ಮಮತಾ ಬ್ಯಾನರ್ಜಿ 
ದೇಶ

ಮಮತಾ 'ಮೈಕ್ ಮ್ಯೂಟ್' ಆರೋಪ ಸುಳ್ಳು ಎಂದ ಪಿಐಬಿ ಫ್ಯಾಕ್ಟ್‌ ಚೆಕ್‌; ಬಂಗಾಳ ಸಿಎಂಗೆ ಸಮಯ ನಿಗದಿಪಡಿಸಲಾಗಿತ್ತು- ಸೀತಾರಾಮನ್

ಈ ಕುರಿತು ಸ್ಪಷ್ಟನೆ ನೀಡಿರುವ ಕೇಂದ್ರ ಸರ್ಕಾರದ ಫ್ಯಾಕ್ಟ್‌ ಚೆಕ್‌ ಸಂಸ್ಥೆ ಪ್ರೆಸ್ ಇನ್ಫರ್ಮೇಷನ್ ಬ್ಯೂರೋ(PIB), ಪಶ್ಚಿಮ ಬಂಗಾಳ ಸಿಎಂ ಆರೋಪ "ತಪ್ಪು ದಾರಿಗೆಳೆಯುವಂತಿದೆ" ಎಂದು ಹೇಳಿದೆ.

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಶನಿವಾರ ನಡೆದ NITI ಆಯೋಗದ ಸಭೆಯಲ್ಲಿ ತಾವು ಮಾತನಾಡುತ್ತಿದ್ದ ವೇಳೆ ತಮ್ಮ ಮೈಕ್ ಸ್ವಿಚ್ ಆಫ್ ಮಾಡಲಾಗಿದೆ ಎಂದು ಆರೋಪಿಸಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಸಭೆಯಿಂದ ಅರ್ಧಕ್ಕೆ ಹೊರನಡೆದಿದ್ದಾರೆ.

ಈ ಕುರಿತು ಸ್ಪಷ್ಟನೆ ನೀಡಿರುವ ಕೇಂದ್ರ ಸರ್ಕಾರದ ಫ್ಯಾಕ್ಟ್‌ ಚೆಕ್‌ ಸಂಸ್ಥೆ ಪ್ರೆಸ್ ಇನ್ಫರ್ಮೇಷನ್ ಬ್ಯೂರೋ(PIB), ಪಶ್ಚಿಮ ಬಂಗಾಳ ಸಿಎಂ ಆರೋಪ "ತಪ್ಪು ದಾರಿಗೆಳೆಯುವಂತಿಗೆ" ಎಂದು ಹೇಳಿದೆ.

ನೀತಿ ಆಯೋಗದ 9ನೇ ಆಡಳಿತ ಮಂಡಳಿ ಸಭೆಯಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ತನ್ನ ಮೈಕ್ ಸ್ವಿಚ್ ಆಫ್ ಮಾಡಲಾಗಿದೆ ಎಂದು ಹೇಳಿದ್ದಾರೆ. ಆದರೆ ಇದು ತಪ್ಪು ಹೇಳಿಕೆಯಾಗಿದೆ ಎಂದು ಪಿಐಬಿ ಎಕ್ಸ್ ನಲ್ಲಿ ಪೋಸ್ಟ್ ಮಾಡಿದೆ.

ವರ್ಣಮಾಲೆಯ ಪ್ರಕಾರ ಮಮತಾ ಬ್ಯಾನರ್ಜಿ ಅವರಿಗೆ ಮಧ್ಯಾಹ್ನದ ನಂತರ ಮಾತನಾಡಲು ಅವಕಾಶ ನೀಡಲಾಗಿತ್ತು. ಆದರೆ ಪಶ್ಚಿಮ ಬಂಗಳಾದ ಮುಖ್ಯಮಂತ್ರಿ ಕಚೇರಿಯ ಮನವಿಯ ಮೇರೆಗೆ 7ನೇಯವರಾಗಿ ಮಾತನಾಡಲು ಸೂಚಿಸಲಾಗಿತ್ತು. ಅವರು ಮಾತನಾಡುವ ಸಮಯ ಮಗಿದಿದೆ ಎಂದು ಗಡಿಯಾರ ತೋರಿಸಿತ್ತು. ಆದರೆ ಯಾವುದೇ ಬೆಲ್‌ ಬಾರಿಸಿಲ್ಲ ಎಂದು ಪಿಐಬಿ ಹೇಳಿದೆ.

ಈ ಮಧ್ಯೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು, ಮಮತಾ ಬ್ಯಾನರ್ಜಿ ಅವರು ತಮ್ಮ ಮೈಕ್ ಸ್ವಿಚ್ ಆಫ್ ಮಾಡಲಾಗಿದೆ ಎಂದು ಹೇಳಿರುವುದು "ಸಂಪೂರ್ಣ ಸುಳ್ಳು" ಮತ್ತು ಸಭೆಯಲ್ಲಿದ್ದ ಪ್ರತಿಯೊಬ್ಬ ಮುಖ್ಯಮಂತ್ರಿಗಳಿಗೂ "ಮಾತನಾಡಲು ಸರಿಯಾದ ಸಮಯವನ್ನು ನಿಗದಿಪಡಿಸಲಾಗಿದೆ" ಎಂದು ಹೇಳಿದ್ದಾರೆ.

''ನೀತಿ ಆಯೋಗ್ ಸಭೆಯಲ್ಲಿ ಸಿಎಂ ಮಮತಾ ಬ್ಯಾನರ್ಜಿ ಭಾಗವಹಿಸಿದ್ದರು. ನಾವೆಲ್ಲರೂ ಅವರ ಮಾತನ್ನು ಕೇಳಿದ್ದೇವೆ. ಪ್ರತಿಯೊಬ್ಬ ಸಿಎಂಗೂ ಸಮಯ ನಿಗದಿತ ಮಾಡಲಾಗಿತ್ತು ಮತ್ತು ಅದನ್ನು ಪ್ರತಿ ಟೇಬಲ್‌ನ ಮುಂದೆ ಇರುವ ಪರದೆಯ ಮೇಲೆ ಪ್ರದರ್ಶಿಸಲಾಯಿತು... ತಮ್ಮ ಮೈಕ್ ಅನ್ನು ಆಫ್ ಮಾಡಲಾಗಿದೆ ಎಂದು ಅವರು ಮಾಧ್ಯಮಗಳಲ್ಲಿ ಹೇಳಿದ್ದಾರೆ. ಆದರೆ ಇದು ಸಂಪೂರ್ಣ ಸುಳ್ಳು ಎಂದು ಸೀತಾರಾಮನ್ ಎಎನ್‌ಐಗೆ ತಿಳಿಸಿದ್ದಾರೆ.

“ಪ್ರತಿಯೊಬ್ಬ ಸಿಎಂಗೂ ಮಾತನಾಡಲು ಸಮಯಾವಕಾಶ ನೀಡಲಾಗಿದೆ... ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಮ್ಮ ಮೈಕ್ ಸ್ವಿಚ್ ಆಫ್ ಮಾಡಲಾಗಿದೆ ಎಂದು ಹೇಳಿರುವುದು ದುರದೃಷ್ಟಕರ, ಇದು ನಿಜವಲ್ಲ... ಸುಳ್ಳು ಹೇಳಿಕೆ ನೀಡುವ ಬದಲು ಸತ್ಯವನ್ನು ಮಾತನಾಡಬೇಕು" ಎಂದು ಕೇಂದ್ರ ಹಣಕಾಸು ಸಚಿವೆ ತಿರುಗೇಟು ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT