೈಪುರ: ರಾಜಸ್ಥಾನದಲ್ಲಿ ಇನ್ನು ಮುಂದೆ ಹಸುಗಳಿಗೆ 'ಬಿಡಾಡಿ ದನ' ಎಂಬ ಪದವನ್ನು ಬಳಸುವಂತಿಲ್ಲ ಎಂದು ಪಶುಸಂಗೋಪನೆ ಮತ್ತು ಡೈರಿ ಸಚಿವ ಜೋರಾರಾಮ್ ಕುಮಾವತ್ ಅವರು ಹೇಳಿದ್ದಾರೆ.

ರಾಜಸ್ಥಾನ ವಿಧಾನಸಭೆಯಲ್ಲಿ ಬುಧವಾರ ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಯ ಅನುದಾನದ ಬೇಡಿಕೆಯ ಮೇಲಿನ ಚರ್ಚೆಗೆ ಉತ್ತರಿಸಿದ ಕುಮಾವತ್ ಅವರು, ಇನ್ನು ಮುಂದೆ ಬಿಡಾಡಿ ದನಗಳಿಗೆ 'ನಿರಾಶ್ರಿತ್' (ನಿರ್ಗತಿಕ) ಪದವನ್ನು ಬಳಸಲಾಗುವುದು ಎಂದು ಹೇಳಿದರು.

ಇದೇ ವೇಳೆ ಮೌಲ್ಯಯುತ ಪಶು ಸಂಪತ್ತನ್ನು ಅಭಿವೃದ್ಧಿಪಡಿಸಿ ಜಾನುವಾರುಗಳ ಉತ್ಪಾದನೆ ಹೆಚ್ಚಿಸುವ ಮೂಲಕ ಪಶುಪಾಲಕರನ್ನು ಆರ್ಥಿಕವಾಗಿ ಸ್ವಾವಲಂಬಿಗಳನ್ನಾಗಿ ಮಾಡಲು ರಾಜ್ಯ ಸರ್ಕಾರ ಬದ್ಧವಾಗಿದೆ. ಗೋವು ಮತ್ತು ಗೂಳಿಗಳ ರಕ್ಷಣೆ ಹಾಗೂ ಪ್ರಚಾರಕ್ಕಾಗಿ ಸರ್ಕಾರ ಸೂಕ್ಷ್ಮವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಸಚಿವರು ಹೇಳಿದರು.

ಚರ್ಚೆಯ ನಂತರ ವಿಧಾನಸಭೆಯು ಧ್ವನಿ ಮತದ ಮೂಲಕ ಇಲಾಖೆಯ ಅನುದಾನ ಬೇಡಿಕೆಗಳನ್ನು ಅಂಗೀಕರಿಸಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT