ಮಮತಾ ಬ್ಯಾನರ್ಜಿ PTI
ದೇಶ

'ನೀತಿ ಆಯೋಗ ರದ್ದುಗೊಳಿಸಿ': ಪ್ರಧಾನಿ ಮೋದಿ ಭೇಟಿಗೂ ಮುನ್ನ ಮಮತಾ ಬ್ಯಾನರ್ಜಿ ಆಗ್ರಹ

ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಜುಲೈ 27ರಂದು ನವದೆಹಲಿಯಲ್ಲಿ ನೀತಿ ಆಯೋಗದ ಆಡಳಿತ ಮಂಡಳಿ ಸಭೆ ನಡೆಯಲಿದೆ. ಈ ಸಭೆಗಾಗಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕೂಡ ದೆಹಲಿ ತಲುಪಿದ್ದಾರೆ.

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಜುಲೈ 27ರಂದು ನವದೆಹಲಿಯಲ್ಲಿ ನೀತಿ ಆಯೋಗದ ಆಡಳಿತ ಮಂಡಳಿ ಸಭೆ ನಡೆಯಲಿದೆ. ಈ ಸಭೆಗಾಗಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕೂಡ ದೆಹಲಿ ತಲುಪಿದ್ದಾರೆ. ಆದರೆ ಸಭೆಗೂ ಮುನ್ನ ಸಿಎಂ ಮಮತಾ ಬ್ಯಾನರ್ಜಿ ದೊಡ್ಡ ಆಗ್ರಹವನ್ನು ಮುಂದಿಟ್ಟಿದ್ದು ನೀತಿ ಆಯೋಗವನ್ನು ರದ್ದುಗೊಳಿಸುವಂತೆ ಕೋರಿದ್ದಾರೆ.

ನೀತಿ ಆಯೋಗವನ್ನು ರದ್ದುಗೊಳಿಸಿ, ಯೋಜನಾ ಆಯೋಗವನ್ನು ಮರಳಿ ತನ್ನಿ. ಯೋಜನಾ ಆಯೋಗವು ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಕಲ್ಪನೆಯಾಗಿದೆ. ಈ ಸರ್ಕಾರವು ಆಂತರಿಕ ಕಚ್ಚಾಟದಲ್ಲಿ ಬೀಳುತ್ತದೆ ಎಂದರು. ಇದೇ ವೇಳೆ ಅವರು, ಬಂಗಾಳದಲ್ಲಿ ಬಿಜೆಪಿಯ ಸೂರ್ಯ ಮುಳುಗುತ್ತಿದೆ. ಮಹಾರಾಷ್ಟ್ರದಲ್ಲಿ ಉದ್ಧವ್ ಠಾಕ್ರೆ ಮೈತ್ರಿ ಗೆಲ್ಲಲಿದೆ. ಹರಿಯಾಣದಲ್ಲಿ ಬಿಜೆಪಿ ಸೋಲಲಿದೆ ಮತ್ತು ಜಾರ್ಖಂಡ್‌ನಲ್ಲಿ ಹೇಮಂತ್ ಸೋರೆನ್ ಮತ್ತೆ ಗೆಲ್ಲಲಿದ್ದಾರೆ ಎಂದರು.

ಸಿಎಎ ಕುರಿತಂತೆ ಮಾತನಾಡಿದ ಅವರು, ಒಂದು ಸರ್ಕಾರ ಅದನ್ನು ತರಲು ಸಾಧ್ಯವಾದರೆ ಮತ್ತೊಂದು ಸರ್ಕಾರವೂ ಅದನ್ನು ಹಿಂಪಡೆಯಬಹುದು ಎಂದು ಹೇಳಿದರು. ಇತ್ತೀಚಿನ ಚುನಾವಣೆಯಲ್ಲಿ ಭಾರತ ಮೈತ್ರಿಕೂಟಕ್ಕೆ ಶೇ.51ರಷ್ಟು ಮತಗಳು ಹಾಗೂ ಎನ್‌ಡಿಎಗೆ ಶೇ.46ರಷ್ಟು ಮತಗಳು ಲಭಿಸಿವೆ ಎಂದು ಹೇಳಿದರು. ಎನ್‌ಡಿಎ ಭಾಗವಾಗುವ ಪ್ರಶ್ನೆಗೆ, ನಾನು ಸಿದ್ಧಾಂತದೊಂದಿಗೆ ರಾಜಿ ಮಾಡಿಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

ಬೆಂಗಳೂರು: ರಾತ್ರಿಯಿಡೀ ಸುರಿದ ಮಳೆಯಿಂದ ಹಲವೆಡೆ ಜಲಾವೃತ, ಸಂಚಾರ ದಟ್ಟಣೆ, ಇಂದಿನ IMD ವರದಿ!

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

ಬೆಳಗಾವಿ: ಬೀದಿ ನಾಯಿಗಳ ಅಟ್ಟಹಾಸ, 2 ವರ್ಷದ ಬಾಲಕಿ ಮೇಲೆ ಭೀಕರ ದಾಳಿ

SCROLL FOR NEXT